ದಾವಣಗೆರೆ | ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ ವಿರುದ್ಧ ಎದ್ದು ನಿಲ್ಲಬೇಕಿದೆ: ಈಶ್ವರಾನಂದ ಶ್ರೀ ಕರೆ

Date:

ಪ್ರಸ್ತುತದಲ್ಲಿಯೂ ನಡೆಯುತ್ತಿರುವ ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ, ಶೈಕ್ಷಣಿಕ ಅಸಮಾನತೆ ವಿರುದ್ಧ ಎದ್ದು ನಿಲ್ಲಬೇಕಿದೆ. ಸ್ವಾತಂತ್ರ್ಯ ಸ್ವಾಭಿಮಾನಿ, ಸಂಗೊಳ್ಳಿ ರಾಯಣ್ಣರ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಕಾಗಿನೆಲೆ ಶಾಖಾ ಮಠದ ಈಶ್ವರಾನಂದ ಶ್ರೀಗಳು ಕರೆ ನೀಡಿದರು.

ದಾವಣಗೆರೆ ನಗರದ ಜಿಲ್ಲಾ ವಿದ್ಯಾವರ್ಧಕ ಸಂಘದ ಬಯಲು ಸಭಾಂಗಣದಲ್ಲಿ ಜಿಲ್ಲೆಯ ಕುರುಬ ಸಮಾಜ ಸೇರಿದಂತೆ ವಿದ್ಯಾವರ್ಧಕ ಸಂಘ ಸದಸ್ಯರು, ಹಾಲುಮತ ಮಹಾಸಭಾ, ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸೇರಿದಂತೆ ಕುರುಬ ಸಮಾಜದ ವಿವಿಧ ಸಂಘಟನೆಗಳ ಭಕ್ತರು, ನೌಕರರು, ಉದ್ಯಮಿಗಳು, ದಾವಣಗೆರೆ ಸುತ್ತಮುತ್ತಲಿನ ಗ್ರಾಮಗಳ ರೈತರು ಸೇರಿದಂತೆ ಪಾಲ್ಗೊಂಡು ಶ್ರೀಗಳಿಗೆ ಭಕ್ತಿಪೂರ್ವಕವಾಗಿ ಅಕ್ಕಿ ಸಮರ್ಪಿಸಿದ ವೇಳೆ ಆಶೀರ್ವಚನ ನೀಡಿ ಮಾತನಾಡಿದರು.

“ಹೊಸದುರ್ಗ ತಾಲೂಕಿನ ಕೆಲ್ಲೋಡು ಶಾಖಾ ಮಠ ಮತ್ತು ಕಾಗಿನೆಲೆ ಪೀಠ ತಳ‌ಸಮುದಾಯದ, ಹಿಂದುಳಿದವರ ಸ್ವಾಭಿಮಾನದ ಸಂಕೇತ. ಈ ಭಾಗದ ಭಕ್ತರ ಭಕ್ತಿ ಮತ್ತು ಪ್ರೀತಿಯ ಸಂಕೇತವಾಗಿದೆ. ಭಕ್ತರಿದ್ದರೆ ಮಠ, ಪೀಠಗಳು. ಭಕ್ತರು ನೀಡುವ ಸೇವೆ ಅನನ್ಯ. ಸಮಾಜದ ಸಂಘಟಿತ ಒಗ್ಗೂಡಿಕೆಯು ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕ, ರಾಜಕೀಯ ಶಕ್ತಿ ಕೇಂದ್ರವೂ ಕೂಡ ಆಗಬೇಕಾದ ತುರ್ತು ಅಗತ್ಯವಿದೆ” ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶೋಷಿತ ಹಿಂದುಳಿದ ಕುರುಬ ಸಮುದಾಯ ತಮ್ಮಲ್ಲಿನ ಸಂಕುಚಿತ ಭಾವನೆಗಳನ್ನು ತೊಡೆದು ಹಾಕಬೇಕು. ಶೋಷಿತ ಹಿಂದುಳಿದ ಕುರುಬ ಸಮುದಾಯ ಇಡೀ ದೇಶದ ಇತರೆ ವರ್ಗದ ಸಮುದಾಯಗಳ ಜತೆ ಸೌಹಾರ್ದತೆಯಿಂದ ಒಗ್ಗೂಡಿ ಸಹಬಾಳ್ವೆಯಿಂದ ತಲೆಯೆತ್ತಿ ನಿಲ್ಲಬೇಕಾಗಿದೆ. ಕುರುಬ ಸಮಾಜದ ಮೇಲೆ ನಡೆಯುತ್ತಿರುವ ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ, ಶೈಕ್ಷಣಿಕ ಅಸಮಾನತೆ ವಿರುದ್ಧ ಎದ್ದು ನಿಲ್ಲಬೇಕಿದೆ. ಸ್ವಾತಂತ್ರ್ಯ ಸ್ವಾಭಿಮಾನಿ, ಸಂಗೊಳ್ಳಿ ರಾಯಣ್ಣರ ಆಶಯಗಳು ಈಡೇರಬೇಕಾಗಿದೆ. ಅದಕ್ಕಾಗಿ ನೀವೆಲ್ಲ ಒಗ್ಗೂಡಿ ಗುರು ಪೀಠಗಳನ್ನು ಗಟ್ಟಿಗೊಳಿಸಬೇಕು” ಎಂದರು.

“ಕಾಗಿನೆಲೆ ಕನಕ ಕೆಲ್ಲೂಡ್ ಶಾಖಾ ಮಠದಲ್ಲಿ ಏಳನೇ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ವಿಶಾಲ ಮಠದ ಅವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀಗಳ ಸುಸಜ್ಜಿತ ಮಠ, ಶೈಕ್ಷಣಿಕ ಕಟ್ಟಡಗಳು, ಏಷ್ಯಾದಲ್ಲಿಅತ್ಯಂತ ಬೃಹತ್ ಎತ್ತರದ 37 ಅಡಿಯ ಕನಕ ಶಿಲಾಮೂರ್ತಿ ಸೇರಿದಂತೆ ಬೃಹತ್ ಬೃಂದಾವನ ಇಂಥ ಅದ್ಭುತ ಪೂರ್ವ ಅಭಿವೃದ್ಧಿ ಕಾರ್ಯಗಳಿಗೆ ಭಕ್ತಾದಿಗಳಿಗೆ ನಿತ್ಯವೂ ಅನ್ನದಾನ ದಾಸೋಹಕ್ಕೆ ಇಡೀ ದಾವಣಗೆರೆ ಜಿಲ್ಲೆಯ ಭಕ್ತರು ದೇಣಿಗೆ ನೀಡುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ರೋಹಿತ್​ಗೆ ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

ಸಂದರ್ಭದಲ್ಲಿ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಹಾನಗರ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್, ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ಕುಂಬಳೂರು ಪಾಲಾಕ್ಷಪ್ಪ, ಕನಕ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪರಶುರಾಮ್, ದಾವಣಗೆರೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕುಂದುವಾಡ ಗಣೇಶಪ್ಪ, ಕಾರ್ಯದರ್ಶಿ ದೀಪಕ್ ಜೋಗಪ್ಪನವರ್, ಲೋಕಿಕೆರೆ ಸಿದ್ದಪ್ಪ, ಸತೀಶ್ ಕೊಳೇನಹಳ್ಳಿ, ಸಿದ್ದಲಿಂಗಪ್ಪ, ನಗರಸಭೆ ಮಾಜಿ ಸದಸ್ಯ ಎಲ್ಐಸಿ ನಿಂಗಣ್ಣ, ಸ್ವಾಭಿಮಾನಿ ಬಳಗದ ಪುರಂದರ ಲೋಕಿಕೆರೆ, ಹದಡಿ ಮಾಂತೇಶ್ ತ್ಯಾವಣಗಿ, ಮಹಾಂತೇಶ್, ಕೊಗನೂರು ಮಂಜು ಎಕ್ಕನಹಳ್ಳಿ ದ್ಯಾಮಣ್ಣ, ಅಣಬೇರು ಶಿವಮೂರ್ತಿ, ಮಂಜುನಾಥ್, ಆನೇಕಲ್ ವೀರಣ್ಣ, ಬಟ್ಟಲಕಟ್ಟೆ ಪರಶುರಾಮ್, ಶಿಕ್ಷಕ ಲೋಕಿಕೆರೆ ಶಂಕರ್ ಮೂರ್ತಿ, ಹದಡಿ ಬಸವರಾಜ್, ನಿವೃತ್ತ ಶಿಕ್ಷಕ ಶಿವಣ್ಣ, ಷಣ್ಮುಖಪ್ಪ, ಶಶಿಧರ್, ದೀಟೂರು ಚಂದ್ರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...