ದಾವಣಗೆರೆ | ಜಿಲ್ಲಾ ಬಿಜೆಪಿ ಘಟಕದಲ್ಲಿ ಗುಂಪುಗಾರಿಕೆ, ಕಾರ್ಯಕರ್ತರ ಸರಣಿ ಸಭೆ

Date:

ದಾವಣಗೆರೆಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ಕೆಲ ದಿನಗಳಿಂದ ನಡೆಯುತ್ತಿರುವ ಗುಂಪುಗಾರಿಕೆ ಹಾಗೂ ಕೆಲ ಮುಖಂಡರ ವರ್ತನೆಗೆ ದಾವಣಗೆರೆ ಜಿಲ್ಲೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ದಾವಣಗೆರೆ ಉತ್ತರ, ದಕ್ಷಿಣ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರು ಸರಣಿ ಸಭೆ ನಡೆಸಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಇದ್ದಾಗಲೇ ಕೆಲವರು ಹುಟ್ಟು ಹಾಕುತ್ತಿರುವ ಗೊಂದಲ, ಗದ್ದಲಗಳ ಬಗ್ಗೆ ಬಹುತೇಕ ಎಲ್ಲರಿಂದಲೂ ತೀವ್ರ ಅಸಮಾಧಾನ ವ್ಯಕ್ತವಾಯಿತಲ್ಲದೇ, ನಿಮ್ಮ ಇಂತಹ ಕೆಲಸ ಸಾವಿರಾರು ಕಾರ್ಯಕರ್ತರ ಕೆಂಗಣ್ಣಿಗೂ ಗುರಿಯಾಗಿದೆ ಎಂಬ ಎಚ್ಚರಿಕೆ ನೀಡಲಾಯಿತು ಎಂದು ಗೊತ್ತಾಗಿದೆ. ಸಭೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು, ಮಹಿಳಾ ಮುಖಂಡರು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಜಿ.ಮಲ್ಲಿಕಾರ್ಜುನಪ್ಪನವರು ಸ್ಪರ್ಧಿಸಿದಾಗಿನಿಂದ ತೀರಾ ಈಚಿನವರೆಗೂ ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಇದೇ ಜಿಲ್ಲೆಯವರಾಗಿದ್ದರು.

ಆದರೆ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ಸಿನ ನಾಯಕರು, ಸಿಎಂ, ಡಿಸಿಎಂ, ಕೆಲ ಸಚಿವರು, ವಿಶೇಷವಾಗಿ ದಾವಣಗೆರೆ ಕಾಂಗ್ರೆಸ್ಸಿನ ನಾಯಕರ ಭೇಟಿ ಮಾಡಿ ಬಂದ ನಂತರವಂತೂ ಕಾಂಗ್ರೆಸ್ಸಿನವರ ಮಾತುಗಳು ರೇಣುಕಾಚಾರ್ಯ ಮತ್ತಿತರರ ಬಾಯಿಂದ ಬರುತ್ತಿವೆ. ಇದೆಲ್ಲದರ ಹಿಂದೆ ಯಾವ ಕಾಣದೆ ಕೈಗಳಿವೆ ಎಂಬ ನಮ್ಮ ಪ್ರಶ್ನೆಗೆ ಮುಖಂಡರೆನಿಸಿಕೊಂಡವರು ಉತ್ತರ ಕೊಡಲಿ ಎಂಬ ಒತ್ತಾಯ ಕೇಳಿ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭೆ ಚುನಾವಣೆಗಳ ವೇಳೆ ಟಿಕೆಟ್ ವಿಚಾರಕ್ಕಾಗಲೀ, ಹಣದ ವಿಚಾರವೇ ಆಗಿರಲಿ ಎಲ್ಲದಲ್ಲೂ ಸಿದ್ದೇಶಪ್ಪ ಬೇಕು. ಈಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿನವರೇ ಬೆಚ್ಚಿ ಬೀಳುವಂತೆ ಬಿಜೆಪಿಯಲ್ಲಿರುವ ಕೆಲವರು ಕಾಂಗ್ರೆಸ್ಸಿನವರ ಮಾತುಗಳನ್ನಾಡುತ್ತಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಸತತವಾಗಿ 4 ಚುನಾವಣೆಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಬಿಜೆಪಿಗೆ ಭದ್ರ ನೆಲೆ ಮಾಡಿಕೊಟ್ಟವರು ಸಿದ್ದೇಶ್ವರ. ಒಟ್ಟು 6 ಸಲ ಬಿಜೆಪಿ ಗೆದ್ದಿದ್ದರೆ ಸಿದ್ದೇಶ್ವರರ ಕೊಡುಗೆ ಇದೆಯೆಂಬುದನ್ನು ಈಗ ವಿರೋಧಿಸುತ್ತಿರುವವರು ಅರ್ಥ ಮಾಡಿಕೊಳ್ಳಬೇಕು. ಇದ್ದಕ್ಕಿದ್ದಂತೆ ಇಂತಹವರಿಗೆ ಸಿದ್ದೇಶಪ್ಪ ಬೇರೆ ಜಿಲ್ಲೆಯವರಾದರೆ ಎಂದು ಅವರು ಪ್ರಶ್ನಿಸಿದರೆನ್ನಲಾಗಿದೆ.

ಸಭೆಯಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ ಗೌಡ, ಉತ್ತರ ಅಧ್ಯಕ್ಷ  ಬೇತೂರು ಸಂಗನಗೌಡ, ಬಿಜೆಪಿ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ, ಮುಖಂಡರಾದ ಬಿ.ಎಸ್.ಜಗದೀಶ, ಟಿ.ಶ್ರೀನಿವಾಸ ದಾಸಕರಿಯಪ್ಪ, ಮಂಜಾನಾಯ್ಕ, ದೂಡಾ ಮಾಜಿ ಅಧ್ಯಕರಾದ ಯಶವಂತರಾವ್ ಜಾಧವ್, ಎ.ವೈ.ಪ್ರಕಾಶ, ದೇವರಮನಿ ಶಿವಕುಮಾರ, ರಾಜನಹಳ್ಳಿ ಶಿವಕುಮಾರ, ಕೊಂಡಜ್ಜಿ ಜಯಪ್ರಕಾಶ, ವಕೀಲ ರಾಘವೇಂದ್ರ ಮೊಹರೆ.

ಮಾಜಿ ಮೇಯರ್ ಗಳಾದ ಡಿ.ಎಸ್.ಉಮಾ ಪ್ರಕಾಶ, ಎಸ್.ಟಿ.ವೀರೇಶ, ಪಾಲಿಕೆ ಉಪ ಮೇಯರ್ ಯಶೋಧ ಯೋಗೇಶ, ವಿಪಕ್ಷ ನಾಯಕ ಕೆ.ಎಸ್.ಪ್ರಸನ್ನಕುಮಾರ, ಆ‌ರ್.ಎಲ್.ಶಿವಪ್ರಕಾಶ, ಆರ್.ಶಿವಾನಂದ, ಮಾಜಿ ಉಪ ಮೇಯರ್ ಪಿ.ಎಸ್. ಜಯಣ್ಣ, ಆನಂದರಾವ್ ಸಿಂಧೆ, ರಾಜು ನೀಲಗುಂದ, ಶಿವನಗೌಡ ಪಾಟೀಲ್‌, ಟಿಂಕರ್ ಮಂಜಣ್ಣ, ಪಿ.ಎಸ್.ಬಸವರಾಜ, ಕೆ.ಹೇಮಂತಕುಮಾರ, ಮುಕುಂದ, ಶಿವಾಜಿ ರಾವ್, ಸುರೇಶ  ಗಂಡಗಾಳೆ ಹಾಗೂ ಕಾರ್ಯಕರ್ತರು ಮುಖಂಡರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...