ದಾವಣಗೆರೆ | ಫೆಬ್ರವರಿಯಲ್ಲಿ ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ 38ನೇ ಸಮ್ಮೇಳನವು ಫೆಬ್ರವರಿ 3 ಮತ್ತು 4ರಂದು ನಡೆಯಲಿದೆ ಎಂದು ಸಮ್ಮೇಳನದ ಗೌರವ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. “ಸಮ್ಮೇಳನಕ್ಕೆ ಬೇಕಾದ ಎಲ್ಲಾ ಸಿದ್ಧತೆ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ವಸತಿ ವ್ಯವಸ್ಥೆ, ಊಟದ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ಸಮ್ಮೇಳನ ಯಶಸ್ವಿಗೆ ಶ್ರಮಿಸೋಣ” ಎಂದು ಜಿಲ್ಲೆಯ ಪತ್ರಕರ್ತರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್ ಮಾತನಾಡಿ, “ಸಮ್ಮೇಳನದ ತಯಾರಿಗೆ ಈಗಾಗಲೇ ಮೂರು ತಂಡಗಳನ್ನು ರಚಿಸಲಾಗಿದೆ. ಸರ್ಕಾರಿ ವ್ಯಾಪ್ತಿಯಲ್ಲಿ ಬರುವ ಗೆಸ್ಟ್ ಹೌಸ್‌ನಲ್ಲಿ 45 ರಿಂದ 50 ರೂಂಗಳನ್ನು ವಿಐಪಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಪಟ್ಟಿ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸೇರಿದಂತೆ ಬಾಂಗ್ಲಾ, ಬರ್ಮಾ, ಶ್ರೀಲಂಕಾದಿಂದ ಅತಿಥಿಗಳು ದಾವಣಗೆರೆ ಸಮ್ಮೇಳನಕ್ಕೆ ಬರಲಿದ್ದಾರೆ. ಅಲ್ಲದೇ ಸಾವಿರಾರು ಪ್ರತಿನಿಧಿಗಳು ಆಗಮಿಸಲಿದ್ದಾರೆ. ನಾವು ಮನೆಗೆ ಬಂದ ಅತಿಥಿಗಳಿಗೆ ಹೇಗೆ ಸ್ವಾಗತ ನೀಡುತ್ತೆವೆಯೋ ಅದೇ ರೀತಿಯಾಗಿ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳನ್ನು ಬರಮಾಡಿಕೊಂಡು ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಮೂಲಕ ನೆನಪಿನಲ್ಲಿ ಉಳಿಯುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, “ಮೈಸೂರು, ಮಂಗಳೂರು, ಕಲ್ಬುರ್ಗಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ನಡೆದ ಸಮ್ಮೇಳನಗಳು ಒಂದಕ್ಕಿಂತ ಒಂದು ಭಿನ್ನವಾಗಿ ನಡೆದು ನೆನಪಿನಲ್ಲಿ ಉಳಿಯುವಂತಹ ಸಮ್ಮೇಳನ ನಡೆದಿವೆ. ಅದೇ ರೀತಿಯಲ್ಲಿ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಮೂರು ದಶಕಗಳ ನಂತರ ನಡೆಯುವ ಸಮ್ಮೇಳನ ಕೂಡ ನನೆಪಿನಲ್ಲಿ ಉಳಿಯುವಂತೆ ಮಾಡ ಬೇಕಾಗಿದೆ. ಎಲ್ಲರ ಸಹಕಾರ ಅವಶ್ಯವಾಗಿದೆ” ಎಂದರು.

ಸಭೆಯಲ್ಲಿ ಎಸ್ಪಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಸಿಇಓ ಸುರೇಶ್ ಇಟ್ನಾಳ್, ಎಡಿಸಿ ಪಿ.ಎನ್.ಲೋಕೇಶ್, ಮಹಾನಗರ ಪಾಲಿಕೆ ಆಯುಕ್ತ ರೇಣುಕಾ, ದೂಡಾ ಆಯುಕ್ತ ಬಸವನಗೌಡ ಕೊಟ್ಟೂರು, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಸೀಲ್ದಾರ್ ಅಶ್ವತ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್, ಸ್ಮಾರ್ಟ್‌ ಸಿಟಿ ಎಂಡಿ ವೀರೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರವಿಚಂದ್ರ, ವಾರ್ತಾ ಅಧಿಕಾರಿ ಧನಂಜಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಬಿ.ಲೋಕೇಶ್, ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಮಂಜು ನಾಥ್ ಏಕಬೋಟೆ, ಪ್ರಧಾನ ಕಾರ್ಯ ದರ್ಶಿ ಎ.ಫಕೃದ್ದೀನ್. ಖಜಾಂಚಿ ಎನ್.ವಿ.ಬದರಿನಾಥ್, ಕಾರ್ಯದರ್ಶಿ ಜೆ.ಎಸ್.ವೀರೇಶ್, ಉಪಾಧ್ಯಕ್ಷ ಎಚ್. ಎನ್.ಪ್ರಕಾಶ್, ರಾಜ್ಯ ಸಮಿತಿ ಸದಸ್ಯ ಕೆ.ಚಂದ್ರಪ್ಪ, ರಾಷ್ಟ್ರೀಯ ಸಮಿತಿ ಸದಸ್ಯ ಎಸ್.ಕೆ.ಒಡೆಯರ್. ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ.ಏಕಾಂತಪ್ಪ, ಪ್ರಧಾನ ಕಾರ್ಯದರ್ಶಿ ಸಿ.ವರದರಾಜ್, ಮಧು ನಾಗರಾಜ್, ಕಾರ್ಯದರ್ಶಿ ಎ.ಎನ್.ನಿಂಗಪ್ಪ, ಹಿರಿಯ ಪತ್ರಕರ್ತ ಬಿ.ಎನ್.ಮಲ್ಲೇಶ್, ಪಿಆ‌ರ್ ಒ ಡಿ.ರಂಗನಾಥ್ ರಾವ್, ಸಂಯುಕ್ತ ಕರ್ನಾಟಕ ಸ್ಥಾನಿಕ ಸಂಪಾದಕ ಮಂಜುನಾಥ್, ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ, ವಿಜಯವಾಣಿ ಸ್ಥಾನಿಕ ಸಂಪಾದಕ ಎಂ.ಬಿ.ನವೀನ್, ಹಿರಿಯ ಪತ್ರಕರ್ತರಾದ ಎಚ್.ಬಿ.ಮಂಜುನಾಥ್, ಬಾ.ಮ.ಬಸವರಾಜಯ್ಯ, ಮಂಜು ಯಳನಾಡು, ಬಸವರಾಜ ದೊಡ್ಡಮನಿ, ನಾಗರಾಜ ಬಡದಾಳ್, ತಾರನಾಥ್, ರಮೇಶ್ ದಾರ್ ಸೇರಿದಂತೆ ಪತ್ರಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...