ದಾವಣಗೆರೆ | ಆಸ್ಪತ್ರೆ ಎದುರು ಪ್ರದರ್ಶನಕ್ಕಷ್ಟೇ ನಿಂತಿದೆ ಆ್ಯಂಬುಲೆನ್ಸ್‌

Date:

ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ‘108’ ಆ್ಯಂಬುಲೆನ್ಸ್‌ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ ‘108’ ಆ್ಯಂಬುಲೆನ್ಸ್‌ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ‘108’ ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು ರೋಗಿಗಳ ಸೇವೆಗೋ? ಅಥವಾ ಆವರಣದಲ್ಲಿ ನಿಲ್ಲಿಸಿ ಪ್ರದರ್ಶನ ಮಾಡುವುದಕ್ಕೋ? ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಸರ್ಕಾರಿ ಆಸ್ಪತ್ರೆ ಬಳಿ 108 ಅಂಬ್ಯುಲೆನ್ಸ್ ಕಳೆದ 25 ದಿನಗಳಿಂದ ಕೆಟ್ಟು ನಿಂತಿದೆ. ಪರಿಣಾಮವಾಗಿ ರೋಗಿಗಳು, ಗರ್ಭಿಣಿಯರು ತುರ್ತು ಸಂದರ್ಭಗಳಲ್ಲಿ 108ಕ್ಕೆ ಕರೆ ಮಾಡಿದರೆ ಅಂಬ್ಯುಲೆನ್ಸ್ ಸಿಗುತ್ತಿಲ್ಲ ಎಂದು ರೋಗಿಗಳು ಮತ್ತು ಅವರ ಪಾಲಕರು ದೂರಿದ್ದಾರೆ.

ಕಷ್ಟಕಾಲದಲ್ಲಿ ರೋಗಿಗಳಿಗೆ ನೆರವಿಗೆ ನಿಲ್ಲಬೇಕಾದ ‘108’ ಆ್ಯಂಬುಲೆನ್ಸ್, ರೋಗಿಗಳಿಗೆ ಉಪಯೋಗವಾಗುದಕ್ಕಿಂತಲೂ ಕೆಟ್ಟು ನಿಲ್ಲುವುದೇ ಹೆಚ್ಚಾಗಿದೆ. ಆಸತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ ಅಥವಾ ಆ್ಯಂಬುಲೆನ್ಸ್ ನಿರ್ವಹಣೆ ಮಾಡುವ ಅಧಿಕಾರಿಗಳ ನಿರ್ಲಕ್ಷದಿಂದಾಗಿ, ಸೂಕ್ತ ನಿರ್ವಹಣೆ ಇಲ್ಲದೆ ಆ್ಯಂಬುಲೆನ್ಸ್ ಸಾರ್ವಜನಿಕರ ಬಳಕೆಗೆ ದೊರೆಯದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 25 ದಿನಗಳಿಂದ 108 ಅಂಬುಲೆನ್ಸ್ ವಾಹನದ ಬ್ಯಾಟರಿ ಹಾಳಾಗಿದೆ. ಏಜೆನ್ಸಿಯವರಾಗಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾಗಲೀ ಆ ಬಗ್ಗೆ ಗಮನ ಕೊಡುತ್ತಿಲ್ಲ. ಪರಿಣಾಮ ತಾಲೂಕಿನ ಮಹಿಳೆಯರು, ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಹರಿಹರ ತಾಲೂಕಿನ ಜನರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...