ದಾವಣಗೆರೆ | 32 ಚೆಕ್ ಪೋಸ್ಟ್, ದಾಖಲೆ ರಹಿತ ನಗದು, ಚಿನ್ನ, ಅಕ್ರಮ ಮದ್ಯದ ಮೇಲೆ ನಿಗಾ: ಡಿಸಿ

Date:

ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕವಾಗಿ ಹಾಗೂ ಮುಕ್ತವಾಗಿ ನಡೆಸಲು ಗಡಿಭಾಗ ಸೇರಿದಂತೆ ದಾವಣಗೆರೆ ಜಿಲ್ಲೆಯಲ್ಲಿ 32 ಕಡೆ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಶಾಮನೂರು ಕ್ರಾಸ್ ಚೆಕ್‍ಪೋಸ್ಟ್, ಹರಿಹರ ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದ ಅವರು, ಪ್ರತಿ ಚೆಕ್‍ಪೋಸ್ಟ್‌ಗಳಲ್ಲಿ ಮೂರು ಜನ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ದಿನದ 24 ಗಂಟೆಯೂ ಕಾವಲು ಇರುವ ಮೂಲಕ ಅಕ್ರಮವಾಗಿ ಸಾಗಣೆ ಮಾಡುವ ವಸ್ತುಗಳು, ಮದ್ಯ, ನಗದು ಮತ್ತು ಇನ್ನಿತರೆ ಬಂಗಾರದ ವಸ್ತುಗಳ ಮೇಲೆ ನಿಗಾ ಇಡುವರು ಎಂದರು.

ಆ ಮಾರ್ಗದಲ್ಲಿ ಹೋಗುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಚುನಾವಣಾ ಅಕ್ರಮಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಸ್ತುಗಳನ್ನು ಸಾಗಣೆ ಮಾಡಲು ಅಭ್ಯಂತರ ಇರುವುದಿಲ್ಲ, ಆದರೆ ಸಂಬಂಧಿಸಿದ ವಸ್ತುಗಳು, ಹಣ, ಯಾವುದೇ ಇದ್ದಲ್ಲಿ ದಾಖಲೆಗಳು ಅತ್ಯವಶ್ಯಕವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಚೆಕ್‍ಪೋಸ್ಟ್ಗಳಲ್ಲಿ ಹಾಜರುಪಡಿಸುವ ಮೂಲಕ ಸಿಬ್ಬಂದಿಗೆ ಸಹಕರಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಣ್ಗಾವಲಿಗಾಗಿ ಸ್ಥಾಪಿಸಿರುವ ಚೆಕ್‍ಪೋಸ್ಟ್‍ಗಳಲ್ಲಿ ಸಿಬ್ಬಂದಿಗಳು ಸರಿಯಾಗಿ ತಮ್ಮ ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯವನ್ನು ನಿರ್ವಹಿಸುವುದರೊಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ನಡೆದುಕೊಂಡು ಎಲ್ಲಾ ವಾಹನಗಳ ತಪಾಸಣೆ ಮಾಡುವ ಮೂಲಕ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಸೂಚನೆ ನೀಡಿದರು.

ಚೆಕ್‍ಪೋಸ್ಟ್‍ಗಳ ವಿವರ: 103-ಜಗಳೂರು ವಿಧಾನಸಭಾ ಕ್ಷೇತ್ರ: ಬಿದರಕೆರೆ ಹತ್ತಿರ, ಗಡಿಮಾಕುಂಟೆ, ಅರಸೀಕೆರೆ ಠಾಣೆ ವ್ಯಾಪ್ತಿಯ ಕುರೆಮಾಗನಹಳ್ಳಿ ಹತ್ತಿರ, ಚಳ್ಳಕೆರೆ ರಸ್ತೆ ಮುಸ್ಟೂರು ಹತ್ತಿರ, ಬಿಳಿಚೋಡು ವ್ಯಾಪ್ತಿಯ ಕನಾನಕಟ್ಟೆ ಎನ್.ಎಚ್. 13 ಹತ್ತಿರ. 105-ಹರಿಹರ ವಿಧಾನಸಭಾ ಕ್ಷೇತ್ರ: ಹರಿಹರ ರಾಘವೇಂದ್ರ ಮಠದ ಹತ್ತಿರ, ಹಲಸಬಾಳು ಕ್ರಾಸ್, ಕುರುಬರಹಳ್ಳಿ ಹತ್ತಿರ, ನಂದಿಗುಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

106-ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ: ಭೂಮಿಕ ನಗರ, ಲೋಕಿಕೆರೆ ಕ್ರಾಸ್, ಕಲ್ಪನಹಳ್ಳಿ ಸರ್ಕಲ್(ಮಾಗಾನಹಳ್ಳಿ), ಎನ್.ಎಚ್-4 ಶಾಮನೂರು ಕ್ರಾಸ್, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಪ್ ಹತ್ತಿರ.

107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಬಾಡ ಕ್ರಾಸ್, ಬೇತೂರು ರೋಡ್, ಕೊಂಡಜ್ಜಿ ರಸ್ತೆ, ಸಾಯಿ ಇಂಟರ್ ನ್ಯಾಷನಲ್ ಹೊಟೇಲ್ ಬಳಿ.

108-ಮಾಯಕೊಂಡ ವಿಧಾನಸಭಾ ಕ್ಷೇತ್ರ: ಹೆಬ್ಬಾಳ್ ಟೋಲ್ ಗೇಟ್, ಕಾರಿಗನೂರು ಕ್ರಾಸ್, ಎಚ್.ಬಸಾಪುರ.

109-ಚನ್ನಗಿರಿ ವಿಧಾನಸಭಾ ಕ್ಷೇತ್ರ: ಜೋಳದಾಳ್, ಮಾವಿನಕಟ್ಟೆ, ತಾವರೆಕೆರೆ, ಮಾದಾಪುರ, ಸಂತೇಬೆನ್ನೂರು.

110-ಹೊನ್ನಾಳಿ ವಿಧಾನಸಭಾ ಕ್ಷೇತ್ರ: ನ್ಯಾಮತಿ ಪೊಲೀಸ್ ಠಾಣೆಯ ಟಿ.ಜಿ.ಹಳ್ಳಿ ಕ್ರಾಸ್, ಸವಳಂಗ, ಹೊಳೆಹರಳಹಳ್ಳಿ ಕ್ರಾಸ್, ಹೊನ್ನಾಳಿ ಪೊಲೀಸ್ ಠಾಣೆಯ ಗೊಲ್ಲರಹಳ್ಳಿ ಕ್ರಾಸ್, ಕುಳಗಟ್ಟೆ ಕ್ರಾಸ್, ಜೀನಹಳ್ಳಿ ಕ್ರಾಸ್ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...