ದಾವಣಗೆರೆ | ರೈತ, ಕಾರ್ಮಿಕ, ಯುವಜನ, ದಲಿತ, ಹಿಂದುಳಿದವರನ್ನು ಬಿಜೆಪಿ ಸರ್ಕಾರ ಹತ್ತಿಕ್ಕುತ್ತಿದೆ: ಎನ್.ಜಿ ರಾಮಚಂದ್ರ

Date:

ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ. ರಾಮಚಂದ್ರ ಆರೋಪಿಸಿದರು.

ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014 ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ದೇಶದ ಬಡವರ ಹಾಗೂ ರೈತರ, ಹಿಂದುಳಿದವರ ಅಭಿವೃದ್ಧಿ ಬಗ್ಗೆ ಕೆಲಸ ಮಾಡದೆ ,ಕೇವಲ ಧರ್ಮ ಇತರೆ ಭಾವನಾತ್ಮಕ ವಿಷಯಗಳಲ್ಲಿ ಅವರನ್ನೆಲ್ಲಾ ಹಿಡಿದಿಟ್ಟುಕೊಂಡಿದೆ. ಈ ಷಡ್ಯಂತ್ರಿಗಳ ಬಗ್ಗೆ ಜನರಲ್ಲಿ ಜಗೃತಿ ಮೂಡಿಸಲು ಪ್ರಗತಿಪರರು, ಚಿಂತಕರು ಸೇರಿ ಕೊಂಡು ಎದ್ದೇಳು ಕರ್ನಾಟಕ ಅಭಿಯಾನವನ್ನು ಆರಂಭಿಸಿದ್ದೇವೆ ಎಂದರು.

ಬಿಜೆಪಿಯ 10 ವರ್ಷಗಳ ಆಡಳಿತದಲ್ಲಿ ಜನ ಸಾಮಾನ್ಯರ ಬದುಕನ್ನು ರೂಪಿಸಲು ಹೇಳಿಕೊಳ್ಳುವಂತ ಹೊಸ ಅಭಿವೃದ್ಧಿ ಯೋಜನೆಯನ್ನೂ ನೀಡಿಲ್ಲ, ಜನ ಸಾಮಾನ್ಯರಿಗೆ ಯಾವ ಸಬ್ಸಿಡಿಯನ್ನೂ ಹೆಚ್ಚಿಸದೆ, ಎಲ್ಲವನ್ನೂ ಕಡಿತಗೊಳಿಸಲಾಗಿದೆ. ಈ ಸಬ್ಸಿಸಿ ಕಡಿತದ ಮೊತ್ತ ಎಲ್ಲಿ ಬಳಕೆ ಮಾಡಲಾಗಿದೆ ಎಂದು ಕೇಳಿದರೆ ಕೋವಿಡ್ ನಿಭಾವಣೆಯ ಸಬೂಬನ್ನು ಸಂಘ ಪರಿವಾರದವರು ನೀಡುತ್ತಾರೆ. ಆದರೆ, ಕೋವಿಡ್ ವ್ಯಾಕ್ಸಿನ್ ಯೋಜನೆಗೆ ಬಳಕೆಯಾಗಿದ್ದು ಕೇವಲ 37 ಸಾವಿರ ಕೋಟಿ ರೂ. ಮಾತ್ರ. ಇನ್ನೊಂದೆಡೆ ಸರ್ಕಾರದ ಖಜಾನೆಯ ಹಣವನ್ನು ಅವರ ಕಾರ್ಪೊರೇಟ್ ಮಿತ್ರರ ತಿಜೋರಿಗೆ ಸದ್ದಿಲ್ಲದಂತೆ ಹರಿಸಲಾಗಿದೆ. ಈ 10 ವರ್ಷಗಳಲ್ಲಿ ಕಾಪೋರೇಟ್ ಕಂಪನಿಗಳ 55 ಲಕ್ಷ ರೂ. ತೆರಿಗೆಗೆ ವಿನಾಯಿತಿ ನೀಡಲಾಗಿದೆ. 33 ಲಕ್ಷ ಕೋಟಿ ರೂ.ಗಳ ಸಬ್ಸಿಡಿ, ಕನಿಷ್ಟ 100 ಲಕ್ಷ ಕೋಟಿ ರೂ.ಗಳ ಅಮೂಲ್ಯ ಸರ್ಕಾರಿ ಉದ್ದಿಮೆಗಳನ್ನು ಬಿಡಿಗಾಸಿಗೆ ಹರಾಜು ಮಾಡಲಾಗಿದ್ದು ಇದು ಹಗಲು ದರೋಡೆಗೆ ಸಮಾನವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೋದಿಯವರ ಮಿತ್ರರಾದ ಆದಾನಿ, ಅಂಬಾನಿಯವರ ಆಸ್ತಿ 3 ವರ್ಷಗಳಲ್ಲಿ 6 ಪಟ್ಟು ಹೆಚ್ಚಾಗಿದೆ, ಕಪ್ಪು ಹಣ ತರುವುದಿರಲಿ ನಮ್ಮ ಬ್ಯಾಂಕುಗಳಿಗೆ ಸಹಸ್ರಾರು ಕೋಟಿ ಪಂಗನಾಮ ಹಾಕಿದ ನೀರವ್ ಮೋದಿ, ವಿಜಯ್ ಮಲ್ಯರಂತಹ ವಿರುದ್ಧ ಕ್ರಮಕೈಗೊಂಡಿಲ್ಲ, ಇಂದು ಬಿಜೆಪಿ ದೇಶದಲ್ಲಿ ಬೃಹತ್ ಭ್ರಷ್ಟರ ಗ್ಯಾಂಗ್ ಆಗಿ ಪರಿವರ್ತನೆಯಾಗಿದೆ ಎಂದು ಆರೋಪಿಸಿದರು.

ಭಾವನಾತ್ಮಕವಾಗಿ ಭಾರತೀಯರನ್ನು ಹಿಡಿದಿಟ್ಟು ದೇಶವನ್ನು ಕಂಪನಿಗಳ ಪಾಲು ಮಾಡುತ್ತಿರುವ ಬಿಜೆಪಿಯನ್ನು ಈಗಲೂ ಹತ್ತಿಕ್ಕದೆ ಹೋದರೆ ದೇಶದ ಜನ ಸಾಮಾನ್ಯರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಹೋಗುತ್ತದೆ. ಭಾವನಾತ್ಮಕ ಜಾಲಕ್ಕೆ ಸಿಲುಕದೆ ಪ್ರಜ್ಞಾವಂತಿಗೆಯಿಂದ ಈ ಬಾರಿ ಬಿಜೆಪಿಗೆ ವಿರುದ್ಧವಾಗಿ ಮತದಾನ ಮಾಡಬೇಕಿದೆ ಎಂದರು.

ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ ಮಾತನಾಡಿ, ಎದ್ದೇಳು ಕರ್ನಾಟಕ ವೇದಿಕೆಯಿಂದ ದೇಶ ಉಳಿಸಿ ಸಂಕಲ್ಪ ಯಾತ್ರೆ ಆಯೋಜಿಸುವ ದುಸ್ಥಿತಿ ದೇಶಕ್ಕೆ ಬಂದಿದೆ ಎಂದರೆ, ದೇಶ ಎತ್ತ ಸಾಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಇವುಗಳಿಂದ ಬೇಸತ್ತ ಮತದಾರರ ಮನಸ್ಥಿತಿ ಬದಲಾವಣೆಯಾಗಿದೆ, ಅದನ್ನು ಮತಗಳನ್ನಾಗಿ ಪರಿವರ್ತಿಸುವ ಕಾರ್ಯವನ್ನು ಕಾರ್ಮಿಕ ಸಂಘಟನೆಗಳು ಮಾಡಲಿದೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಸಂತೋಷ ನೋಟದವರ್ ಮಾತನಾಡಿ, ಉದ್ಯೋಗ ಸೃಷ್ಟಿ, ಎಲ್ಲಾ ಜಾತಿ, ಧರ್ಮದ ಬಡವರ ಹಿತಾಸಕ್ತಿಗಾಗಿ ಎದ್ದೇಳು ಕರ್ನಾಟಕದಿಂದ ಆರಂಭಿಸಿರುವ ದೇಶ ಉಳಿಸಿ ಸಂಕಲ್ಪಯಾತ್ರೆಗೆ ಸಹಕಾರ ನೀಡುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ಕೆ.ಎಚ್. ಆನಂದಮೂರ್ತಿ, ಅಪ್ಪಾ ಸಾಹೇಬ್, ಗೋಣಿ ಬಸಪ್ಪ, ಹೊನ್ನಪ್ಪ ಮರಿಯಪ್ಪನವರ್, ದಲಿತ ಮುಖಂಡ ಮಂಜುನಾಥ, ಮಾನವ ಬಂಧುತ್ವ ವೇದಿಕೆಯ ಮಂಜುನಾಥ್, ಇನ್ಸಾಲ್, ಕೃಷ್ಣಪ್ಪ, ಆಶಾಖ್, ನಿಜಾಮುದ್ದೀನ್ ಸೇರಿದಂತೆ ಇನ್ನೂ ಹಲವು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...