ದಾವಣಗೆರೆ | ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಬಲಿ

Date:

ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದೆ. ಹಲವಾರು ನಗರಗಳಲ್ಲಿ ಬೀದಿ ನಾಯಿಗಳನ್ನು ನಿಯಂತ್ರಿಸಲು ಪಾಲಿಕೆಗಳು ಹೆಣಗಾಡುತ್ತಿವೆ. ಈ ನಡುವೆ ಗ್ರಾಮೀಣ ಭಾಗದಲ್ಲಿಯೂ ನಾಯಿಗಳ ಹಾವಳಿ ಹೆಚ್ಚಾಗಿದ್ದು, ದಾವಣಗೆರೆ ಜಿಲ್ಲೆಯ ಗ್ರಾಮವೊಂದರಲ್ಲಿ ನಾಳಿಗಳ ದಾಳಿಯಿಂದ 15 ಕುರಿಗಳು ಸಾವನ್ನಪ್ಪಿವೆ.

ಜಿಲ್ಲೆಯ ಕಂಸಾಗರ ಗ್ರಾಮದಲ್ಲಿ ಕುರಿ ಹಿಂಡಿನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. 15 ಕುರಿಗಳ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ. ಗಾಯಗೊಂಡಿರುವ ಕುರಿಗಳಿಗೆ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಕುರಿಗಳನ್ನು ಕಳೆದುಕೊಂಡಿರುವ ರೈತ ತಿಮ್ಮಣ್ಣ ಕಂಗಾಲಾಗಿದ್ದಾರೆ. ಅವರು ನೂರಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಕುರಿ ಸಾಕಾಣಿಕೆಯಿಂದಲೇ ಜೀವನ ನಡೆಸುತ್ತಿದ್ದಾರೆ. ಈಗ, ಬೀದಿ ನಾಯಿಗಳ ದಾಳಿಯಿಂದ ಕುರಿಗಳನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸಿದ್ದಾರೆ. ಅಲ್ಲದೆ, ಉಳಿದ ಕುರಿಗಳ ಮೇಲೆ ನಾಯಿಗಳು ದಾಳಿ ಮಾಡಬಹುದೆಂಬ ಆತಂಕದಲ್ಲಿದ್ದಾರೆ. ಅವರಿಗೆ ಜಿಲ್ಲಾಡಳಿತ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮದ ಮುಖಂಡರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...