ದಾವಣಗೆರೆ | ಜಗಳೂರು ತಾಲೂಕನ್ನು ಬರ ಪ್ರದೇಶಗಳ ಪಟ್ಟಿಗೆ ಸೇರಿಸಲು ಒತ್ತಾಯ: ಶಾಸಕ ದೇವೇಂದ್ರಪ್ಪ

Date:

ಮಳೆ ಕೊರೆತೆಯಿಂದ ಅನ್ನದಾತ ತತ್ತರಿಸಿದ್ದಾರೆ. ಜಗಳೂರು ತಾಲೂಕಿನಲ್ಲಿ 90% ಬೆಳೆ ಹಾನಿಯಾಗಿದೆ. ಬರ ಸಮೀಕ್ಷೆ ನೆಡೆಸಿ ತಾಲೂಕನ್ನು ಶಾಶ್ವತ ಬರ ಪೀಡಿತವೆಂದು ಘೋಷಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜನ್ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡರಿಗೆ ಮನವಿ ಮಾಡುತ್ತೇವೆ ಎಂದು ಶಾಸಕ ಬಿ ದೇವೇಂದ್ರಪ್ಪ ಭರವಸೆ ನೀಡಿದ್ದಾರೆ.

ಜಗಳೂರು ತಾಲೂಕಿನ ಗೊಲ್ಲರಟ್ಟಿ, ಭರಮಸಮುದ್ರ, ಮುನ್ನೂರು, ಬಿಳಿಚೋಡು, ಸೊಕ್ಕೆ ಸೇರಿದಂತೆ ಹಳ್ಳಿಗಳಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಸಮೀಕ್ಷೆ ನಡೆಸಿ, ಅವರು ಮಾತನಾಡಿದರು. “ಜಗಳೂರು ತಾಲೂಕಿನಲ್ಲಿ 51% ಪ್ರದೇಶದಲ್ಲಿ ಮೆಕ್ಕೆಜೋಳ, ಶೇಂಗಾ, ರಾಗಿ, ಸೂರ್ಯಕಾಂತಿ, ತೊಗರಿ ಹೀಗೆ ವಿವಿಧ ರೀತಿಯಾಗಿ ಬಿತ್ತನೆ ಮಾಡಲಾಗಿದೆ. ಅಲ್ಲದೆ, ಆಗಸ್ಟ್‌ ಅಂತ್ಯಕ್ಕೆ 57 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, 15 ಮಿ.ಮೀ. ಮಳೆಯಾಗಿ 70% ಮಳೆ ಕೊರತೆಯಿಂದ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ, ಬೆಳೆಗಳ ವಿವಿಧ ಬೆಳೆಗಳು ಸಂಪೂರ್ಣ ಒಣಗಿವೆ” ಎಂದು ತಿಳಿಸಿದ್ದಾರೆ.

“ನಮ್ಮ ರೈತರು ಹಾಕಿದ್ದ ಬಂಡವಾಳವೂ ಮರಳಿ ಬಾರರೆ, ಸಾಲವನ್ನು ಹೊತ್ತಿಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಮಳೆ ಇಲ್ಲದೆ ಆಕಾಶದತ್ತ ಮುಗಿಲು ನೋಡಿ ರೈತರು ವಿಚಲಿತರಾಗಿದ್ದಾರೆ. ಕೃಷಿ ತೋಟಗಾರಿಕೆ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಇಲ್ಲಿನ ನೈಜ್ಯ ಪರಿಸ್ಥಿತಿಯನ್ನು ಮೇಲಾಧಿಕಾರಿಗಳಿಗೆ ಮನವರಿಕೆ ಮಾಡಿಬೇಕು. ತೀವ್ರ ಬರ ಪ್ರವೇಶವೆಂದು ಘೊಷಿಸಲು ಕ್ರಮ ಕೈಳ್ಳುವಂತೆ ಸಚಿವರ ಗಮನಕ್ಕೆ ತರಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮೀಕ್ಷೆ ಕಾರ್ಯದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಿಥುನ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ತೋಟದಯ್ಯ. ಆರ್.ಐ ಧನಂಜಯ್,ಕೀರ್ತಿ, ಕೃಷಿ ಇಲಾಖೆ ಎ.ಡಿ.ಎ ಜೀವಿತಾ, ಪ್ರಸನ್ನ ಕುಮಾರ್‌, ವೆಂಕಟೇಶ್ ನಾಯ್ಕ
ಶಾಸಕರ ಆಪ್ತ ಸಹಾಯಕರಾದ ಶಿವಕುಮಾರ್, ಪಲ್ಲಾಗಟ್ಟಿ ಶೇಖರಪ್ಪ, ಮುಖಂಡರಾದ ಅನುಪ್ ರೆಡ್ಡಿ, ಜಗಳೂರು ಗೊಲ್ಲರಟ್ಟಿ ರಮೇಶ್,ಪ್ರಕಾಶ್ ರೆಡ್ಡಿ,ಹರೀಶ್ ಸೇರಿದಂತೆ ಅನೇಕರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...