ದಾವಣಗೆರೆ | ಬರಿದಾಗುವ ಆತಂಕದಲ್ಲಿದೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ

Date:

ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ ಭಾಗದ ಜನರ ಜೀವನಾಡಿ ಶಾಂತಿಸಾಗರ (ಸೂಳೆಕೆರೆ) ಕೂಡ ಬರಿದಾಗುತ್ತಿದ್ದು, ನೀರಿನ ಅಭಾವ ಹೆಚ್ಚಾಗಿದೆ.

ಸ್ಥಳೀಯರು ತಮ್ಮ ತೋಟ ಉಳಿಸಿಕೊಳ್ಳಲೂ ಕೆರೆಯ ನೀರಿಗೆ ಮುಗಿಬಿದ್ದಿದ್ದಾರೆ. ಇದರಿಂದ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂಬ ಖ್ಯಾತಿಯ ಶಾಂತಿಸಾಗರ ಕೆರೆ ಶೀಘ್ರದಲ್ಲಿ ಬರಿದಾಗುವ ಆತಂಕ ಎದುರಾಗಿದೆ.

ರೈತರು ತೋಟಗಳನ್ನು ಉಳಿಸಿಕೊಳ್ಳಲು ಶಾಂತಿಸಾಗರದ ಹಿನ್ನೀರು ಭಾಗದಲ್ಲಿ ನೂರಾರು ಪಂಪ್‌ಸೆಟ್‌ಗಳನ್ನು ಅಳವಡಿಸಿ, ನಿರಂತರ ತೋಟಗಳಿಗೆ ನೀರು ಹಾಯಿಸುತ್ತಿದ್ದಾರೆ. ಅಂತರ್ಜಲ ಕುಸಿದು, ಕೊಳವೆಬಾವಿಗಳು ಬರಿದಾಗಿರುವ ರೈತರು ಈ ಕೆರೆಯ ನೀರನ್ನೇ ಅವಲಂಭಿಸುವುದು ಅನಿವಾರ್ಯವಾಗಿದೆ. ಲಕ್ಷಾಂತರ ರೂ. ಖರ್ಚುಮಾಡಿ ಬೆಳೆದ ತೋಟ ನೀರಿಲ್ಲದೆ ಒಣಗುತ್ತಿರುವುದನ್ನು ನೋಡಲು ಚಿಂತೆಯಾಗುತ್ತದೆ ಎಂದು ತಮ್ಮ ಅಳಲು ತೋಡಿಕೊಳ್ಳುವ ಇಲ್ಲಿನ ರೈತರು. ಬೆಳೆ ಉಳಿಸಿಕೊಳ್ಳಲು ರಾತ್ರಿ-ಹಗಲು ಕೆರೆಯಿಂದ ನೀರನ್ನು ಹಾಯಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಂಡದಹಳ್ಳಿ, ಹಿರೇಉಡ, ದೇವರಹಳ್ಳಿ, ಚೆನ್ನಾಪುರ, ಕಗತೂರು, ಬುಳುಸಾಗರ, ಮಂಟರಘಟ್ಟ, ಹಟ್ಟಿ, ಆಕಳಕಟ್ಟೆ, ಇಟಗಿ, ಚಿಕ್ಕದೇವರಹಳ್ಳಿ, ಬನ್ನಿಹಟ್ಟಿ, ಗುಳ್ಳಳ್ಳಿ ಗ್ರಾಮಗಳ ಸುಮಾರು 200 ಪಂಪ್‌ಸೆಟ್‌ಗಳು ಕೆರೆಯ ಹಿನ್ನೀರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇರುವ ಕೊಳವೆಬಾವಿಗಳು ಬತ್ತಿವೆ. ಹೊಸದಾಗಿ ಕೊರೆಯಿಸಿರುವ ಕೊಳವೆ‌ಬಾವಿಗಳಲ್ಲಿ ನೀರು ಬರುತ್ತಿಲ್ಲ. ಕೆರೆಯ ಹಿನ್ನೀರಿಗೆ ಮೋಟಾರ್ ಅಳವಡಿಸಿಕೊಂಡು ತೋಟ ಉಳಿಸಿಕೊಳ್ಳುತ್ತಿದ್ದೇವೆ. ಭದ್ರಾ ನಾಲೆಯ ನೀರನ್ನು ಶಾಂತಿಸಾಗರಕ್ಕೆ ಬಿಟ್ಟರೆ, ಇದರಿಂದ ಕೊಂಚ ನಿರಾತಂಕವಾಗುತ್ತದೆ ಎನ್ನುತ್ತಾರೆ ರೈತರು.

ಸಂತೇಬೆನ್ನೂರು ಸೇರಿದಂತೆ ಚನ್ನಗಿರಿ ತಾಲೂಕಿನ ನೂರಾರು ಗ್ರಾಮಗಳಿಗೆ ಕುಡಿಯುವ ನೀರಿನ ಆಗರ ಈ ಕೆರೆ. ಚಿತ್ರದುರ್ಗ, ಹೊಳಲ್ಕೆರೆ ಭಾಗಗಳಿಗೂ ಇಲ್ಲಿಂದ ಕುಡಿಯುವ ನೀರು ಪೂರೈಕೆಯಾಗುತ್ತದೆ. ಸದ್ಯ ಸಂಗ್ರಹದಲ್ಲಿರುವ ನೀರು 30 ದಿನಗಳಿಗಾಗೂವುದು ಅನುಮಾನ. ಜೂನ್‌ವರೆಗೆ ಕುಡಿಯುವ ನೀರು ಪೂರೈಸಲು 0.54 ಟಿಎಂಸಿ ಅಡಿ ನೀರಿನ ಅವಶ್ಯಕತೆ ಇದೆ. ಭದ್ರಾ ನಾಲೆಯಿಂದ ಕೆರೆಗೆ ನೀರು ಹರಿಸಿದರೆ ಕುಡಿಯುವ ನೀರು ಸಿಗಲಿದೆ. ಇಲ್ಲವಾದರೆ ಕುಡಿಯುವ ನೀರಿಗಾಗಿ ತೀವ್ರ ಸಂಕಷ್ಟ ಅನುಭವಿಸುವ ದಿನಗಳು ಎದುರಾಗಲಿವೆ ಎನ್ನುತ್ತಾರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಬಿಎನ್‌ ಲೋಹಿತ್ ಮಾದ್ಯಮದೆದುರು ಆತಂಕ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...