ದಾವಣಗೆರೆ | ‘ಗೃಹಜ್ಯೋತಿ’ ವೇದಿಕೆಯಲ್ಲಿ ‘ಅನ್ನಭಾಗ್ಯ’ ಪ್ರಸ್ತಾಪಿಸಿದ ಬಿಜೆಪಿ ಶಾಸಕ : ರೊಚ್ಚಿಗೆದ್ದ ಸಭಿಕರು

Date:

  • ಮೋದಿಯವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂದ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್​​
  • ಸಮಾರಂಭ ವೇದಿಕೆಯಲ್ಲಿ ಕೆಲಕಾಲ ಗದ್ದಲ, ಮಾತಿನ ಚಕಮಕಿ: ಸಮಾಧಾನಿಸಿದ ಸಚಿವ ಮಲ್ಲಿಕಾರ್ಜುನ್

‘ಗೃಹಜ್ಯೋತಿ’ ಯೋಜನೆಯ ಉದ್ಘಾಟನೆಯ ವೇಳೆ ‘ಅನ್ನಭಾಗ್ಯ’ದ ವಿಚಾರವನ್ನು ಬಿಜೆಪಿ ಶಾಸಕ ಪ್ರಸ್ತಾಪಿಸಿದ ಬಳಿಕ ಸಭೆಯಲ್ಲಿ ಮಾತಿನ ಚಕಮಕಿಗೆ ಕಾರಣವಾಗಿ, ಸಭಿಕರು ರೊಚ್ಚಿಗೆದ್ದ ಘಟನೆ ದಾವಣಗೆರೆಯಲ್ಲಿ ಇಂದು ನಡೆದಿದೆ.

ನಿನ್ನೆ ರಾಜ್ಯಮಟ್ಟದಲ್ಲಿ ಉದ್ಘಾಟನೆಯಾಗಿದ್ದ ‘ಗೃಹಜ್ಯೋತಿ’ ಯೋಜನೆ, ಇಂದು ದಾವಣಗೆರೆಯಲ್ಲಿ ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗಿತ್ತು. ಇದರಲ್ಲಿ ಜಿಲ್ಲಾ ಉಸ್ತುವಾರಿ ಎಸ್​.ಎಸ್​.ಮಲ್ಲಿಕಾರ್ಜುನ ಸಹಿತ ಜಿಲ್ಲೆಯ ಎಲ್ಲ ಶಾಸಕರನ್ನೂ ಆಹ್ವಾನಿಸಲಾಗಿತ್ತು. ಸರ್ಕಾರಿ ಕಾರ್ಯಕ್ರಮವಾದ್ದರಿಂದ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಹರಿಹರದ ಬಿ.ಪಿ.ಹರೀಶ್ ಅವರಿಗೂ ಆಹ್ವಾನ ನೀಡಲಾಗಿತ್ತು. ಹಾಗಾಗಿ, ಅವರೂ ಕೂಡ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಿ.ಪಿ.ಹರೀಶ್ ಮಾತನಾಡುವುದಕ್ಕಿಂತ ಮುಂಚಿತವಾಗಿ ಮಾತನಾಡಿದ್ದ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವಂತಪ್ಪ, ‘ನಮ್ಮ ಸರ್ಕಾರದ ಅನ್ನಭಾಗ್ಯ ಗ್ಯಾರಂಟಿಗೆ ಪ್ರಧಾನಿ ಮೋದಿಯವರು ಅಕ್ಕಿಯನ್ನು ನೀಡಲು ಒಪ್ಪಿಲ್ಲ. ಹಾಗಾಗಿ, ಸಿದ್ದರಾಮಯ್ಯ ಸರ್ಕಾರ ಹಣ ನೀಡುವ ಮೂಲಕ ಕೊಟ್ಟ ಮಾತು ಉಳಿಸಿಕೊಂಡಿದೆ’ ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಮಾತನಾಡಿದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಇದನ್ನು ಉಲ್ಲೇಖಿಸಿ, ‘ಪ್ರಧಾನಿ ನರೇಂದ್ರ ಮೋದಿಯವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ದೇಶದಲ್ಲಿ ಎಲ್ಲ ರಾಜ್ಯಗಳು 10 ಕೆ ಜಿ, 20 ಕೆ ಜಿ ಕೊಡ್ತೀವಿ ಅಂತ ಘೋಷಣೆ ಮಾಡಿದ್ರೆ ನಿರೀಕ್ಷೆಗೆ ತಕ್ಕಂತೆ ಕೊಡಲಿಕ್ಕೆ ಆಗಲ್ಲ’ ಎಂದು ಹೇಳಿಕೆ ನೀಡಿದರು.

bjp mla

ಈ ಹೇಳಿಕೆ ನೀಡಿದ ಕೂಡಲೇ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಭೆಯಲ್ಲಿದ್ದ ಕೆಲ ಸಭಿಕರು, ಯಾವ ಸಭೆಯಲ್ಲಿ ಏನು ಮಾತನಾಡಬೇಕು ಅಂತ ಗೊತ್ತಿಲ್ವಾ ನಿಮಗೆ? ಸಾಕು ಮಾತು ನಿಲ್ಲಿಸಿ ಅಂತ ಬೊಬ್ಬೆ ಹೊಡೆದರು.

ಇದೇ ವೇಳೆ ಸಭೆಯ ವೇದಿಕೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತನೋರ್ವ ಬಿಜೆಪಿ ಶಾಸಕರಿಂದ ಮೈಕ್ ಕಿತ್ತುಕೊಂಡು, ‘ನಮ್ಮ ಸರ್ಕಾರ ಬಂದಿದೆ ಅಂತ ನೀವು ಈ ರೀತಿ ಮಾತನಾಡ್ತಾ ಇದ್ದೀರಾ. ನಿಮಗೆ ಮಾತನಾಡಲು ಯಾವುದಕ್ಕೆ ಅವಕಾಶ ಕೊಟ್ಟಿದ್ದಾರೋ ಅದನ್ನಷ್ಟೇ ಮಾತನಾಡಿ’ ಎಂದು ಜೋರು ಧ್ವನಿಯಲ್ಲೇ ಮಾತನಾಡಿದರು.

ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಆತನನ್ನು ದೂರ ಕಳುಹಿಸಿದರು. ವೇದಿಕೆ ಮುಂಭಾಗ ಜಮಾಯಿಸಿದ್ದ ಕೆಲವರು ಶಾಸಕರೊಂದಿಗೆ ವಾಗ್ವಾದ ಕೂಡ ನಡೆಸಿದರೆ, ಕೆಲವರು ‘ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೈ’ ಎಂದು ಘೋಷಣೆ ಕೂಗಿದರು.

Capture 3

ಕೊನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಎಸ್​.ಮಲ್ಲಿಕಾರ್ಜುನ ಮಧ್ಯಸ್ಥಿಕೆ ವಹಿಸಿ ಸಭಿಕರೆಲ್ಲರನ್ನೂ ಸಮಾಧಾನಪಡಿಸಿದರು. ಆ ಬಳಿಕ ಬಿಜೆಪಿ ಶಾಸಕರಿಗೆ ಮಾತು ಮುಂದುವರಿಸಲು ಅವಕಾಶ ಮಾಡಿಕೊಟ್ಟರು. ನಂತರ ಪರಿಸ್ಥಿತಿ ತಿಳಿಯಾಯಿತು.

ಬಳಿಕ ಮಾತನಾಡಿದ ಸಚಿವ ಎಸ್​.ಎಸ್​.ಮಲ್ಲಿಕಾರ್ಜುನ, ‘ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡಲಿಲ್ಲ. ಮೊದಲು ಹೆಚ್ಚುವರಿ ಪೂರೈಸಲು ಬಿಜೆಪಿಯವರು ಕೇಂದ್ರಕ್ಕೆ ಹೇಳಿ’ ಎಂದು ‘ಗೃಹಜ್ಯೋತಿ’ ಉದ್ಘಾಟನಾ ಸಮಾರಂಭದಲ್ಲಿ ಮಲ್ಲಿಕಾರ್ಜುನ್ ಹೇಳಿದರು.

‘ಕೋವಿಡ್ ಸಮಯದಲ್ಲೂ ಪ್ರಧಾನಿ ಯಾವುದೇ ಸಹಾಯ ಮಾಡಲಿಲ್ಲ. ನಾವು ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆ ಈಡೇರಿಸುತ್ತಿದ್ದೇವೆ. ಅದನ್ನು ಬಿಜೆಪಿಯವರು ಗಮನಿಸಲಿ’ ಎಂದು ಅದೇ ವೇದಿಕೆಯಲ್ಲಿ ಟಾಂಗ್ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ದೇವೇಂದ್ರಪ್ಪ,ಲತಾ ಮಲ್ಲಿಕಾರ್ಜುನ್, ಮಹಾಪೌರರಾದ ಬಿ.ಹೆಚ್ ವಿನಾಯಕ್, ಮಾಜಿ ಶಾಸಕ ರಾಮಪ್ಪ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...