ದಾವಣಗೆರೆ | ಮೋದಿ ಸುಳ್ಳಿನ ಕಂತೆ ಹೊತ್ತು ತರುತ್ತಿದ್ದಾರೆ: ಎಎಪಿ

Date:

2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಯ ಪ್ರಚಾರದಲ್ಲಿ ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿದ್ದ ಕಪ್ಪು ಹಣವನ್ನು ಭಾರತಕ್ಕೆ ತಂದರೆ ಪ್ರತಿ ಭಾರತೀಯನಿಗೆ 15 ಲಕ್ಷ ಕೊಡಬಹುದು ಎಂದು ಹೇಳಿದ್ದು, ಯಾಕೆ ತರಲಿಲ್ಲ. ಪ್ರತೀ ವರ್ಷ 2ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಭರವಸೆ ನೀಡಿದ್ದು, ಬದಲು ನಿರುದ್ಯೋಗ ಪ್ರಮಾಣವು ಪ್ರಮಾಣವು ಹೆಚ್ಚಾಗಿದೆ. ರೈತರ ಆದಾಯ ದ್ವಿಗುಣ ಆಗಲಿಲ್ಲ ಎಂದು ಆರೋಪಿಸಿದರು.

ಭೇಟಿ ಪಡಾವೋ, ಭೇಟಿ ಬಚಾವೋ ಎಂದು ಹೇಳುವ ನೀವು ದೇಶದ ಹೆಣ್ಣು ಮಕ್ಕಳ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿಲ್ಲ. ಬ್ಲ್ಯಾಕ್ ಮನಿ ಇದೆ ಎಂದು ನೋಟ್ ಬ್ಯಾನ್ ಮಾಡಿದ ನಂತರ ಎಷ್ಟು ಬ್ಲಾಕ್ ಮನಿ ಇದೆ ಅಂತಾ ಬಹಿರಂಗ ಪಡಿಸಲು ಮುಂದಾಗಲಿಲ್ಲ. ವಂಶ ಪಾರಂಪರ್ಯವಾಗಿ ರಾಜಕೀಯ ಮಾಡಲು ಬಿಡುವುದಿಲ್ಲ ಎಂದು ಹೇಳಿ. ನಿಮ್ಮ ಪಕ್ಷದಲ್ಲೇ ವಂಶ ಪಾರಂಪರ್ಯ ಪದ್ಧತಿ ಮುಂದುವರೆಸುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ನಿರಾಶ್ರಿತ ನಾಗರೀಕರಿಗೆ ಮನೆಗಳು ನಿರ್ಮಾಣ ಆಗಲಿಲ್ಲ. ಚುನಾವಣಾ ಬಾಂಡ್ ನೆಪದಲ್ಲಿ ಭ್ರಷ್ಟಾಚಾರ ಬೆಳೆಯಲು ಕಾರಣವಾಗಿದ್ದೀರಿ. ಹಸಿವು ಮುಕ್ತ ರಾಷ್ಟ್ರಗಳ ಪೈಕಿ ಭಾರತ 111ನೇ ಸ್ಥಾನಕ್ಕೆ ಬಂದಿದೆ. ಇದೇನಾ ನಿಮ್ಮ ಶ್ರಮದ ಸಾಧನೆ. ಮಹಾದಾಯಿ, ಭದ್ರಾ ಮೇಲ್ದಂಡೆ ಯೋಜನೆಗೆ ನೀಡಿದ ಭರವಸೆಗಳೇ ಸುಳ್ಳಾಗಿವೆ. ಇದೇ ರೀತಿ ಎಲ್ಲಾ ರೀತಿಯ ಸುಳ್ಳುಗಳನ್ನು ಹೇಳುತ್ತಾ ಈ ಬಾರಿಯೂ ದೇಶದ ಜನತೆಯನ್ನು ವಂಚಿಸಲು ಮುಂದಾಗಿದ್ದಾರೆ ಆಕ್ರೋಶ ಎಂದು ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಆದಿಲ್ ಖಾನ್, ಸಿ.ಆರ್. ಅರುಣ್ ಕುಮಾರ್, ಧರ್ಮನಾಯ್ಕ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...