ದಾವಣಗೆರೆ | ಅಕ್ರಮ ಒತ್ತುವರಿ ತೆರವಿಗೆ ಆಗ್ರಹ

Date:

ದಾವಣಗೆರೆ, ಹರಿಹರ ನಗರದಲ್ಲಿ ರಾಜಕಾಲುವೆಗಳನ್ನು ಕೆಲವು ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಕೆಲವು ಬಡಾವಣೆಗಳಲ್ಲಿ ಸರ್ಕಾರಿ ಜಾಗ ಹಾಗೂ ಉದ್ಯಾನವನಗಳ ಜಾಗಗಳನ್ನು ಅತಿಕ್ರಮಣ ಮಾಡಿದ್ದಾರೆ. ಒತ್ತುವರಿಗಳ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಬೇಕು. ಒತ್ತುವರಿಗಳನ್ನು ತೆರವು ಮಾಡಬೇಕೆಂದು ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿಗೆ ಸಂಘಟನೆಯ ಪದಾಧಿಕಾರಿಗಳು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಜಿ ಯಲ್ಲಪ್ಪ, “ರಾಜ್ಯ ಸರ್ಕಾರಕ್ಕೆ ಸೇರಿದ ಸಾವಿರಾರು ಕೋಟಿಗಳ ಆಸ್ತಿ ಪ್ರಭಾವಿಗಳ ಪಾಲಾಗಿದೆ. ನಗರ ವ್ಯಾಪ್ತಿಯಲ್ಲಿ ಹಲವರು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಆದರೂ, ಮಹಾನಗರ ಪಾಲಿಕೆ ಆಯುಕ್ತರು ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಖಂಡನೀಯ” ಎಂದು ಹೇಳಿದ್ದಾರೆ.

“ರಾಜಕಾಲುವೆಗಳಿಗೆ ಸೇರಿದ ಜಾಗವನ್ನು, ಕೆಲವು ಸಂಸ್ಥೆಗಳು ತಮ್ಮ ಖಾಸಗಿ ಆಸ್ತಿಯನ್ನಾಗಿ ಮಾಡಿಕೊಂಡಿವೆ. ಅಕ್ರಮವಾಗಿ ಕಟ್ಟಡಗಳನ್ನು ಕಟ್ಟಲಾಗಿದೆ. ಕೆಲವು ಅಧಿಕಾರಿಗಳು ಖಾಸಗಿ ಬಡಾವಣೆಗಳ ಮಾಲೀಕರ ಜೊತೆಗೆ ಶಾಮೀಲಾಗಿ ಬಡಾವಣೆಗಳಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟ ಜಾಗಗಳಿಗೆ ಆಕ್ರಮವಾಗಿ ಡೋರ್ ನಂಬ‌ರ್ ನೀಡಿರುವ ಪ್ರಕರಣಗಳಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹೋಟೆಲ್‌ ಒಂದರ ಮಾಲೀಕರು ರಾಜಕಾಲುವೆ ಒತ್ತುವರಿ ಮಾಡಿ ಕಾಂಪೌಂಡ್ ನಿರ್ಮಿಸಿದ್ದು, ಸರ್ಕಾರಿ ಜಾಗವನ್ನು ತಮ್ಮ ಸಂತ ಆಸ್ತಿಯನ್ನಾಗಿ ಮಾಡಿಕೊಂಡಿದ್ದಾರೆ. ಇಂತಹ ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸರ್ಕಾರಿ ಜಾಗಗಳನ್ನು ವಶಕ್ಕೆ ಮರಳಿ ಪಡೆಯಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ ಕೆ.ಹೆಚ್ ಮಹೆಬೂಬ್, ದಯಾನಂದ, ಸಂತೋಷ್ ದೊಡ್ಡನಿ,ಸಿದ್ದೇಶ್‌. ಎಸ್, ಗದಿಗೆಪ್ಪ, ಅಮ್ಮದ್ ಅಲಿ,ಎಂ. ರವಿ, ಬಾಬುರಾವ್‌, ಜಿ.ರಮೇಶ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...