ದಾವಣಗೆರೆ | ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಬಂದ್

Date:

ಹಲವು ದಶಕಗಳಿಂದ ಹೋರಾಟ ಮಾಡಿದ್ದರೂ ಕೂಡ ಇನ್ನೂ ನೀರು ಬಾರದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ನಡೆಯಬೇಕು, ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಿ, ಜಗಳೂರು ತಾಲೂಕಿಗೆ ನೀರು ಹರಿಸಬೇಕು ಎಂದು ವಿವಿಧ ಸಂಘಟನೆಗಳು ಬಂದ್‌ಗೆ ಕರೆಕೊಟ್ಟಿದ್ದವು.

ಬಂದ್ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಪ್ರತಿಭಟನೆಗೆ ಸ್ಥಳೀಯರು ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅತೀ ಕನಿಷ್ಠ ಮಳೆಯಿಂದ ಸತತ ಹಲವಾರು ವರ್ಷಗಳಿಂದ ಬರ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ರೈತರು ಒಂದು ವರ್ಷ ಸಹ ಬೆಳೆಗಳನ್ನು ಬೆಳೆದಿಲ್ಲ. ಪಂಪ್ ಸೆಟ್ ಹಾಗೂ ಬಾವಿಗಳಲ್ಲಿ ಅಂತರ್ಜಲ ಕುಸಿತ ಕಂಡಿದ್ದು, ನೀರಾವರಿ ಆಶ್ರಿತ ಬೆಳೆ ತೋಟಗಳು ಒಣಗುತ್ತಿವೆ. ಇನ್ನಾದರೂ ಭದ್ರಾ ಮೇಲ್ದಂಡೆ ನೀರು ಬರುತ್ತದೆ ಎಂದು ಕನಸು ಕಂಡಿದ್ದ ರೈತರಿಗೆ ಸರ್ಕಾರಗಳು ಪೋಳ್ಳು ಭರವಸೆಯನ್ನು ನೀಡಿವೆ ಎಂದು ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತ ಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಆದರೆ, ಅನುದಾನ ಬಿಡುಗಡೆ ಮಾಡಿಲ್ಲ. ನೆನೆಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸಿ ರೈತರ ಜೀವ ಉಳಿಸಿ ಈ ವರುಷ ಬಜೆಟ್ ಅಧಿವೇಶನದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸ ಬೇಕು ಮತ್ತು ಶೀಘ್ರವೇ ಭದ್ರ ನೀರು ಬರಬೇಕು ಎಂದು ಮುಖಂಡರು ಒತ್ತಾಯಿಸಿ ವ್ಯಾಪಕವಾಗಿ ಬಂದ್ ಮಾಡಿ ಆಗ್ರಹಿಸಿದರು.

ಇದೇ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್‌ ಶ್ರೀನಿವಾಸ್ ರಾವ್, ಪಿಎಸ್ಐ ಸಾಗರ್ ಮತ್ತು ಒಂದು ಕೆಎಸ್‌ಆರ್ ಎರಡು ಡಿ.ಆರ್ ಪೊಲೀಸ್ ವಾಹನಗಳು ಹೊರ ಜಿಲ್ಲೆಗಳಿಂದ 50 ಪೊಲೀಸ್ ಸಿಬ್ಬಂದಿ ಕಾವಲಿದ್ದು, ಬಂದ್ ವೇಳೆ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸ ಲಾಗಿತ್ತು.

ಬೆಳಿಗ್ಗೆ 5:30ಕ್ಕೆ ಹೋರಾಟಗಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೋರಾಟಕ್ಕೆ ವ್ಯಾಪಕ ಬೆಂಬಲ ನೀಡಿ ಎಂದು ಅಂಗಡಿ ಮುಗ್ಗಟ್ಟುಗಳ ವ್ಯಾಪಾರಸ್ಥರಿಗೆ, ಹೋಟೆಲ್ ಮಾಲೀಕರಿಗೆ ಹೋರಾಟಕ್ಕೆ ಸಹಕರಿಸಬೇಕು ಎಂದು ಹೋರಾಟಗಾರರು ಮನವಿ ಮಾಡಿದರು.

ದಾವಣಗೆರೆಯ ಮುಖ್ಯ ರಸ್ತೆಯಾದ ಎಪಿಎಂಸಿ ಬಳಿ ಚಳ್ಳಕೆರೆ ಟೋಲ್ ಗೇಟ್ ಬಳಿ ವಾಹನ ಸವಾರರು ಸಂಚಾರಕ್ಕೆ ಮುಂದಾದಾಗ ಹೋರಾಟಗಾರರು ಸಂಚಾರಕ್ಕೆ ಅವಕಾಶ ಮಾಡಿಕೊಡದೆ ಇಂದು ಬಂದ್ ಇದ್ದು ಸಹಕರಿಸಲು ಮನವಿ ಮಾಡಿ ವಾಪಸ್ ಕಳಿಸಿದ ಘಟನೆಗಳು ಜರುಗಿದವು. ನಂತರ ಇಫ್ತಾ ಕಲಾವಿದರಾದ ಐರಣಿ ಚಂದ್ರು ಅವರಿಂದ ಹೋರಾಟದ ಕ್ರಾಂತಿ ಗೀತೆಗಳ ಆಡುವ ಮೂಲಕ ವಾಹನ ಸವಾರರಿಗೆ ಬಂದ್ ಗೆ ವ್ಯಾಪಕ ಬೆಂಬಲ ನೀಡಿ ಎಂದು ತಿಳಿಹೇಳಿದರು.

ಹೋರಾಟಕ್ಕೆ ರೈತ ಸಂಘಟನೆಗಳು, ಆಟೋ ಚಾಲಕರು, ಬಸ್ ಮಾಲೀಕರ ಸಂಘ, ಕನ್ನಡ ರಕಣಾ ವೇದಿಕೆ, ದಲಿತ ಸಂಘಟನೆ, ವಿಧದ ಪ್ರಗತಿಪರ ಸಂಘಟನೆಗಳು ಭಾಗವಹಿಸಿದ್ದವು.

ಇದೇ ಸಂದರ್ಭದಲ್ಲಿ ಭದ್ರ ಮೇಲ್ದಂಡೆ ಯೋಜನೆ ಹೋರಾಟಗಾರರಾದ ಯಾದವ್ ರೆಡ್ಡಿ, ಮಹಾಲಿಂಗಪ್ಪ, ವಕೀಲ ಸಂಘದ ಅಧ್ಯಕ್ಷ ಓಂಕಾರೇಶ್ವರ, ರುದ್ರೇಶ್, ಎನ್.ಎಸ್. ರಾಜು, ಶಂಭು ಲಿಂಗಪ್ಪ, ಕಲಾವಿದರಾದ ಐರಾಣಿ ಚಂದ್ರು, ಎಸ್.ಸಿ/ ಎಸ್.ಟಿ ಪತ್ರಿಕ ವರದಿಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಚಿಕ್ಕಮ್ಮನಟ್ಟಿ ಮಂಜುನಾಥ್, ಹಿರಿಯ ಪತ್ರಕರ್ತ ದೊಣ್ಣೆಹಳ್ಳಿ ಗುರುಮೂರ್ತಿ, ವಕೀಲ.ಆರ್ ಓಬಳೇಶ್, ರೈತ ಸಂಘಟನೆಯ ಮುಖಂಡರಾದ ಚೆರಂಜೀವಿ, ರಾಜನಟ್ಟಿ ರಾಜು, ಕುಬೇರಪ್ಪ, ಸತ್ಯಮೂರ್ತಿ, ಲಕ್ಷ್ಮಣ್, ಭರಮಸಮುದ್ರ ರಾಜು, ಸಂಗೇನಹಳ್ಳಿ ಅಶೋಕ್ ಕುಮಾರ್, ನಾಗಲಿಂಗಪ್ಪ, ಮೈಲೇಶ್, ಇಂದಿರಾ ಗುರುಸ್ವಾಮಿ, ಸತೀಶ್, ಗ್ಯಾಸ್ ಓಬಣ್ಣ, ತೋರಣಗಟ್ಟೆ ಬಡಪ್ಪ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಮಾಂತೇಶ್, ಲೋಕಣ್ಣ ರೇವಣ್ಣ, ದೊಣ್ಣೆ ಹಳ್ಳಿ ಲೋಕೇಶ್, ಕೋಳಿ ಅಂಗಡಿ ಮಾಲೀಕರಾದ ಎಂ.ಎಸ್. ನಜೀರ್ ಅಹ್ಮದ್, ರೈತ ಸಂಘಟನೆ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...