ದಾವಣಗೆರೆ | ಕೃಷಿಭಾಗ್ಯ ಯೋಜನೆಯಡಿ 30ಸಾವಿರ ಕೃಷಿ ಹೊಂಡ: ಸಚಿವ ಚಲುವರಾಯಸ್ವಾಮಿ

Date:

ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು. ಈಗ ಮತ್ತೆ ಪ್ರಾರಂಭಿಸಲಾಗಿದೆ. ಎನ್‌ಡಿಆರ್‌ಎಫ್‌ನಿಂದ 100 ಕೋಟಿ ಅನುದಾನ ದೊರೆಯಲಿದೆ. ರಾಜ್ಯದಲ್ಲಿ 30 ಸಾವಿರ ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಮಳೆಯ ಕೊರತೆಯಿಂದ 13ಸಾವಿರ ಕೋಟಿಯಷ್ಟು ಬೆಳೆಹಾನಿಯಾಗಿದೆ. ಕೇಂದ್ರಕ್ಕೆ ಪರಿಹಾರ ಕೋರಿ ಪತ್ರ ಬರೆಯಲಾಗಿದೆ. ಕೇಂದ್ರ ಹಣಕಾಸು ಇಲಾಖೆ ಸಚಿವೆ ನಿರ್ಮಲಾ ಸೀತಾ ರಾಮನ್ ಭೇಟಿಗೆ ಸಮಯ ನೀಡಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರೊಂದಿಗೆ ಭೇಟಿ ಮಾಡಿ, ಬರ ಪರಿಹಾರ ಅನುದಾನವನ್ನ ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮಗೆ ದೊರೆತ ಮಾಹಿತಿಯಂತೆ ಬರ ಪರಿಹಾರ ಅನುದಾನದ ಬಿಡುಗಡೆ ಪ್ರಕ್ರಿಯೆ ಬಹುತೇಕ ಪೂರ್ಣವಾಗಿದೆ. ಗುರುವಾರದ ಭೇಟಿ ಸಮಯದ ನಂತರ ಅನುದಾನ ಬಿಡುಗಡೆಯಾಗುವ ಎಲ್ಲ ವಿಶ್ವಾಸವೂ ಇದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗುತ್ತಿದ್ದಂತೆಯೇ ಜಿಲ್ಲಾವಾರು ಬರ ಪರಿಹಾರ ವಿತರಣೆಗೆ ಕೃಷಿ, ತೋಟಗಾರಿಕೆ, ಕಂದಾಯ ಮೂರು ಇಲಾಖೆಗಳು ಎಲ್ಲ ಸಿದ್ಧತೆ ಮಾಡಿಕೊಂಡಿವೆ ಎಂದು ತಿಳಿಸಿದರು.

ಫೂಟ್ಸ್‌ನಡಿ ಶೇ.100ರಷ್ಟು ರೈತರ ನೋಂದಣಿ ಮುಗಿದಿದೆ. ಕೆಲವಾರು ಕಡೆ ಆರ್‌ಟಿಸಿ ಜೋಡಣೆ ಮತ್ತಿತರ ತಾಂತ್ರಿಕ ಕಾರಣಗಳಿಂದ ನೋಂದಣಿ ನಡೆಯುತ್ತಿದೆ. ಆದಷ್ಟು ಬೇಗ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಫೂಟ್ ನಡಿ ನೋಂದಣಿಯಾದಂತಹ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಒಳಗೊಂಡಂತೆ ಇಲಾಖೆಯ ಸೌಲಭ್ಯಗಳು ದೊರೆಯಲಿವೆ.

ಕೃಷಿ ವಿಶ್ವವಿದ್ಯಾಲಯಗಳನ್ನು ಹೆಚ್ಚು ಬಳಕೆ ಮಾಡಿಕೊಳ್ಳುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ, ಕಡಿಮೆ ಪ್ರಮಾಣದ ನೀರು ಬಳಸಿ ಹೆಚ್ಚು ಇಳುವರಿ ನೀಡುವಂತಹ ಬೆಳೆಗಳು, ಮಣ್ಣಿನ ಫಲವತ್ತತೆ ಆಧಾರದಲ್ಲಿ ಪರ್ಯಾಯ ಬೆಳೆಗಳ ಬೆಳೆಯುವುದು ಒಳಗೊಂಡಂತೆ ರೈತರಿಗೆ ಹೆಚ್ಚಿನ ಮಾಹಿತಿ ನೀಡುವ ಕೆಲಸ ಮಾಡಲಿದ್ದಾರೆ.

ಭತ್ತ, ಕಬ್ಬನ್ನು ಇನ್ನೂ ಹೆಚ್ಚಿನ ಯಾಂತ್ರಿಕವಾಗಿ ಕಟಾವು ಮಾಡು ವಂತಹ 100 ಕೇಂದ್ರ ಪ್ರಾರಂಭಿಸಲಾಗುವುದು. ಭತ್ತದಂತೆ ತೊಗರಿಯನ್ನೂ ನಾಟಿ ಮಾಡುವ ಪ್ರಯೋಗ ಧನಾತ್ಮಕ ಫಲಿತಾಂಶ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲೆಡೆ ವಿಸ್ತರಣೆ ಮಾಡಲಾಗುವುದು.

ಕೇಂದ್ರ ಸರ್ಕಾರ ಯಾಂತ್ರಿಕೃತ ಕೃಷಿಗೆ ಅನುದಾನ ನೀಡಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ, ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಹಣಕಾಸು ಇಲಾಖೆ ಸಚಿವರ ಭೇಟಿ ಸಂದರ್ಭದಲ್ಲಿ ಈ ವಿಷಯವನ್ನೂ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ಹಣ ಖರ್ಚು ಮಾಡಬೇಕು ಎಂಬುದಾಗಿ ಇಂಧನ ಇಲಾಖೆಯ ಹೊಸ ಮಾರ್ಗಸೂಚಿಗೆ ಎಲ್ಲೆಡೆ ವಿರೋಧ, ಆಕ್ಷೇಪಣೆ ಕೇಳಿ ಬರುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮತ್ತು ಇಂಧನ ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...