ದಾವಣಗೆರೆ | ಮಾರುಕಟ್ಟೆಯಾಗಿದೆ ಬಸ್‌ ನಿಲ್ದಾಣ

Date:

ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡುವುದೇ ಪ್ರಯಾಣಿಕರು ಸಾರ್ವಜನಿಕರ ಅನುಕೂಲಕ್ಕಾಗಿ. ಆ ನಿಲ್ದಾಣಗಳು ಜನರ ಉಪಯೋಗಕ್ಕೆ ಬಾರದೆ ಹೋದರೆ ಅವುಗಳ ಅಸ್ತಿತ್ವವಾದರೂ ಏನು ಎನ್ನುವುದು ಪ್ರಶ್ನೆ. ಹೀಗೊಂದು ಪರಿಸ್ಥಿತಿ ದಾವಣಗೆರೆ ಜಿಲ್ಲೆಯ ಗ್ರಾಮಾಂತರ ವಿಭಾಗದ ಆನಗೋಡು ಗ್ರಾಮದ ಬಸ್ ನಿಲ್ದಾಣದ್ದು.

ಈ ಬಸ್ ನಿಲ್ದಾಣದಲ್ಲಿ ಉತ್ತಮ ಕಟ್ಟಡವಿದೆ. ಕುಳಿತುಕೊಳ್ಳಲು ಕಟ್ಟೆಗಳು ಕೂಡ ವ್ಯವಸ್ಥಿತವಾಗಿಯೂ ಇದೆ. ಆದರೆ, ಅಲ್ಲಿಗೆ ಬಸ್‌ಗಳು ಬರುವುದೇ ಸವಾಲಾಗಿದೆ. ಬಸ್ ನಿಲ್ದಾಣದ ಮುಂದೆ ತರಕಾರಿ ವ್ಯಾಪಾರಿಗಳು, ಸಂತೆ ವ್ಯಾಪಾರಿಗಳು ಗುಡಾರವನ್ನು ಹಾಕಿಕೊಂಡಿದ್ದಾರೆ. ಪರಿಣಾಮವಾಗಿ ಬಸ್ ನಿಲ್ದಾಣದ ಬಳಿ ನಿಲ್ಲಲು ಜಾಗವಿಲ್ಲದಂತಾಗಿದೆ. ಹೀಗಾಗಿ, ಬಸ್ ನಿಲ್ದಾಣದ ಮುಂದೆ ಬಸ್‌ಗಳು ನಿಲ್ಲದೆ ದೂರದಲ್ಲಿಲ್ಲೋ ಸೇತುವೆ ಕೆಳಗೆ ನಿಲ್ಲುತ್ತವೆ ಅಥವಾ ರಸ್ತೆ ಮಾರ್ಗದ ಬದಿಯಲ್ಲಿ ನಿಲ್ಲಿಸುತ್ತವೆ. ಇದರಿಂದ, ಜನರು ಬಿಸಿಲಿನಲ್ಲಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ಉಂಟಾಗಿದೆ. ಇದನ್ನು ಸ್ಥಳೀಯ ಆಡಳಿತ ಗಮನಿಸದೆ ಹಾಗೆ ಬಿಟ್ಟಿರುವುದು ಕೂಡ ಈ ದುಸ್ಥಿತಿಗೆ ಪ್ರಮುಖ ಕಾರಣ.

ಇದೆಲ್ಲದರಿಂದ ಬಸ್ ನಿಲ್ದಾಣ ಕೂಡ ನಾಯಿಗಳ ತಂಗುದಾಣವಾಗಿದ್ದು, ಕುಡುಕರು, ಜೂಜಿನ ವ್ಯಸನಿಗಳು ಇಲ್ಲಿ ಕಾಲಕಳೆಯುವ ಮತ್ತು ಮಲಗುವ ಆಶ್ರಯ ತಾಣವಾಗಿ ಬಳಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸ್ಥಳೀಯ ವಿದ್ಯಾರ್ಥಿ ರಂಗನಾಥ್ ಈದಿನ.ಕಾಮ್ ಜೊತೆ ಮಾತನಾಡಿದ್ದು, “ನಾನು ಈ ರಸ್ತೆಯಲ್ಲಿ ಸುಮಾರು ಐದಾರು ವರ್ಷಗಳಿಂದ ವಿದ್ಯಾಭ್ಯಾಸಕ್ಕೆ ಪ್ರಯಾಣ ಮಾಡುತ್ತಿದ್ದೇನೆ. ನಿಲ್ದಾಣವನ್ನು ನಿರ್ಮಿಸಿ ಬಹಳ ವರ್ಷಗಳೇ ಕಳೆದಿವೆ. ನನಗೆ ತಿಳಿದಿರುವಂತೆ ಇದು ನಿರುಪಯುಕ್ತವಾಗಿದೆ. ಅಣಜಿ ಮಾರ್ಗದ ನಿಲ್ದಾಣದ್ದು ಈ ಪರಿಸ್ಥಿತಿ ಇದ್ದರೆ, ಇನ್ನೊಂದು ಭಾಗದಲ್ಲಿ ಹೊಸದುರ್ಗ ಮಾರ್ಗದಲ್ಲಿ ಬಸ್ ನಿಲ್ದಾಣ ಇಲ್ಲದೆ ಪ್ರಯಾಣಿಕರು ಬಿಸಿಲಿನಲ್ಲಿ ನಿಲ್ಲುತ್ತಾರೆ. ಹೋಬಳಿ ಕೇಂದ್ರವಾದರೂ ಎರಡು ಮಾರ್ಗಗಳಲ್ಲಿ ಸುಸಜ್ಜಿತ ಬಸ್ ನಿಲ್ದಾಣವಿಲ್ಲ. ಸ್ಥಳೀಯ ಆಡಳಿತ ಗಮನ ಹರಿಸಿ ವ್ಯಾಪಾರಿಗಳಿಗೆ ಬೇರೆ ಜಾಗದಲ್ಲಿ ಅನುಕೂಲ ಮಾಡಿಕೊಟ್ಟು, ಬಸ್ ನಿಲ್ದಾಣವನ್ನು ಸಾರ್ವಜನಿಕರ ಅನುಕೂಲಕ್ಕೆ ಒದಗಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...