ದಾವಣಗೆರೆ | ಭತ್ತದಂತಹ ನೀರಾವರಿ ಬೆಳೆ ಬೆಳೆದರೆ ನಾವು ಜವಾಬ್ದಾರಲ್ಲ: ಜಲ ಸಂಪನ್ಮೂಲ ಇಲಾಖೆ

Date:

ಮಳೆ ಮತ್ತು ಜಲಾಶಯದಲ್ಲಿ ಸದ್ಯದ ನೀರಿನ ಕೊರತೆಯ ಕಾರಣದಿಂದ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಮತ್ತು 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅರೆ ನೀರಾವರಿ ಬೆಳೆಗಳಿಗೆ ಮಾತ್ರ ನೀರನ್ನು ಒದಗಿಸಲಾಗುವುದು. ಅರೆ ನೀರಾವರಿ ಬೆಳೆಯದೆ ಭತ್ತ, ಇನ್ನಿತರೆ ಬೆಳೆ ಬೆಳೆದರೆ ನಾವು ಜವಾಬ್ದಾರಲ್ಲ ಎಂದು ದಾವಣಗೆರೆಯ ಜಲ ಸಂಪನ್ಮೂಲ ಇಲಾಖೆ ರೈತರಿಗೆ ಸೂಚಿಸಿದೆ.

“ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಿ, ಬೇಸಿಗೆ ಬೆಳೆಗೆ ನೀರು ಉಳಿಸುವ ಸಲುವಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಾಗ ಮಳೆಯ ಪ್ರಮಾಣಕ್ಕನುಗುಣವಾಗಿ ಕಾಲುವೆಗಳಲ್ಲಿ ನೀರು ಹರಿಸಲಾಗುತ್ತಿದ್ದು, ಮುಂಗಾರು ಹಂಗಾಮಿನಲ್ಲಿ ರೈತರು ಹೆಚ್ಚು ನೀರುಣಿಸುವ ಭತ್ತದ ಬೆಳೆಯನ್ನು ಹೊರತುಪಡಿಸಿ ಅರೆ ನೀರಾವರಿ ಬೆಳೆಗಳನ್ನು ಬೆಳೆಯಬೇಕು” ಎಂದು ತಿಳಿಸಿದ್ದಾರೆ.

“ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶದ ಕಬ್ಬು 2,800 ಎಕರೆ, ತೋಟಗಾರಿಕೆ 182 ಎಕರೆ, ಅರೆ ನೀರಾವರಿ 20,792 ಎಕರೆ ಒಳಗೊಂಡಂತೆ ಒಟ್ಟು 23,774 ಎಕರೆ, ದೇವರಬೆಳಕೆರೆ ಪಿಕಪ್ ಯೋಜನೆಯ ಅಚ್ಚುಕಟ್ಟು ಪ್ರದೇಶದ ಕಬ್ಬು 500 ಎಕರೆ, ತೋಟಗಾರಿಕೆ 458 ಎಕರೆ, ಅರೆ ನೀರಾವರಿ 3,332 ಎಕರೆ ಒಳಗೊಂಡಂತೆ ಒಟ್ಟು 4,280 ಎಕರೆ ಹಾಗೂ ಆನವೇರಿ ಶಾಖಾ ನಾಲೆ ಅಚ್ಚುಕಟ್ಟು ಪ್ರದೇಶದ ಕಬ್ಬು 200 ಎಕರೆ, ತೋಟಗಾರಿಕೆ 121 ಎಕರೆ, ಅರೆ ನೀರಾವರಿ 5,998 ಎಕರೆ ಒಳಗೊಂಡಂತೆ ಒಟ್ಟು 6,319 ಮಾದರಿ ಬೆಳೆ ಬೆಳೆಯಲು ಹಾಗೂ ಈ ಬೆಳೆಗಳನ್ನು ಬೆಳೆಯದೆ ಭತ್ತ ಮತ್ತು ಇನ್ನಿತರೆ ಬೆಳೆ ಬೆಳೆದರೆ ಜಲ ಸಂಪನ್ಮೂಲ ಇಲಾಖೆಯು ಜವಾಬ್ದಾರಿಯಾಗುವುದಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮದ್ಯ ಮಾರಾಟಕ್ಕೆ ಎಂಎಸ್‌ಐಎಲ್‌ಗೆ ಅನುಮತಿ; ಮಹಿಳೆಯರ ಖಂಡನೆ

“ಬೆಳೆ ಪದ್ಧತಿಯನ್ನು ಉಲ್ಲಂಘಿಸುವವರು, ನೀರಾವರಿ ಕಾಲುವೆ ಹಾಗೂ ಕಟ್ಟಡಗಳನ್ನು ಜಖಂಗೊಳಿಸುವವರು, ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಬಳಸುವವರು ಮತ್ತು ಪಂಪ್ ಮಾಡಿ ಅನಧಿಕೃತವಾಗಿ ನೀರನ್ನು ಬಳಸಿಕೊಂಡು ನೀರಾವರಿ ಬೆಳೆಗಳನ್ನು ಬೆಳೆದು ನಿಯಮ ಉಲ್ಲಂಘನೆ ಮಾಡಿದಲ್ಲಿ ಪರಿಶೀಲಿಸಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ, ನಂ.3 ಭದ್ರಾ ನಾಲಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಿ ಎಸ್ ಪಟೇಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...