ದಾವಣಗೆರೆ | ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ: ನ್ಯಾ. ರಾಜೇಶ್ವರಿ

Date:

ಹೆಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಮತ್ತು ಸತ್ರ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು.

ದಾವಣಗೆರೆಯ ಜಿಲ್ಲಾ ವಕೀಲರ ಸಂಘದಿಂದ ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಮಹಿಳಾ ದಿನವು ಲಿಂಗಸಮಾನತೆ ಮತ್ತು ಮಹಿಳಾ ಹಕ್ಕುಗಳ ಕುರಿತ ಅಪಾರ ಮಹತ್ವವನ್ನು ಹೊಂದಿದೆ. ವಿಶ್ವಾದ್ಯಂತ ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ. ಲಿಂಗ ಆಧಾರಿತ ತಾರತಮ್ಯ, ಹಿಂಸೆ ಮತ್ತು ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಅಸಮಾನ ಪ್ರವೇಶ ಸೇರಿದಂತೆ ಮಹಿಳೆಯರು ಎದುರಿಸುತ್ತಿರುವ ನಿರಂತರ ಸವಾಲುಗಳು ಮತ್ತು ಅಡೆತಡೆಗಳ ಕುರಿತು ಚರ್ಚಿಸುವ ಒಂದು ಅವಕಾಶವನ್ನು ಒದಗಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳು ಇದ್ದರೂ, ಇಂದಿಗೂ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲಿವೆ ಮತ್ತು ಸಮಾಜದಲ್ಲಿ ಬಾಲ್ಯ ವಿವಾಹದ ಪ್ರಕರಣ ತಗ್ಗಿಲ್ಲ. ಮಹಿಳೆಯರ ಶಿಕ್ಷಣಕ್ಕಾಗಿ ಹೋರಾಡಿದ ಅನೇಕ ಸಮಾಜ ಸುಧಾರಕರ ಪ್ರತಿಫಲದಿಂದಾಗಿ ಇಂದು ಸಮಾಜದ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರೇ ಮುಂಚೂಣಿಯಲ್ಲಿದರೆ, ಸ್ತ್ರೀ ಶಕ್ತಿ ಸಂಘಗಳು ಇನ್ನೂ ಹೆಚ್ಚಾಗಿ ಮಹಿಳಾ ಸಬಲೀಕರಣ ಕುರಿತು ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೆಶಕರಾದ ವಾಸಂತಿ ಉಪ್ಪಾರ ಮಾತನಾಡಿ, ಹೆಣ್ಣಿಗೆ ಹೆಣ್ಣೆ ಶತ್ರು ಎಂಬ ಮಾತನ್ನು ಮೀರಿ, ಮಹಿಳೆ ಅಗಾಧವಾಗಿ ಬೆಳೆದು ಅನ್ನೋನ್ಯತೆಯಿಂದ ಬದುಕಿದ್ದಾರೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ ಎಲ್.ಎಚ್. ಅರುಣ್ ಕುಮಾರ್ ಮಾತನಾಡಿ, ಮಹಿಳೆಯರ ಸಾಧನೆಗಳನ್ನು ಗೌರವಿಸಲು ಸಮಾಜಕ್ಕೆ ಅವರ ಕೊಡುಗೆಗಳನ್ನು ಗುರುತಿಸಲು ಮತ್ತು ಲಿಂಗ ಸಮಾನತೆಗಾಗಿ ಪ್ರತಿಪಾದಿಸಲು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜಾಗತಿಕ ಸಂದರ್ಭವಾಗಿದೆ. ಜಗತ್ತಿನಲ್ಲಿ ಮೊದಲ ಬಾರಿಗೆ 12ನೇ ಶತಮಾನದಲ್ಲಿ ಬಸವಾದಿ ಪ್ರಮಥರು ಮಹಿಳೆಯರಿಗೆ ಸಮಾನ ಅವಕಾಶವನ್ನು ನೀಡಿ ವಚನಚಳವಳಿ ಕಟ್ಟಿದರು. ಮಹಿಳೆಯರ ಹಕ್ಕುಗಳಿಗಾಗಿ ಮತ್ತು ಮಹಿಳೆಯರ ಶಿಕ್ಷಣಕ್ಕಾಗಿ ಜ್ಯೋತಿಬಾಪುಲೆ, ರಾಜಾರಾಮ್ ಮೋಹನ್‌ರಾಯ್ ಮುಂತಾದವರು ಮಾಡಿದ ಹೋರಾಟ ಮತ್ತು ತ್ಯಾಗಗಳನ್ನು ನಾವು ನೆನಪು ಮಾಡಿಕೊಳ್ಳಬೇಕು ಎಂದು ಸ್ಮರಿಸಿದರು.

ಒಂದನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶ ವಿಜಯಾನಂದ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ನಿವೇದಿತಾ, ರೇಷ್ಮಾ, ವಕೀಲರಾದ ಟಿ.ಆ‌ರ್. ಗುರುಬಸವರಾಜ್, ಬಿ.ಎಂ. ಹನುಮಂತಪ್ಪ, ನಾಗಮಣಿ ಹಂಪಾಳಿ, ಅನಿತಾ ಸಿ.ಪಿ. ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ರೇಖಾ ಖಮಿತ್ಕರ್, ನೇತ್ರಾವತಿ, ಮಹಾದೇವಿ ಹಿರೇಮಠ, ಭಾಗ್ಯಲಕ್ಷ್ಮಿ ಆರ್. ನ್ಯಾಯಾಧೀಶರಾದ ನಿವೇದಿತಾ, ರೇಷ್ಮಾಗಾಯಿತ್ರಿ, ನಾಜಿಯಾ ಕೌಸರ್, ಅಧಿಕಾರಿಗಳಾದ ವಾಸಂತಿ ಉಪ್ಪಾರ್ ಇವರುಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್.ಬಸವರಾಜ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಟಿ.ಎಚ್.ಮಧುಸೂದನ್, ನಾಗರಾಜ್, ಅನ್ನಪೂರ್ಣೇಶ್ವರಿ, ಸುಜಿದಾಬಾನು,  ಎಲ್.ನೀಲಕಂಠಯ್ಯ ಕೆ.ಎಂ. ರಾಘವೇಂದ್ರ ಎಂ, ಸಂತೋಷ್ ಕುಮಾರ್ ಜಿ.ಜೆ, ಇತರೆ ವಕೀಲರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...