ದಾವಣಗೆರೆ | ಬಂಜಾರ ಸಮಾಜದ ಮೇಲೆ ಇತರ ಸಮುದಾಯದ ದಬ್ಬಾಳಿಕೆ; ಸೇವಾಲಾಲ್ ಸ್ವಾಮೀಜಿ ಖಂಡನೆ

Date:

ಬಂಜಾರ ಸಮಾಜದ ಮೇಲೆ ಇತರ ಸಮುದಾಯದವರು ದಬ್ಬಾಳಿಕೆ ನಡೆಯುತ್ತಿದ್ದಾರೆ. ಒತ್ತಾಯ ಪೂರ್ವಕವಾಗಿ ಮತಾಂತರ ಮಾಡಲಾಗುತ್ತಿದೆ. ಇತ್ತೀಚೆಗೆ, ಮತ್ತೊಂದು ಧರ್ಮದ ಯುವಕ ಬಂಜಾರ ಸಮಾಜದ ಯುವತಿಯನ್ನು ಪ್ರೀತಿಸಿ ವಿವಾಹವಾಗಿರುವ ಪ್ರಕರಣ ನಡೆದಿದೆ. ಈ ವಿವಾಹವನ್ನು ರದ್ದುಗೊಳಿಸಿ, ಯುವತಿಯರನ್ನು ರಕ್ಷಿಸಬೇಕೆಂದು ಬಂಜಾರ ಸಮಾಜದ ಶ್ರೀಸರ್ದಾರ್ ಸೇವಾಲಾಲ್ ಸ್ವಾಮೀಜಿ ಒತ್ತಾಯಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಳೆದ ಜನವರಿ 12ರಂದು ಡಿ.ಎಚ್.ಎಂ ಚರ್ಚ್ ನಲ್ಲಿ ಪಾದ್ರಿಯಾಗಿರುವ ಬಿ.ರಾಜಶೇಖರ್ ಎಂಬುವವರು ಮತಾಂತರ ಮಾಡುವ ಉದ್ದೇಶದಿಂದ ಬಂಜಾರ ಸಮುದಾಯದ ಯುವತಿ ಜ್ಯೋತಿಬಾಯಿ ಅವರನ್ನು ವಿವಾಹವಾಗಿದ್ದಾರೆ. ಮದುವೆ ನೊಂದಣಿಗೆ ಸಲ್ಲಿಸಿರುವ ಎಫ್‌ (F) ನಮೂನೆಯಲ್ಲಿ ಬಿ.ರಾಜಶೇಖರ್ ಕುಟುಂಬದವರ ಸಹಿ ಇಲ್ಲ ಹಾಗೂ ಅವರ ಒಪ್ಪಿಗೆಯೂ ಇಲ್ಲ. ಈ ವಿವಾಹದ ಮುಖ್ಯ ಉದ್ದೇಶ ಮತಾಂತರ ಮಾಡುವುದಾಗಿದೆ” ಎಂದು ಆರೋಪಿಸಿದರು.

ಬಂಜಾರ ಸಮುದಾಯದ ಯುವತಿ ಜ್ಯೋತಿಬಾಯಿ ಹಾಗೂ ಆಕೆಯ ಕುಟುಂಬದವರನ್ನು ಹೆದರಿಸಿ ಬೆದರಿಸಿ ವಿವಿಧ ಆಸೆ ಆಮೀಷಗಳನ್ನು ತೋರಿಸಿ ಸುಮಾರು ಐದು ವರ್ಷಗಳಿಂದ ಯುವತಿಯನ್ನು ಹಾಗೂ ಅವರ ಕುಟುಂಬದವರನ್ನು ಮತಾಂತರ ಮಾಡಿ ಮದುವೆಗೆ ಒಪ್ಪಿಸಲು ಪ್ರಯತ್ನ ಮಾಡಲಾಗಿದೆ. ಬಿ.ರಾಜಶೇಖರ್ ತಮ್ಮ ವೈಯಕ್ತಿಕ ದಾಖಲಾತಿಯನ್ನು ನೈಜವಾಗಿ ತೋರಿಸದೆ ಸಮಾಜದ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಆದ್ದರಿಂದ ಈ ವಿವಾಹದ ನೋಂದಣಿಯನ್ನು ರದ್ದುಪಡಿಸಬೇಕು ಹಾಗೂ ತಪ್ಪು ಮಾಹಿತಿ ನೀಡಿ ವಂಚಿಸಿದ ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ ಅವರು, ಒತ್ತಾಯವಾಗಿ ಮತಾಂತರ ಮಾಡಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗೋಷ್ಠಿಯಲ್ಲಿ ರವೀಂದ್ರ ನಾಯ್ಕ್, ಎನ್.ಹನುಮಂತ ನಾಯ್ಕ್, ಲಿಂಗರಾಜನಾಯ್ಕ್, ಲಿಂಬ್ಯಾನಾಯ್ಕ್, ರಮೇಶ್ ರವಿನಾಯ್, ಮಂಜಾನಾಯ್ಕ್, ಸತೀಶ್ ಪೂಜಾರಿ, ಮುರುಗೇಶ್ ಹುಲಿಕಟ್ಟೆ ಹಾಗೂ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...