ದಾವಣಗೆರೆ | ಹೆದ್ದಾರಿ ಬದಿ ತ್ಯಾಜ್ಯಕ್ಕೆ ಬೆಂಕಿ; ಸಾಲು ಮರಗಳಿಗೆ ಕಂಟಕ

Date:

ದಾವಣಗೆರೆ ಜಿಲ್ಲೆಯ ಹರಿಹರದ ಹೊರವಲಯದಲ್ಲಿ ನಗರದ ವಿವಿಧ ಅಂಗಡಿಗಳ ವ್ಯಾಪಾರಿಗಳು ತ್ಯಾಜ್ಯವನ್ನು ಹೆದ್ದಾರಿ ಮತ್ತು ರೈಲ್ವೆ ಮಾರ್ಗ ಮಧ್ಯದ ಜಾಗದಲ್ಲಿ ಸುರಿಯುತ್ತಿದ್ದಾರೆ. ಅಲ್ಲದೇ, ಈ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ರಸ್ತೆಬದಿಯ ಸಾಲು ಮರಗಳು ಮತ್ತು ಹತ್ತಿರದ ರೈಲ್ವೆ ವಿದ್ಯುತ್ ಮಾರ್ಗಕ್ಕೆ ಈ ಬೆಂಕಿ ಕಂಟಕವಾಗಿ ಪರಿಣಮಿಸಿದೆ.

ಸ್ಥಳೀಯರೂ ಸಹ ಕಸವನ್ನು ಇಲ್ಲೇ ಹಾಕುತ್ತಿದ್ದು, ತ್ಯಾಜ್ಯಕ್ಕೆ ಬೆಂಕಿ ಹಾಕುತ್ತಿರುವುದು ಅಪಾಯಕ್ಕೆ ಆಹ್ವಾನಿ ನೀಡುತ್ತಿದ್ದಾರೆ. ಹಳೆ ಪಿ.ಬಿ. ರಸ್ತೆಗೆ ಪರ್ಯಾಯವಾಗಿ 10 ವರ್ಷಗಳ ಹಿಂದೆ ಬೀರೂರು-ಸಮ್ಮಸಗಿ ಹೆದ್ದಾರಿ ನಿರ್ಮಿಸಲಾಯಿತು. ಈ ಹೆದ್ದಾರಿ ಪಕ್ಕದಲ್ಲೆ ಬೆಂಗಳೂರು-ಹುಬ್ಬಳ್ಳಿ ರೈಲ್ವೆ ಮಾರ್ಗವಿದೆ. ರೈಲ್ವೆ ಮಾರ್ಗ ಮತ್ತು ಹೆದ್ದಾರಿ ಮಧ್ಯೆ 30-40 ಅಡಿ ಖಾಲಿ ಜಾಗವಿದೆ. ಈ ಖಾಲಿ ಜಾಗದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಎರಡೂ ಬದಿ ಸಾಲು ಮರಗಳನ್ನು ನೆಟ್ಟಿದೆ.

ಹೆದ್ದಾರಿ ಬದಿಯಲ್ಲಿ ಓಡಾಡಿದರೆ ಕಸದ ರಾಶಿ ಬಿಟ್ಟರೆ ಬೇರೆನೂ ಕಾಣಸಿಗುವುದಿಲ್ಲ. ಕಸದ ರಾಶಿಗೆ ಹಾಕುವ ಬೆಂಕಿಯ ಜ್ವಾಲೆ 15 ಅಡಿ ಎತ್ತರದವರೆಗೆ ಹೊತ್ತಿ ಉರಿಯುತ್ತದೆ. ಹೆದ್ದಾರಿ ಬದಿ ಜಾಲಿ ಗಿಡಗಳೂ ಬೆಳೆದಿದ್ದು, ಬೆಂಕಿ ಆ ಗಿಡಗಳಿಗೂ ವ್ಯಾಪಿಸಿ ದೊಡ್ಡ ದೊಡ್ಡ ಮರಗಳಿಗೆ ಹೊತ್ತಿಕೊಳ್ಳುತ್ತಿದೆ. ಇದರ ಪಕ್ಕದಲ್ಲೇ ವಿದ್ಯುತ್ತೀಕರಣಗೊಂಡ ರೈಲ್ವೇ ಮಾರ್ಗವಿದ್ದು, ವಿದ್ಯುತ್ ಲೈನ್‌ಗೆ ಬೆಂಕಿ ತಗುಲಿದರೆ ಭಾರಿ ಅನಾಹುತವಾಗುವ ಸಂಭವಿಸಬಹುದು ಎನ್ನುವುದು ಪ್ರಜ್ಞಾವಂತ ನಾಗರಿಕರ ಕಾಳಜಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರದಲ್ಲಿ 2-3 ಬಾರಿ ಕಸದ ರಾಶಿಗೆ ಬೆಂಕಿ ಹಾಕುತ್ತಿದ್ದು, ದಟ್ಟವಾಗಿ ಏಳುವ ಹೊಗೆಯಿಂದ, ವಾಹನ ಸವಾರರಿಗೆ ತೊಂದರೆಯಾಗಿದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಇದೆ. ಅನಾಹುತ ಸಂಭವಿಸುವ ಮುನ್ನ ಕಸ ಹಾಕುವವರು ಹಾಗೂ ಕಸಕ್ಕೆ ಬೆಂಕಿ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿ ಓಡಾಡುವ ವಾಹನ ಸವಾರರು ಆಗ್ರಹಿಸುತ್ತಿದ್ದಾರೆ.

ಇಲ್ಲಿ ಕಸ ಹಾಕುವವರ ವಿರುದ್ಧ ನಗರಸಭೆ ದಂಡ ವಿಧಿಸಿ, ಪ್ರಕರಣ ದಾಖಲಿಸಲು ಮುಂದಾಗಬೇಕು. ಕಸ ಹಾಕುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು. ಇಲ್ಲದಿದ್ದರೆ ಕಸವನ್ನು ನಿಯಮಿತವಾಗಿ ವಿಲೇವಾರಿ ಮಾಡಬೇಕು ಎನ್ನುವುದು ವಾಹನ ಸವಾರರ ಆಗ್ರಹವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...