ದಾವಣಗೆರೆ | ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ: ಶಾಸಕ ಬಿ.ದೇವೇಂದ್ರಪ್ಪ

Date:

ರಾಜ್ಯದಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಕೈ ತುಂಬಾ ಕೆಲಸ ಕೊಡಿ. ಕಾರ್ಮಿಕರಿಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಬಿ.ದೇವೇಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿರುವ ಶಾಸಕರ ಜನ ಸಂಪರ್ಕ ಕಚೇರಿ ಆವರಣದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ಪದಾಧಿಕಾರಿಗಳ ಪ್ರತಿಭಟನಾ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಕಾರ್ಮಿಕರು ಒಟ್ಟಾಗಿ ಬಂದು ದುಡಿದ ಕೂಲಿ ಹಣವನ್ನು ಕೇಳುತ್ತಿದ್ದಾರೆ. ಆದರೆ, ಕೂಲಿ ಹಣ ಕೊಡಲು ಸತಾಯಿಸುತ್ತಿರುವುದು ಸರಿಯಲ್ಲ. ಬಡವರ ಜೊತೆ ಚೆಲ್ಲಾಟವಾಡಿದರೆ ನಾನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಣಬೂರು ಸೇರಿದಂತೆ ಅನೇಕ ಗ್ರಾ.ಪಂ ಪಿಡಿಒಗಳು ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಂತಹ ಪಿಡಿಒಗಳ ಸಭೆ ಕರೆದು ಕಾರ್ಮಿಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮಗಿಲ್ಲವೇ ಎಂದು ತಾ.ಪಂ ಇಒ ಕೆ.ಟಿ.ಕರಿಬಸಪ್ಪ ಮತ್ತು ನರೇಗಾ ಎಡಿ ವೈ.ಎಚ್.ಚಂದ್ರಶೇಖರ್ ಅವರಿಗೆ ಪ್ರಶ್ನಿಸಿದ ಶಾಸಕರು, ಕಾರ್ಮಿಕರ ಜೀವನದ ಜೊತೆ ಚೆಲ್ಲಾಟವಾಡಬೇಡಿ. ಅನಗತ್ಯವಾಗಿ ಕೂಲಿ ಕಾರ್ಮಿಕರಿಗೆ ತೊಂದರೆ ಕೊಡಬೇಡಿ. ತಾಂತ್ರಿಕ ಸಮಸ್ಯೆಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದಲ್ಲವೇ ಎಂದು ಗುಡುಗಿದರು.

ಗ್ರಾಕೂಸ್ ತಾಲೂಕು ಕಾರ್ಯದರ್ಶಿ ಪಿ.ಎಸ್.ಸುಧಾ ಮಾತನಾಡಿ, ಪಲ್ಲಾಗಟ್ಟೆ ಗ್ರಾ.ಪಂ ಪಿಡಿಓ ಆಗಿದ್ದ ಶಿಶಿಧರ್ ಪಟೇಲ್ ಇದುವರೆಗೂ ನಿರುದ್ಯೋಗಿ ಭತ್ಯೆ ಕೊಟ್ಟಿಲ್ಲ. ಅಷ್ಟೇ ಅಲ್ಲ ಅಣಬೂರು ಪಿಡಿಒ ಓಬಯ್ಯ ಸಹ ನಿರುದ್ಯೋಗಿ ಭತ್ಯೆ ಕೊಡದೇ ಕಾರ್ಮಿಕರಿಗೆ ಸತಾಯಿಸುತ್ತಿದ್ದಾರೆ. ಎನ್ಎಂಆರ್ ಝೀರೋ ಆದರೂ ಪಿಡಿಒಗಳಿಂದ ನಿರುದ್ಯೋಗಿ ಭತ್ತೆ ಕೊಡಬೇಕು. ಆದರೆ, ಅಂತಹ ಪಿಡಿಒಗಳ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಹೊಸ ಜಾಬ್ ಕಾರ್ಡ್ ಕೊಡುತ್ತಿಲ್ಲ. ಚಾಲ್ತಿಯಲ್ಲಿರುವ ಜಾಬ್ ಕಾರ್ಡ್‌ಗೂ ಉದ್ಯೋಗ ಕೊಡುತ್ತಿಲ್ಲ. ಬರದಿಂದ ನಲುಗಿ ಹೋಗಿದ್ದೇವೆ. ಕೆಲಸ ಕೊಡಬೇಕಾಗುತ್ತದೆ ಎಂದು ಇಲ್ಲಸಲ್ಲದ ತಾಂತ್ರಿಕ ಸಬೂಬು ಹೇಳುತ್ತಿದ್ದಾರೆ. ತಾ.ಪಂ ಇಓ ಮತ್ತು ಸಿಇಓ ಸೇರಿ ಪಿಡಿಒಗಳಿಗೆ ನಿರುದ್ಯೋಗಿ ಭತ್ಯೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.

ಗ್ರಾಕೂಸ್ ಕಾರ್ಯದರ್ಶಿ ಶ್ರುತಿ, ನರೇಗಾ ಹಣ ತಕ್ಷಣ ಕಾರ್ಮಿಕರ ಖಾತೆಗಳಿಗೆ ಜಮಾ ಮಾಡಬೇಕು. ಬರ ಪರಿಹಾರಕ್ಕಾಗಿ ಹೆಚ್ಚುವರಿ 50 ಮಾನವ ದಿನಗಳ ಕೆಲಸವನ್ನು ಒದಗಿಸುವಂತೆ ಆದೇಶ ನೀಡಬೇಕು, ಕಾರ್ಮಿಕರು ಬಿರು ಬಿಸಿಲಿನಲ್ಲಿ ದಿನಕ್ಕೆ ಎರಡು ಸಮಯ ಹಾಜರಾತಿ ಮಾಡಿರುವುದರಿಂದ ಕೆಲಸ ಮುಗಿಸಿದರೂ, ಹಾಜರಾತಿಗಾಗಿ ಕಾಯುವಂತಾಗಿದೆ ಎಂದು ಹೇಳಿದರು.

ಈ ವೇಳೆ ಗ್ರೇಟ್ -2 ತಹಶೀಲ್ದಾರ್ ಮಂಜಾನಂದ, ತಾ.ಪಂ ಇಓ ಕೆ.ಟಿ.ಕರಿಬಸಪ್ಪ, ನರೇಗಾ ಎಡಿ ವೈ.ಎಚ್.ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಬಿ.ಮಹೇಶ್ವರಪ್ಪ ಯಲ್ಲಮ್ಮ, ನಾಗರಾಜ್, ಮಾದೀಹಳ್ಳಿ ಪರಮೇಶ್ವರಪ್ಪ, ರೇಣುಕಮ್ಮ, ಅನಸೂಯಮ್ಮ, ಅಣಬೂರು ಮಹಾಲಕ್ಷ್ಮಿ, ಮರೀಕುಂಟೆ ಹನುಮಂತಪ್ಪ,  ಸೇರಿದಂತೆ ಗ್ರಾಕೂಸ್‌ನ ನೂರಾರು ಕೂಲಿ ಕಾರ್ಮಿಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...