ದಾವಣಗೆರೆ | ಹೊಸ ಪಡಿತರ ಚೀಟಿ ವಿತರಣೆ ಮತ್ತು ತಿದ್ದುಪಡಿಗೆ ಆಗ್ರಹ

Date:

ಹೊಸ ಪಡಿತರ ಚೀಟಿಗಳ ವಿತರಣೆ, ತಿದ್ದುಪಡಿ ಮತ್ತು ಸೇರ್ಪಡೆಗೆ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ದಾವಣಗೆರೆ ತಹಶೀಲ್ದಾರ್ ಕಚೇರಿ ಎದುರು ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್‌, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತಕ್ಕೆ ಬಂದು 1 ವರ್ಷ ಸಂಪೂರ್ಣ ಮುಕ್ತಾಯವಾಗಿದ್ದು, ಇದುವರೆಗೂ ಹೊಸ ಪಡಿತರ ಚೀಟಿಯನ್ನು ಹಾಗೂ ತಿದ್ದುಪಡಿ ಮತ್ತು ಸೇರ್ಪಡೆಯನ್ನು ಮಾಡಿರುವುದಿಲ್ಲ. ಇದರಿಂದ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೂ ಬಹಳ ತೊಂದರೆಯಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದರೂ ಸಹ ಪಡಿತರ ಚೀಟಿಯ ಬಗ್ಗೆ ಯಾವುದೇ ಕಾರಣಕ್ಕೂ ಕ್ರಮ ವಹಿಸಿಲ್ಲ. ಕೂಡಲೇ ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿಯನ್ನು ಕೊಡಬೇಕು ಹಾಗೂ ಹಳೆಯ ಪಡಿತರ ಚೀಟಿಗಳ ತಿದ್ದುಪಡಿ ಮತ್ತು ಸೇರ್ಪಡೆಯ ಕಾರ್ಯಕ್ಕೆ ಮುಂದಾಗಬೇಕೆಂದು ಆಗ್ರಹಿಸಿದರು. ಪಡಿತರ ಚೀಟಿಯಲ್ಲಿ ಒಂದೆರಡು ಬಾರಿ ಸೇರ್ಪಡೆಗೆ ಅವಕಾಶ ಕೊಟ್ಟಿದ್ದರೂ ಕೂಡ ಯಾವೊಬ್ಬ ವ್ಯಕ್ತಿಗೂ ಅನ್ವಯಿಸಿಲ್ಲ. ಆಶ್ರಯ ಯೋಜನೆಯಡಿಯಲ್ಲಿ ಒಂದು ಕುಟುಂಬಕ್ಕೆ ಪಡಿತರ ಚೀಟಿಯನ್ನು ಸರ್ಕಾರ ನಿಗಧಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಪಡಿತರ ಚೀಟಿಯನ್ನು ಗ್ರಾಮ ಒನ್‌ನಲ್ಲಿ ತಿದ್ದುಪಡಿಗೆ ಅವಕಾಶ ಕೊಟ್ಟಿದ್ದರೂ ಯಾವೊಬ್ಬ ವ್ಯಕ್ತಿಯು ಸೇರ್ಪಡೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಹಾರ ನಾಗರೀಕ ಸರಬರಾಜು ಇಲಾಖೆಯ ತಾಲ್ಲೂಕು ಕಛೇರಿಯಲ್ಲಿ ಸುಮಾರು 600-800 ಅರ್ಜಿ ಬಂದಿದ್ದರೂ ಕೂಡ ತಾಲ್ಲೂಕು ಆಡಳಿತ ನಿರ್ವಹಣೆ ಮಾಡಿರುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಕಳುಹಿಸಬೇಕು. ಕೂಡಲೇ ರೈತರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಹೊಸ ಪಡಿತರ ಚೀಟಿಯನ್ನು ಕೊಡಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿಧಾನ ಸೌಧವನ್ನು ಮುತ್ತಿಗೆ ಹಾಕುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಚಿಕ್ಕಬೂದಿಹಾಳ ಭಗತ್ ಸಿಂಹ, ಚಿಕ್ಕತೋಗಲೇರಿ ಮಲ್ಲಿಕಾರ್ಜುನ, ಸೋಮ್ಲಾಪುರ ರಂಜಿತ,ಕೆಂಚಮ್ಮನಹಳ್ಳಿ ಹನುಮಂತಪ್ಪ, ಹೊಟ್ಟೆಗಾನಳ್ ಸುನೀಲ್, ಭರಮಸಮುದ್ರ ಕುಮಾರ್, ಕೋಲ್ಕುಂಟೆ ಉಚ್ಚಂಗಪ್ಪ, ಕಿತ್ತೂರು ಹನುಮಂತಪ್ಪ, ಶಿವರಾಜ್, ಮೆದಿಗೇರಪ್ಪ, ಷಣ್ಮುಖಪ್ಪ, ಭೀಮಣ್ಣ, ತಿಪ್ಪೇಶ್‌ ಇತರ ರೈತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...