ದಾವಣಗೆರೆ | ಅಕ್ರಮವಾಗಿ ಆಸ್ತಿ ಒತ್ತುವರಿ; ಅಧಿಕಾರಿಗಳ ವಿರುದ್ಧ ಗೆದ್ದು ಬೀಗಿದ ರೈತ ಮೇಘರಾಜಪ್ಪ

Date:

ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಜಗಳೂರು ತಾಲೂಕು ಅಧಿಕಾರಿಗಳ ವಿರುದ್ಧ ವೃದ್ಧ ರೈತರೊಬ್ಬರು ಗೆದ್ದು ಬೀಗಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ಒಡೆಯರಳ್ಳಿ ಗ್ರಾಮದ ರೈತ ಮೇಘರಾಜಪ್ಪ ಸ್ಥಳೀಯ ಆಡಳಿತದ ವಿರುದ್ಧ ಛಲ ಬಿಡದೆ ಹೋರಾಡಿ ತಮ್ಮ ಜಮೀನನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ. ಅಂತಿಮವಾಗಿ ಹಿಂದಿನ ಅವಧಿಯ ಮತ್ತು ಪ್ರಸ್ತುತ ಅವಧಿಯ ಅಧಿಕಾರಿಗಳು ಲೋಕಾಯುಕ್ತ ಕೋರ್ಟ್‌ನಲ್ಲಿ ಹಾಜರಾಗಿ, ರೈತ ಮೇಘರಾಜಪ್ಪನವರ ಜಮೀನಿಗೆ ಯಾವುದೇ ಅತಿಕ್ರಮ ಪ್ರವೇಶ ಮಾಡುವುದಾಗಲಿ, ಜಮೀನಿನ ವಿಷಯದಲ್ಲಿ ತಲೆ ಹಾಕುವುದಾಗಲೀ ಮಾಡುವುದಿಲ್ಲ” ಎಂದಿದ್ದಾರೆ.

ಈ ಹಿಂದೆ ವೃದ್ಧರ ಇತರೆ ಜಮೀನಿನ ಕಬಳಿಕೆ ಸಂಬಂಧಪಟ್ಟಂತೆ ಈದಿನ ಡಾಟ್‌ ಕಾಂರೈತರ ಜಾಗ ಕಬಳಿಸಲು ದಿದ್ದಿಗೆ ಗ್ರಾಮ ಪಂಚಾಯಿತಿ ಹುನ್ನಾರ, ಆರೋಪ” ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು. ಹಲವಾರು ವರ್ಷಗಳಿಂದ ಪೂರ್ವಜರ ಆಸ್ತಿಯನ್ನು ಉಳಿಸಿ ಅನುಭವಿಸಿಕೊಂಡು ಬಂದಿದ್ದ ಜಾಗವನ್ನು ಕಬಳಿಸಲು ಸ್ಥಳೀಯ ಆಡಳಿತ ಯತ್ನಿಸಿದಾಗ. ಮೇಘರಾಜಪ್ಪ ಇದರ ವಿರುದ್ಧ ಹೋರಾಡಿ 1999ರಲ್ಲಿ ತಮ್ಮ ಪರವಾಗಿ ಆದೇಶ ಪಡೆದಿದ್ದರು. ಅಲ್ಲಿಂದಲೂ ಯಾವುದೇ ತಕರಾರು ಮಾಡದಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು 2021ರಲ್ಲಿ ಆಸ್ತಿಯ ಈ-ಸ್ವತ್ತಿಗೆ ಅರ್ಜಿ ಹಾಕಿದಾಗ ಈ ಖಾತೆ ಮಾಡಿಕೊಡಲು ₹50,000 ಲಂಚ ಕೇಳಿದ್ದರು. ಆದರೆ ಅದನ್ನು ನಿರಾಕರಿಸಿದಾಗ ಸದರಿ ಜಮೀನನ್ನು ಶಾಲೆ ಮತ್ತು ಗ್ರಾಮ ಪಂಚಾಯಿತಿ ಜಾಗವೆಂದು ಅಕ್ರಮವಾಗಿ ವಶಪಡಿಸಿಕೊಳ್ಳಲು 14 ಮಂದಿಗೆ ನೋಟಿಸ್ ನೀಡಿದ್ದರು. ಆ ಪೈಕಿ ಮೇಘರಾಜಪ್ಪನವರ ಜಮೀನನ್ನು ಕಬಳಿಸಲು ಸಂಚು ರೂಪಿಸಲಾಗಿತ್ತು ಎಂದು ಆರೋಪ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

ಈ ಬಗ್ಗೆ ಲೋಕಾಯುಕ್ತ ನ್ಯಾಯಾಲಯದಲ್ಲಿ, ಆ ಜಾಗವು ಶಾಲೆ ಅಥವಾ ಗ್ರಾಮ ಪಂಚಾಯಿತಿಗೆ ಸೇರಿದ ಜಾಗವೆಂದು ಖಚಿತಪಡಿಸಲು ಯಾವುದೇ ಪೂರಕ ದಾಖಲೆಗಳಿರದೆ ಅಧಿಕಾರಿಗಳು ದಾಖಲೆ ಸಲ್ಲಿಸಲು ವಿಫಲರಾಗಿದ್ದರು. ಇಲ್ಲಿ ಮೇಘರಾಜಪ್ಪನವರು ಪೂರಕ ದಾಖಲೆಗಳನ್ನು ಒದಗಿಸಿದ್ದರು. ಈ ಬಗ್ಗೆ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ತಪ್ಪಾಗಿರುವುದನ್ನು ಕಂಡು ಎಚ್ಚೆತ್ತಿರುವ ಅಧಿಕಾರಿಗಳು ಡಿಸೆಂಬರ್‌ನಲ್ಲಿ ಸ್ಥಳ ಮಹಜರು ಮಾಡಿ ಲೋಕಾಯುಕ್ತ ಕೋರ್ಟಿಗೆ ವರದಿ ಸಲ್ಲಿಸಿದ್ದು, ಈ ಜಮೀನಿಗೆ ಯಾವುದೇ ಅತಿಕ್ರಮ ಪ್ರವೇಶ ಮತ್ತು ಜಮೀನಿನ ವಿಷಯದಲ್ಲಿ ಪ್ರವೇಶ ಮಾಡುವುದಿಲ್ಲವೆಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಾಲಯ ವೃದ್ಧರೈತ ಮೇಘರಾಜಪ್ಪನಿಗೆ ನ್ಯಾಯ ಒದಗಿಸಿಕೊಟ್ಟಿದೆ.

ರೈತ ಮೇಘರಾಜಪ್ಪನ ಆಸ್ತಿಯನ್ನು ಅಳತೆ ಮಾಡಲಾಗಿದ್ದು, ಯೋಜನೆ ಸಿದ್ಧಪಡಿಸಿ, ಅವರ ಸ್ವಾಧೀನದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲವೆಂಬ ಭರವಸೆ ನೀಡಲಾಗಿದೆ.

ರೈತ ಮೇಘರಾಜಪ್ಪ ತನ್ನ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವ ಮತ್ತು ಅನುಭವಿಸುವಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲವೆಂದು ದಿದ್ದಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಹಶೀಲ್ದಾರ್ ಮತ್ತು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯದಲ್ಲಿ ಒಪ್ಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...