ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಲ್ಲ – ಪ್ರಜಾಪ್ರಭುತ್ವದ ಕಗ್ಗೊಲೆ

Date:

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದೆ. ಆದರೆ, ನಾನು ಅದನ್ನು ಗೆಲುವು ಎಂದು ಭಾವಿಸುವುದಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2 ಪಕ್ಷಗಳು ಹಣದ ಹೊಳೆಯನ್ನು ಹರಿಸಿ ಮತಗಳನ್ನು ಖರೀದಿ ಮಾಡಿದ್ದಾರೆ. ನನಗೆ ಸಿಗಬೇಕಾದ ಟಿಕೆಟ್ ಅನ್ನು ತಪ್ಪಸಿದರು. ನಾನು ಪಕ್ಷೇತರನಾಗಿ ಚುನಾವಣೆಗೆ ನಿಂತಾಗ ನನ್ನ ಜೊತೆಗಿದ್ದ ಮುಖಂಡರನ್ನು ದುಡ್ಡುಕೊಟ್ಟು ಹಣಬಲ ತೋಳ್ಬಲದಿಂದ ಹೆದರಿಸಿ ಬೆಂಬಲಿಸದಂತೆ, ಮತ ಹಾಕದಂತೆ ನೋಡಿಕೊಂಡಿದ್ದಾರೆ” ಎಂದು ಆರೋಪಿಸಿದರು.

“ಪ್ರಜಾಪ್ರಭುತ್ವದ ಉಳಿವಿಗಾಗಿ, ಪಾಳೆಗಾರಿಕೆ ವಿರುದ್ಧ ಪಕ್ಷೇತರನಾಗಿ ನಾನು ಸ್ಪರ್ಧಿಸಿದ್ದೆ ನನಗೆ ಹಣ ಹಂಚದಿದ್ದರೂ 42 ಸಾವಿರಕ್ಕೂ ಹೆಚ್ಚು ಮತ ಬಂದಿದೆ. 1 ಲಕ್ಷ 50 ಸಾವಿರ ವೋಟ್ ಸಿಗುವ ನಿರೀಕ್ಷೆಯಲ್ಲಿದ್ದೆ. ಆದರೆ, ಕಡಿಮೆ ಬಂದಿದ್ದು ನನಗೆ ಅಚ್ಚರಿ ಜೊತೆ ನೋವು ತಂದಿದೆ. ಚುನಾವಣೆಯಲ್ಲಿ ಕತ್ತಲು, ರಾತ್ರಿ ಎಂಬುದು ಸಂಸ್ಕೃತಿಯಾಗಿ ಬೆಳೆದಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಸದ್ಯಕ್ಕೆ ರಾಜಕಾರಣದಲ್ಲಿ ಅನಾಥನಾಗಿದ್ದೇನೆ. ಆದರೆ ರಾಜಕಾರಣದಲ್ಲಿಯೇ ಮುಂದುವರೆಯುತ್ತೇನೆ . ನನ್ನ ಕನಸುಗಳು ಯಾವುದೇ ಕಾರಣಕ್ಕೂ ಕಮರುವುದಿಲ್ಲ. ಹೋರಾಟ ನಿಲ್ಲಿಸುವುದಿಲ್ಲ. ಮತ್ತೆ ಮತ್ತೆ ಬರುತ್ತೇನೆ.ಗೆಲ್ಲುತ್ತೇನೆ.ನಾನು ಹಠವಾದಿ ಜನರ ಸೇವೆ ಮಾಡುವುದು ನನ್ನ ಆಸೆ, ಅದಕ್ಕಾಗಿ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ.ಎಂ.ಪಿ ಆಗಲಿಲ್ಲ ಆದರೆ ಎಂಎಲ್ ಎ ಆಗುತ್ತೇನೆಂಬ ಭರವಸೆ ನನಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನನ್ನ ಹೋರಾಟಕ್ಕೆ ತಾತ್ಕಲಿಕವಾಗಿ ಹಿನ್ನಡೆಯಾಗಿರಬಹುದು, ನಾನು ಎಲ್ಲಿಯೂ ಹೋಗದೆ ದಾವಣಗೆರೆಯಲ್ಲಿಯೆ ಐಎಎಸ್, ಕೆಎಎಸ್ ಕೊಚಿಂಗ್, ನವೋದಯ ಕೊಚಿಂಗ್ ಪ್ರಾರಂಭಿಸಲಿದ್ದೇನೆ. ಹಾಗೂ ಮುಂದಿನ ವಿಧಾನಸಭಾ ಚುನಾವಣೆಗೆ ದಾವಣಗೆರೆ ಉತ್ತರ, ದಕ್ಷಿಣ, ಹೊನ್ನಾಳಿ, ಹರಿಹರ `ಯಾವುದಾದರು ಒಂದು ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ” ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಂಗಸ್ವಾಮಿ, ಐಯಣ್ಣ ಮತ್ತಿತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...