ದಾವಣಗೆರೆ | ಶಿವಗಂಗೋತ್ರಿಯಲ್ಲಿ ಮಹಿಳೆಯರದ್ದೇ ಶೈಕ್ಷಣಿಕ ಸಾಧನೆ

Date:

ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ್ ಐದು ಪದಕಗಳೊಂದಿಗೆ ಈ ವರ್ಷ ದಾವಣಗೆರೆ ವಿಶ್ವವಿದ್ಯಾನಿಲಯದ ಚಿನ್ನದ ರಾಣಿ ಗೌರವಕ್ಕೆ ಪಾತ್ರರಾಗಿದ್ದಾರೆ. ಸ್ನಾತಕ ಪದವಿಯಲ್ಲಿ ಹೊನ್ನಾಳಿಯ ಎಸ್‌.ಸಿಂಧುಬಾಯಿ ಮೂರು ಚಿನ್ನದ ಪದಕಗಳಿಸಿದ್ದಾರೆ.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಸೇರಿ ಒಟ್ಟು 79 ಚಿನ್ನದ ಪದಕಗಳನ್ನು 45 ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. ಇವರಲ್ಲಿ 39 ಮಹಿಳೆಯರಿದ್ದರೆ, ಕೇವಲ 6 ಪುರುಷ ವಿದ್ಯಾರ್ಥಿಗಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ನಾತಕ ಪದವಿಯಲ್ಲಿ 10 ಮಹಿಳೆಯರು ಮತ್ತು 2 ಪುರುಷ ವಿದ್ಯಾರ್ಥಿಗಳು 20 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ 29 ವಿದ್ಯಾರ್ಥಿನಿಯರು ಮತ್ತು 4 ಪುರುಷರು 59 ಸ್ವರ್ಣ ಪದಕಗಳನ್ನುಗಳಿಸಿದ್ದಾರೆ.

ಚಿನ್ನದ ರಾಣಿ ದೀಪ್ತಿ ಜೆ.ಗೌಡರ್ ಅವರು ವೀರಮ್ಮ ಶಾಂತವೀರಪ್ಪ ಅಥಣಿ, ಚನ್ನಬಸಮ್ಮ ಮುರಿಗೆಪ್ಪ ದೇವರಮನೆ, ಚಿಕ್ಕಣ್ಣ ಕಂಪಲಾಪುರ, ಕಣಿವೆ ಜೋಗಿಹಳ್ಳಿ ರಾಮಕ್ಕ ಗೌಡರ ತಿಮ್ಮಪ್ಪ, ಜಿ.ಎಸ್.ಕಮಲಮ್ಮ, ಬಿ.ನರಸಿಂಹಪ್ಪ ಸ್ಮಾರಕ ಚಿನ್ನದ ಪದಕಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಸ್ನಾತಕ ಕಲಾ ಪದವಿಯಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಎಸ್.ಸಿಂಧುಬಾಯಿ ಮೂರು ಚಿನ್ನದ ಪದಕ ಪಡೆದಿದ್ದಾರೆ. ಇವರು ತರಳುಬಾಳು ಬೃಹನ್ಮಠ ಸಿರಿಗೆರೆಯ ಲಿಂಗೈಕ್ಯ ಹಿರಿಯ ಜಗದ್ಗುರು ಶ್ರೀಶಿವಕುಮಾರ ಶಿವಾಚಾಯ ಮಹಾಸ್ವಾಮಿಗಳು, ಬಿ.ಎಸ್.ಚನ್ನಬಸಪ್ಪ ಅಂಡ್ ಸನ್ಸ್‌ ಹಾಗೂ ಸುಧಾ ಮತ್ತು ಕಟೀಲ್‌ ಪದ್ಮನಾಭ ಭಟ್‌ ಸ್ಮಾರಕ ಸ್ವರ್ಣ ಪದಕಗಳನ್ನು ಪಡೆದರು.

ಇವರಲ್ಲದೆ ಸ್ನಾತಕೋತ್ತರ ಪದವಿಯ ಅರ್ಥಶಾಸ್ತ್ರ ವಿಭಾಗದ ಎಂ.ವೈ.ಚಂದನ, ಇಂಗ್ಲಿಷ್ ವಿಭಾಗದ ಜಿ.ಕೆ.ಮೋನಿಕಾ, ಬಿಎಡ್‌. ಪದವಿಯ ಟಿ.ಎನ್.ಕಾವ್ಯಾ, ಜೀವರಾಸಾಯನಶಾಸ್ತ್ರ ವಿಭಾಗದ ಸಾನಿಯಾ ಅಂಜುಂ, ಜೀವಶಾಸ್ತ್ರ ವಿಭಾಗದ ಫರಾನಾ ಸುರನ್ ಅವರು ತಲಾ ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಸ್ನಾತಕೋತ್ತರ ಕನ್ನಡ ವಿಭಾಗದ ಡಿ.ರೇವಣಸಿದ್ದಪ್ಪ, ಪತ್ರಿಕೋದ್ಯಮ ವಿಭಾಗದ ಬಿ.ಮೀನಾಕ್ಷಿ, ರಾಜ್ಯಶಾಸ್ತ್ರ ವಿಭಾಗದ ಆ‌ರ್.ಕೆ.ಪೂಜಾ, ಬಿವಿಎ ವಿಭಾಗದ ಜಯಲಕ್ಷ್ಮೀ ಅನಂತಾಚಾರ್ಯ ಉಪಾಧ್ಯೆ, ಎಂಬಿಎ ವಿಭಾಗ ವೈ.ಶಾಝಿಯಾ ಮತ್ತು ಟಿ.ಕೃತಿಕಾ, ಎಂ.ಪಿ.ಎಡ್ ವಿಭಾಗದ ಎನ್.ಕಿರಣಕುಮಾರ, ರಾಸಾಯನಶಾಸ್ತ್ರ ವಿಭಾಗ ಐ.ಕೆ.ಸಂಗೀತಾ, ಸಸ್ಯಶಾಸ್ತ್ರ ವಿಭಾಗದ ಎಸ್‌.ಜೆ.ಜಯಶ್ರೀ, ಕಂಪ್ಯೂಟ‌ರ್ ವಿಜ್ಞಾನ ವಿಭಾಗದ ಎಂ.ಅಂಬಿಕಾ, ಆಹಾರ ತಂತ್ರಜ್ಞಾನ ವಿಭಾಗದ ಎಚ್.ಎ.ದೀಪಿಕಾ, ಅಣುಜೀವಿಶಾಸ್ತ್ರ ವಿಭಾಗದ ಎಸ್‌.ದಿವ್ಯಶ್ರೀ, ಭೌತಶಾಸ್ತ್ರ ವಿಭಾಗದ ಕೆ.ಯಶೋದಾ ತಲಾ ಎರಡು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ಸ್ನಾತಕ ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗದ ಎಸ್.ಜೆ.ಎಂ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿನಿ ಸಿ.ಎಸ್.ಪೂಜಾ ಮತ್ತು ಸ್ನಾತಕ ಕಂಪ್ಯೂಟರ್ ಅಪ್ಲಿಕೇಶನ್ ಪದವಿಯಲ್ಲಿ ದಾವಣಗೆರೆಯ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್‌ ಹೈಟೆಕ್‌ ಎಜುಕೇಶನ್ ಕಾಲೇಜಿನ ವಿದ್ಯಾರ್ಥಿನಿ ಜಿ.ಎಂ. ಸುಮತಿ ಅವರು ತಲಾ ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಒಟ್ಟಾರೆಯಾಗಿ ಎಲ್ಲಾ ವಿಭಾಗಗಳಲ್ಲಿ ಚಿನ್ನದ ಪದಕಗಳಿಸಿ ಮಹಿಳೆಯರು ಮೇಲುಗೈ ಸಾಧಿಸಿರುವುದು ವಿಶೇಷ ಇಂದು ಘಟಿಕೋತ್ಸವ ಹಾಗೂ ಪದಕ ಪ್ರದಾನ ಸಮಾರಂಭ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...