ದಾವಣಗೆರೆ | ಲೈಂಗಿಕ ದೌರ್ಜನ್ಯಗಳನ್ನು ಕಂಡೂ ಹೇಳದವರೂ ಆರೋಪಿಗಳೇ: ನ್ಯಾ. ಶ್ರೀಪಾದ

Date:

ಲೈಂಗಿಕ ದೌರ್ಜನದಂತಹ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಸಲಾಗುತ್ತದೆ. ಹೀಗಾಗಿ, ಯಾವುದೇ ಹಿಂಜರಿಕೆ, ಭಯ ಇಲ್ಲದೆ ಲೈಂಗಿಕ ದೌರ್ಜನ್ಯಗಳ ವಿರುದ್ಧ ದೂರು ನೀಡಬೇಕು ಎಂದು ದಾವಣಗೆರೆಯ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್‌. ಶ್ರೀಪಾದ ತಿಳಿಸಿದರು.

ದಾವಣಗೆರೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಪೋಕ್ಸೋ ಕಾನೂನಿನ ಅರಿವು, ಬಾಲ್ಯವಿವಾಹ ತಡೆ, ಬಾಲಕಾರ್ಮಿಕ, ಮಾದಕ ವಸುಗಳ ಸೇವನೆಯಿಂದ ಆಗುವ ಹಾನಿ ಹಾಗೂ ಮಕ್ಕಳ ಸುರಕ್ಷತೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನದ ಅಪರಾಧಗಳೆಂದರೆ ಕೇವಲ ಬಾಲಕಿಯರ ಮೇಲಷ್ಟೇ ಅಲ್ಲ, 18 ವರ್ಷದೊಳಗಿನ ಬಾಲಕ-ಬಾಲಕಿಯರ ಎನ್ನದೆ, ಲಿಂಗ ಭೇದವಿಲ್ಲದೆ ಯಾವುದೇ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳೇ ಆಗಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಶಾಲೆಯ ಮತ್ತು ಕಾಲೇಜುಗಳ ಶಿಕ್ಷಕರು ಮತ್ತು ಪ್ರಾಧ್ಯಾಪಕರು ಈ ನಿಟ್ಟಿನಲ್ಲಿ ಮಕ್ಕಳ ಮೇಲೆ ಸದಾ ಕಾಳಜಿ ವಹಿಸುವ ಮೂಲಕ ಅವರ ಚಲನ ವಲನಗಳನ್ನು ಗಮನಿಸಬೇಕು” ಎಂದು ಕಿವಿಮಾತು ಹೇಳಿದರು.

“ಲೈಂಗಿಕ ಅತ್ಯಾಚಾರಗಳು ಕೇವಲ ಅಪರಿಚಿತರಂದಲೇ ಆಗುತ್ತವೆ ಎನ್ನುವುದು ಸಹಜ. ಆದರೆ, ಅದೆಷ್ಟೋ ಪ್ರಕರಣಗಳು ಪೋಷಕರು, ಶಿಕ್ಷಕರು, ನೆರೆಹೊರೆಯವರು ಮತ್ತು ಸಂಬಂಧಿಕರಿಂದಲೇ ಇತ್ತೀಚಿನ ದಿನಗಳಲ್ಲಿ ಲೈಂಗಿಕ ಪ್ರಕರಣಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ಯಾವುದೇ ಮುಚ್ಚುಮರೆ ಇಲ್ಲದೆ ಸಂತ್ರಸ್ತರು ತಮ್ಮ ದೂರುಗಳನ್ನು ಸಂಬಂಧ ಪಟ್ಟ ಪೊಲೀಸ್ ಠಾಣೆಗೆ ಅಥವಾ ನ್ಯಾಯಾಲಯಕ್ಕೆ ನೀಡಿದಾಗ ತಪ್ಪಿತಸ್ಥರಿಗೆ ತಕ್ಷಣ ತಕ್ಕ ಶಿಕ್ಷೆ ನೀಡುವಲ್ಲಿ ನ್ಯಾಯಾಲಯ ಮುಂದಾಗಲಿದೆ, ಅಲ್ಲದೆ ಸಂತ್ರಸ್ತರಿಗೆ ಪರಿಹಾರ ನೀಡಲಿದೆ” ಎಂದು ಹೇಳಿದರು.

“ಯಾವುದೇ ಸ್ಥಳದಲ್ಲಾಗಲಿ ಲೈಂಗಿಕ – ದೌರ್ಜನ್ಯಗಳು ನಡೆದಾಗ ಅದನ್ನು ನೋಡಿದ ಅಥವಾ ಅದರ ಬಗ್ಗೆ ತಿಳಿದಿದ್ದರೂ ಸಹ ಅದರ ಈ ಬಗ್ಗೆ ಹೇಳದವರೂ ಸಹ ಆರೋಪಿಗಳ ಸ್ಥಾನದಲ್ಲಿ ಈ ನಿಲ್ಲುತ್ತಾರೆ. ಸಾರ್ವಜನಿಕರಾಗಲಿ ಅಥವಾ ಇನ್ನಿತರೆ ಯಾವುದೇ ಕ್ಷೇತ್ರದ ವ್ಯಕ್ತಿಗಳಾಗಲಿ ಇಂತಹ ತಪ್ಪುಗಳು ಕಂಡು ಬಂದಾಗ, ತಕ್ಷಣವೇ ಈ ಸಂಬಂಧಪಟ್ಟ ಪ್ರಾಧಿಕಾರಕ್ಕೆ ತಿಳಿಸುವ ಮೂಲಕ ಮಾಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್‌ ಮಾತನಾಡಿ, “ದೇಶಕ್ಕೆ ಸ್ವತಂತ್ರ ಬಂದು 76 ವರ್ಷಗಳು ಕಳೆದಿವೆ. ನಾವುಗಳು ಸಂವಿಧಾನವನ್ನು ಒಪ್ಪಿಕೊಂಡು ಅದರ ಅಡಿಯಲ್ಲಿ ಬಾಳುತ್ತಿದ್ದೇವೆ. ಅನೇಕ ಕಾನೂನುಗಳು ಇವೆ. ಎಲ್ಲ ಕಾನೂನುಗಳ ತಾಯಿ ನಮ್ಮ ಸಂವಿಧಾನ, ಸಮಾನತೆ, ಸಹಬಾಳ್ವೆ, ಸಮಾಜದ ಅಭಿವೃದ್ಧಿಗೆ ಹಲವು ಕಾನೂನುಗಳನ್ನು ನಮ್ಮ ಸಂವಿಧಾನ ರಚಿಸಿದೆ. ಆದರೆ, ಇಂದಿಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಶೋಷಣೆ ನಡೆಯುತ್ತಿವೆ. ಹಲವಾರು ಸಮಸ್ಯೆಗಳು ಈಗಲೂ ನಮ್ಮ ಮುಂದೆ ಇವೆ. ಸಮಾನತೆಯ ಯುಗ ಬಂದಿದ್ದರೂ ಸಹ ಹಿಂದಿನಷ್ಟು ಶೋಷಣೆ ಈಗ ಕಾಣುತ್ತಿಲ್ಲ” ಎಂದು ಹೇಳಿದರು.

“ಸಾರ್ವಜನಿಕರಲ್ಲಿ ಕಾನೂನಿನ ಅರಿವಿನ ಬಗ್ಗೆ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆ ಮುಂದಾಗಬೇಕಾಗಿದೆ. ಎಲ್ಲಾ ಹಂತದ ವ್ಯಕ್ತಿಗಳ ನಿರ್ಮಾಣದಲ್ಲಿ ಶಿಕ್ಷಣ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಕಾರಣ ಸಮಾಜವನ್ನು ತಿದ್ದುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ಶಿಕ್ಷಣ ಇಲಾಖೆ ನೀಡಬೇಕಾಗಿದೆ” ಎಂದು ಹೇಳಿದರು.

ಡಿಡಿಪಿಐ ಜಿ.ಕೊಟ್ರೇಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ.ಕರೆಣ್ಣವರ, ಬಿಇಓ ಡಾ.ಪುಷ್ಪಾಲತ, ಕ್ಷೇತ್ರ ಸಮನ್ವಯ ಅಧಿಕಾರಿ ಬಿ.ಎಂ. ಚೌಡಪ್ಪ, ವಕೀಲರ ಸಂಘದ ಎ.ಎಸ್.ಮಂಜುನಾಥ್, ಎಸ್‌. ಬಸವರಾಜ್‌ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...