ದಾವಣಗೆರೆ | ತೋಟಕ್ಕೆ ಹರಿಯದ ಭದ್ರಾ ನಾಲೆ ನೀರು, ಯುವ ರೈತ ಆತ್ಮಹತ್ಯೆ, ಸಮರ್ಪಕ ನೀರೊದಗಿಸಲು ಒತ್ತಾಯ

Date:

ಭದ್ರಾ ಜಲಾಶಯದಿಂದ ಮೂರನೇ ಬಾರಿಗೆ ಸರದಿಯಲ್ಲಿ ನೀರು ಹರಿಸಿದರೂ ಅನೇಕ ಕಡೆ ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನಾದರೂ ಸಮರ್ಪಕ ನೀರೊದಗಿಸುವಂತೆ ರೈತ ಮುಖಂಡ ತೇಜಸ್ವಿ ವಿ. ಪಟೇಲ್ ನೇತೃತ್ವದಲ್ಲಿ ರೈತರ ನಿಯೋಗವು ಜಿಲ್ಲಾ ಆಡಳಿತಕ್ಕೆ ಒತ್ತಾಯಿಸಿದೆ.

ದಾವಣಗೆರೆ ನಗರದಲ್ಲಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶರನ್ನು ಭೇಟಿ ಮಾಡಿದ ಕಬ್ಬು ಬೆಳೆಗಾರರ ಸಂಘದ ನಿರ್ದೇಶಕ ತೇಜಸ್ವಿ ಪಟೇಲ್ ನೇತೃತ್ವದ ರೈತ ನಿಯೋಗವು, ದಾವಣಗೆರೆ ತಾ. ಜಡಗನಹಳ್ಳಿ ಗ್ರಾಮದ 21 ವರ್ಷದ ಯುವ ರೈತ ಗುರುರಾಜ ಭದ್ರಾ ನಾಲೆಗೆ ನೀರು ಬರದೇ, ತಮ್ಮ ತೋಟ ಒಣಗಿರುವುದನ್ನು ನೋಡಿ ನೋವಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಿಷಾದಿಸಿದರು.

ಜಡಗನಹಳ್ಳಿ ಗ್ರಾಮದ ಯುವ ರೈತ ಗುರುರಾಜಗೆ ವಿವಾಹ ನಿಶ್ಚಿಯವಾಗಿತ್ತು. ಆದರೆ, ಭದ್ರಾ ಜಲಾಶಯದಿಂದ ನಾಲೆಗೆ ಮೂರನೇ ಸಲ ನೀರು ಬಿಟ್ಟರೂ ಸಹ ತಮ್ಮ ಭಾಗಕ್ಕೆ ನೀರು ಬರದೇ, ತಮ್ಮ ತಂದೆ ಮಹೇಶ್ವರಪ್ಪ ಕಷ್ಟಪಟ್ಟು ಬೆಳೆಸಿದ್ದ ತೋಟವು ಸಂಪೂರ್ಣ ಒಣಗಿದ್ದರಿಂದ ತೀವ್ರವಾಗಿ ನೊಂದಿದ್ದ ಗುರುರಾಜ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಭದ್ರಾ ನಾಲೆಗಳ ನೀರು ಹರಿಸುವ ವೇಳಾಪಟ್ಟಿಯನ್ನು ಇನ್ನೂ ಕನಿಷ್ಠ 3-4 ದಿನಗಳ ಕಾಲ ವಿಸ್ತರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೋಟ ಒಣಗಿದ್ದರಿಂದ ನೊಂದು ಸಾವಿಗೆ ಶರಣಾದ ಗುರುರಾಜನ ಸಾವೇ ಕೊನೆಯಾಗಲಿ. ಮತ್ತೆ ಯಾವೊಬ್ಬ ರೈತರು ಸಹ ನೀರು ಬಂದಿಲ್ಲವೆಂದು ಕೊರಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ. ಈ ಎಲ್ಲಾ ಸಮಸ್ಯೆ ಅರಿತು, ತಕ್ಷಣವೇ ಇನ್ನೂ 4 ದಿನಗಳ ಕಾಲ ನೀರು ಹರಿಸುವಿಕೆ ವಿಸ್ತರಿಸಲು ಕ್ರಮ ಕೈಗೊಳ್ಳುವಂತೆ ತೇಜಸ್ವಿ ಪಟೇಲ್ ಆಗ್ರಹಿಸಿದರು.

ಕಾರಿಗನೂರು, ತ್ಯಾವಣಿಗೆ, ಜಡಗನಹಳ್ಳಿ, ಮುಕ್ತನಹಳ್ಳಿ, ಸಂಕ್ಷೀಪುರ, ನಾಗರಸನಹಳ್ಳಿ, ಬಲ್ಲೂರು, ಶಿರಗಾನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಎಂ.ಬಿ. ಗುತ್ಯಪ್ಪ, ಗ್ರಾಮಗಳ ಬಸವರಾಜ, ಜಿ.ಪಿ.ಜಗದೀಶಪ್ಪ, ಆರ್‌. ಎಂ.ಹರೀಶ, ಟಿ.ಬಸಪ್ಪ, ಎ.ಎಚ್‌. ಚನ್ನಬಸಪ್ಪ, ಎಂ.ಟಿ. ಚಿಕ್ಕಪ್ಪ, ಎಂ.ಬಿ. ನಿಂಗಪ್ಪ, ರೇವಣಸಿದ್ದಪ್ಪ, ಕರಿಬಸಪ್ಪ, ಸುಭಾನ್ ಸಾಬ್, ಮಹಾಂತೇಶ, ಎಂ.ಜೆ. ರೇವಣಸಿದ್ದಪ್ಪ, ಎಂ.ಬಿ. ನಾಗರಾಜಪ್ಪ, ಎಂ.ಪಿ.ಸಿದ್ದಲಿಂಗಪ್ಪ, ಎಂ.ಟಿ. ಗುಡ್ಡಪ್ಪ, ಕುಮಾರಪ್ಪ, ಎಂ.ಪಿ. ಬಸವರಾಜ, ಎನ್. ಹನುಮಂತಪ್ಪ, ಎಂ.ಎಚ್. ನೀಲಗಿರಿಯಪ್ಪ, ಎಂ.ಎಸ್. ಗುದ್ದೇಶ, ಎಂ.ಎನ್‌. ಮಂಜು ಇತರ ರೈತರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...