ದಾವಣಗೆರೆ | ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಸ್ಮಶಾನ ಭೂಮಿ; ಖಾತೆ ವರ್ಗಾವಣೆಗೆ ದಲಿತರ ಆಗ್ರಹ

Date:

ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎಂಬ ಮಾತಿನಂತೆ ಸರ್ಕಾರ ಹಣ ಬಿಡುಗಡೆ ಮಾಡಿದರೂ, ತಮ್ಮ ಹೆಸರಿನಲ್ಲಿರುವ ಜಾಗವನ್ನು ಬಿಟ್ಟುಕೊಡಲು ಖಾಸಗಿ ವ್ಯಕ್ತಿ ಸಮ್ಮತಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ಮಶಾನ ಭೂಮಿ ಪಾಳುಕೊಂಪೆಯಾಗಿ ಮಾರ್ಪಟ್ಟಿದೆ ಎನ್ನುತ್ತಾರೆ ಸಂತೆಬೆನ್ನೂರು ಗ್ರಾಮದ ದಲಿತ ನಿವಾಸಿಗಳು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದ ದಲಿತರಿಗಾಗಿ ಸರ್ವೇ ನಂ. 232ರಲ್ಲಿ 56 ಗುಂಟೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿದೆ. ಹಲವಾರು ವರ್ಷಗಳಿಂದ ಗ್ರಾಮದ ದಲಿತರು ತಮ್ಮ ಸಮುದಾಯದಲ್ಲಿ ಮೃತಪಟ್ಟವರನ್ನು ಅದೇ ಭೂಮಿಯಲ್ಲಿ ಸಂಸ್ಕಾರ ಮಾಡುತ್ತಾ ಬಂದಿದ್ದಾರೆ. ಆದರೆ, ಆ ಭೂಮಿ ಇನ್ನೂ ಕೂಡ ಗ್ರಾಮದ ಪ್ರಬಲ ಜಾರಿಗೆ ಸೇರಿದ ಇಬ್ಬರು ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿದೆ ಎಂದು ತಿಳಿದುಬಂದಿದೆ.

56 ಗುಂಟೆ ಸ್ಮಶಾನ ಭೂಮಿಯ ಪೈಕಿ ಅವರಿಬ್ಬರ ಹೆಸರಿನಲ್ಲಿ ತಲಾ 28 ಗಂಟೆ ಭೂಮಿ ಸೇರಿಕೊಂಡಿದೆ. ಅವರಿಬ್ಬರಲ್ಲಿ ಒಬ್ಬರು ಯಾವುದೇ ತಕರಾರು ಇಲ್ಲದೆ, ಭೂಮಿಯನ್ನು ವರ್ಗಾಯಿಸುವುದಾಗಿ ಹೇಳಿದ್ದಾರೆ. ಆದರೆ, ಮತ್ತೊಬ್ಬರು ಭೂಮಿ ಬಿಟ್ಟುಕೊಡುವುದಿಲ್ಲ, ಅಲ್ಲಿ ನಿವೇಶನ ಮಾಡುತ್ತೇವೆಂದು ಚಕಾರ ಎತ್ತಿದ್ದಾರೆ. ಪರಿಣಾಮ ಸ್ಮಶಾನ ಭೂಮಿಯು ದಲಿತರಿಗೆ ಬಳಕೆಯಾಗದೇ ಪಾಳು ಬಿದ್ದಿದೆ. ಗಿಡ-ಗಂಟಿಗಳು ಬೆಳೆದುಕೊಂಡಿವೆ. ಈಗಾಗಲೇ ಸಂಸ್ಕಾರ ಮಾಡಲಾಗಿರುವ ಹಿರಿಕರಿಗೆ ಪೂಜೆ, ಶ್ರಾದ್ಧಾ ನಡೆಸಲೂ ಕೂಡ ಸಾಧ್ಯವಾಗುತ್ತಿಲ್ಲ ಎಂದು ಗ್ರಾಮದ ದಲಿತರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು ಎರಡು-ಮೂರು ತಲೆಮರುಗಳಿಂದ ನಮ್ಮ ಸಮುದಾಯದವರಲ್ಲಿ ಮೃತಪಟ್ಟಿವರಿಗೆ ಆ ಜಾಗದಲ್ಲಿಯೇ ಅಂತ್ಯಸಂಸ್ಕಾರ ಮಾಡುತ್ತಾ ಬಂದಿದ್ದೇವೆ. ಆದರೆ, ಈಗ ಸಮಸ್ಯೆ ಎದುರಾಗಿದೆ. ನಮ್ಮಲ್ಲಿ ಯಾರಾದರೂ ಮೃತಪಟ್ಟರೆ, ಸಂಸ್ಕಾರ ಮಾಡಲೂ ಸಾಧ್ಯವಿಲ್ಲದಂತಾಗಿದೆ” ಎಂದುಈದಿನ.ಕಾಮ್ ಜೊತೆ ಮಾತನಾಡಿದ ಗ್ರಾಮದ ಹಿರಿಯ ದಲಿತ ಮುಖಂಡ ರಮೇಶಪ್ಪ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುಂದಿನ ದಿನಗಳಲ್ಲಿ ಜಗತ್ತಿನಾದ್ಯಂತ ಜಲ ಪ್ರಳಯಗಳೂ ಹೆಚ್ಚಾಗಲಿವೆ ; ನೆಮ್ಮದಿಯ ದಿನಗಳೂ ಮಾಯವಾಗಲಿವೆ

ಸ್ಮಶಾನ ಭೂಮಿಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಹಣ ಬಿಡುಗಡೆ ಮಾಡಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿಯದೆ, ಭೂಮಿ ಪಾಳುಬಿದ್ದಿದೆ. ಪೂರ್ವಜರಿಗೆ ಸಂಸ್ಕಾರ ಮಾಡಲಾಗಿರುವ ಭೂಮಿಯನ್ನು ಉಳಿಸಿಕೊಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸ್ಮಶಾನ ಭೂಮಿಯ ಸಮಸ್ಯೆ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಉಚ್ಚಂಗಿ ಪ್ರಸಾದ್, “ನೂರಾರು ವರ್ಷಗಳಿಂದಲೂ ನಮ್ಮ ಹಿರಿಯರ ಅಂತ್ಯಕ್ರಿಯೆಯನ್ನು ಈ ಜಾಗದಲ್ಲಿ ಮಾಡುತ್ತಾ ಬಂದಿದ್ದೇವೆ. ಏಕಾಏಕಿ ಇದು ನಮ್ಮದು ಎಂದು ಖಾಸಗಿ ವ್ಯಕ್ತಿಯೊಬ್ಬರು ಅಡ್ಡಿ ಉಂಟುಮಾಡಿದ್ದಾರೆ. ಭೂಮಿಯು ಹಾಳು ಕೊಂಪೆಯಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷವೇ ಇದಕ್ಕೆ ಕಾರಣ. ಕೂಡಲೇ, ಸ್ಮಶಾನ ಭೂಮಿಯನ್ನು ಜಮೀನ ಮಾಲೀಕರ ಹೆಸರಿನಿಂದ ವರ್ಗಾಯಿಸಿ, ದಲಿತರಿಗೆ ಹಸ್ತಾಂತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...