ದಾವಣಗೆರೆ | ನೂತನ ಬಸ್ ನಿಲ್ದಾಣಕ್ಕೆ ಪಂಪಾಪತಿ ಹೆಸರಿಟ್ಟು, ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಆಗ್ರಹ

Date:

ದಾವಣಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಮುಂದೆ ಪಂಪಾಪತಿಯವರ ಕಂಚಿನ ಪ್ರತಿಮೆ ನಿರ್ಮಾಣ ಮಾಡಬೇಕು ಹಾಗೂ ನಿಲ್ದಾಣಕ್ಕೆ ಶ್ರಮಜೀವಿ ಕಾಂ.ಪಂಪಾಪತಿ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು‌ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಜಿಲ್ಲಾ ಸಮಿತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿತು.

ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ ಎಚ್.ಜಿ. ಉಮೇಶ್ ಆವರಗೆರೆ, ಪಂಪಾಪತಿಯವರು ತಮ್ಮ ಜೀವಿತಾವಧಿಯಲ್ಲಿ ಶ್ರಮಿಕರ ಅಳಲನ್ನು ನಿವಾರಣೆ ಮಾಡುತ್ತಾ  ನೋವನ್ನು ಸಹಿಸಿಕೊಳ್ಳುತ್ತಾ, ಹಸಿವನ್ನು ನುಂಗಿಕೊಂಡು ತನ್ನ ಕುಟುಂಬ ವಾಸಿಸಲಿಕ್ಕೆ ಸರಿಯಾದ ಸೂರನ್ನೂ ನಿರ್ಮಿಸಿಕೊಳ್ಳದೇ 15X35 ಅಡಿ ಜಾಗದಲ್ಲಿ ಜೀವನ ನಡೆಸಿದ ಧೀಮಂತ ನಾಯಕ ಎಂದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ವಿಭಾಗೀಯ ಕಚೇರಿಯನ್ನು ದಾವಣಗೆರೆ ನಗರದಲ್ಲಿ ನಿರ್ಮಾಣವಾಗಲು ಕಾರಣೀಭೂತರಾದರು. ಆದ್ದರಿಂದ ಕಾಂ.ಪಂಪಾಪತಿಯವರ ಹೆಸರನ್ನು ದಾವಣಗೆರೆ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬಸ್ ನಿಲ್ದಾಣದ ಮುಂದೆ ಕಂಚಿನ ಪ್ರತಿಮೆ ಮತ್ತು ಶ್ರಮಜೀವಿ ಕಾಂ. ಪಂಪಾಪತಿ ಬಸ್ ನಿಲ್ದಾಣವೆಂದು ನಾಮಕರಣ ಮಾಡಬೇಕೆಂದು‌ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಲ್ಲದೇ ನಗರದಲ್ಲಿರುವ ಆಶ್ರಯ ನಿರಾಶ್ರಿತರನ್ನು ಗುರುತಿಸಿ  ಸರ್ಕಾರ ಮತ್ತು ಜಿಲ್ಲಾಡಳಿತ ನಿವೇಶನ ಹಕ್ಕುಪತ್ರ ನೀಡಿ, ಮನೆ ನಿರ್ಮಾಣ ಮಾಡಿಕೊಡಬೇಕು. ದಾವಣಗೆರೆ ನಗರವು ದಿನೇ ದಿನೆ ಬೆಳೆಯುತ್ತಿದ್ದು, ಜನಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. 1980ರ ದಶಕದಲ್ಲಿ  ಕಾಂ. ಪಂಪಾಪತಿಯವರ ನೇತೃತ್ವದಲ್ಲಿ 11 ಬಡಾವಣೆಗಳನ್ನು ನಿರ್ಮಾಣ ಮಾಡಿ 9 ಬಡಾವಣೆಗಳನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಸೇರ್ಪಡೆ ಮಾಡಿ ಸ್ವಚ್ಛ ಆಡಳಿತವನ್ನು ನೀಡಿದ್ದಾರೆ. ನಂತರ 2001 ಮತ್ತು 2005ರಲ್ಲಿ  ಎಸ್.ಎಸ್. ಮಲ್ಲಿಕಾರ್ಜುನ್‌ ಮುಂದಾಳತ್ವದಲ್ಲಿ ಸುಮಾರು 10ರಿಂದ 12 ಸಾವಿರ ಮನೆಗಳನ್ನು ನಿರ್ಮಾಣ ಮಾಡಿದ್ದನ್ನು ಬಿಟ್ಟರೆ ಅಲ್ಲಿಂದ ಇಲ್ಲಿಯವರೆಗೂ ಆಶ್ರಯ ನಿರಾಶ್ರಿತರ ಆಶಯಗಳನ್ನು ಯಾರೂ ಕೂಡ ಕೇಳುವವರು ಇಲ್ಲದಂತಾಗಿದೆ ಎಂದರು.

ದಾವಣಗೆರೆ ನಗರದ ಅವರಗೆರೆಯ ಗೋಮಾಳ ಸರ್ವೆ ನಂ.213 ಚಾಲ್ತಿ ಖಾತೆ ಸರ್ವೇ ನಂ.393ರಲ್ಲಿ ಸುಮಾರು 100 ಎಕರೆಗೂ ಅಧಿಕ ಜಮೀನು ಒತ್ತುವರಿಯಾಗಿದೆ. ದಾವಣಗೆರೆ ತಾಲೂಕಿನ ತೋಳಹುಣಸೆ ಸರ್ವೇ ನಂ.62ರಿಂದ 75ರವರೆಗೂ 133ಎಕರೆ ಜಮೀನು ಇದ್ದು ಜನರು ವಾಸಮಾಡಲು ಯೋಗ್ಯ ಪ್ರದೇಶವಾಗಿದೆ. ಅಲ್ಲದೇ ದಾವಣಗೆರೆ ನಗರದಿಂದ 10-15 ಕಿ.ಮೀ.ವ್ಯಾಪ್ತಿಯಲ್ಲಿ 150ರಿಂದ 200ಎಕರೆ ಜಮೀನನ್ನು ರೈತರಿಂದ ನೇರವಾಗಿ ಖರೀದಿ ಮಾಡಿ ಅಥವಾ ದಾವಣಗೆರೆ ತಾಲೂಕು ಹಾಲುವರ್ತಿ ಮತ್ತು ಕೊಡಗನೂರು ಗ್ರಾಮದ ಸುತ್ತಮುತ್ತಲಿನಲ್ಲಿರುವ ಸೇಂದಿ ವನಗಳು ಹಾಳು ಬಿದ್ದಿದ್ದು, ಈ ಸಂಬಂಧ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಆಶ್ರಯ ನಿರಾತ್ರಿತರನ್ನು ಗುರುತಿಸಿ ಮೂಲ ಸೌಕರ್ಯಗಳೊಂದಿಗೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಇದರೊಂದಿಗೆ ಆಶ್ರಯ ನಿರಾಶ್ರಿತರಿಗೆ ಅವಶ್ಯವಿರುವಷ್ಟು ಜಮೀನನ್ನು ಖರೀದಿ ಮಾಡಿ ಹಕ್ಕುಪತ್ರ ನೀಡಿ ಮನೆ ನಿರ್ಮಾಣ ಮಾಡಿ ಕೊಡಬೇಕು. ಅವರಗೆರೆ ಸರ್ವೆ ನಂ.321/1 ರಲ್ಲಿ 2 ಎಕರೆ ಜಮೀನಿನಲ್ಲಿ 2006-07ರಲ್ಲಿ ಸುಮಾರು ಜನರಿಗೆ ಆಶ್ರಯ ಸಮಿತಿಯಿಂದ ಹಕ್ಕುಪತ್ರ ನೀಡಿದ್ದು ಇಲ್ಲಿಯವರೆಗೂ ಮೂಲಭೂತ ಸೌಕರ್ಯವನ್ನು ತಲುಪಿಸಿರುವುದಿಲ್ಲ. ಮುಖ್ಯ ರಸ್ತೆಯನ್ನು ಅಭಿವೃದ್ಧಿಪಡಿಸಿ ನಿವೇಶನದ ಅಳತೆ ಕಲ್ಲುಗಳನ್ನು ಹಾಕಿ ಕೊಡಬೇಕು. ಗೋಶಾಲೆ ಹಳ್ಳದ ಮೇಲೆ ಮನೆ ಕಟ್ಟಿಕೊಂಡಿರುವ ಫಲಾನುಭವಿಗಳಿಗೆ ಹಳ್ಳದ ಹಿನ್ನೀರಿನಿಂದ ತೊಂದರೆಯಾಗದ ಹಾಗೆ ತಡೆಗೋಡೆ ಕಟ್ಟಿ ಹಕ್ಕುಪತ್ರ ನೀಡಬೇಕು.

ಸ್ಲಂ ಬೋರ್ಡ್‌ಗೆ ಒಳಪಟ್ಟಿರುವ ನೀಲಮ್ಮನ ತೋಟದಲ್ಲಿ ವಾಸಿಸುತ್ತಿರುವ ಪ್ರತಿ ಫಲಾನುಭವಿಗಳಿಗೆ  ಹಕ್ಕುಪತ್ರ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಆಲ್ ಇಂಡಿಯಾ ಕಾಂಗ್ರೆಸ್‌ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್, ಎಚ್.ಎಂ. ಸಂತೋಷ್ ರಾಜ್ಯ ಯುವಜನ ಫೆಡ್ರೇಷನ್‌ ಕಾರ್ಯದರ್ಶಿ ವಿ. ಲಕ್ಷ್ಮಣ್, ಶಿವಕುಮಾರ್ ಡಿ.ಶೆಟ್ಟರ್, ಅವರಗೆರೆ ಚಂದ್ರು, ಆನಂದರಾಜ್, ದಾದಾಪೀರ್, ನರೇಗಾ ರಂಗನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...