ದಾವಣಗೆರೆ | ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಕಕ್ಕರಗೊಳ್ಳ ಪರ ಮತಯಾಚನೆ

Date:

ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಕಕ್ಕರಗೊಳ್ಳ ಪರ ಮಹಿಳಾ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಪ್ರಚಾರ ನಡೆಸಿ ಮತಯಾಚಿಸಿದರು.

ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಂಕ್ಕುವಾಡ, ಹಳೆ ಕೊಳೇನಳ್ಳಿ, ಹೊಸ ಕೊಳೇನಳ್ಳಿ, ಕನಗಗೊಂಡನಹಳ್ಳಿ, ಬಲ್ಲೂರು, ಜಡಗನಹಳ್ಳಿ, ಬಲ್ಲೂರು, ಸಿರಿಗನಹಳ್ಳಿ ಗ್ರಾಮಗಳಲ್ಲಿ ಮನೆಮನೆಗೆ ತೆರಳಿ ಪ್ರಚಾರ ಮಾಡಿದರು. ಈಗಾಗಲೇ ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 800ಕ್ಕೂ ಹೆಚ್ಚು ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ತಿಳಿದುಕೊಂಡಿರುವ ವಿನಯ್ ಕುಮಾರ್ ರವರಿಗೆ ಮತ ನೀಡಿ ಗೆಲ್ಲಿಸಿದರೆ ಮಹಿಳೆಯರ, ಮತ್ತು ಗ್ರಾಮೀಣ ಸಮಸ್ಯೆಗಳ ನಿವಾರಣೆಗೆ ಅನುಕೂಲವಾಗುತ್ತದೆ ಎಂದು ಪ್ರಚಾರ ನೆಡೆಸಿದರು.

ಕಕ್ಕರಗೊಳ್ಳ ಗ್ರಾಮದ ಯುವಕ, ವಿದ್ಯಾವಂತ, ಉನ್ನತ ಅಧಿಕಾರಿಗಳನ್ನು ಕೊಡುಗೆ ನೀಡಿದಂತಹ ಶೈಕ್ಷಣಿಕ ಕ್ರಾಂತಿಕಾರ, ಬಡವರ, ಹಿಂದುಳಿದವರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸದಾ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುವ ವಿನಯ್ ಕುಮಾರ್ ಅವರಂಥವರಿಗೆ ಮತ ಹಾಕಿ ಗೆಲ್ಲಿಸಿದರೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ,ಹಿಂದುಳಿದ ವರ್ಗಗಳ, ಬಡವರ ಏಳಿಗೆಗೆ ಬೇಕಾದ ಯೋಜನೆ ಜಾರಿಗೆ ತರಲು ಶ್ರಮಿಸಿ , ಅವರ ಏಳಿಗೆಗೆ ಬೇಕಾದ ನೆರವು ನೀಡುತ್ತಾರೆ, ಹಾಗಾಗಿ ವಿನಯ್ ಕುಮಾರ್ ರವರಿಗೆ ಮತ ನೀಡಲು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಕ್ಕರಗೊಳ್ಳ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ, ಸ್ತ್ರೀಶಕ್ತಿ ಸಂಘಗಳ ತಾಲೂಕು ಒಕ್ಕೂಟ ಅಧ್ಯಕ್ಷರಾದ ಕೆ.ಬಿ. ಶಕುಂತಲಾ ಬಸವರಾಜಪ್ಪ, ಶೈಲಾ ಬಿ.ವಿ, ಕೊಳೇನಳ್ಳಿ ಸುನಂದಾ ವರ್ಣಿಕರ್, ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರಾದ ವನಜಾಕ್ಷಮ್ಮ, ರುದ್ರೇಶ್ ಜಿ.ಎನ್. ಹೊಸಕೋಳೆನಳ್ಳಿ, ಪುರಂದರ ಲೋಕಿಕೆರೆ, ಚಿಕ್ಕಣ್ಣ ಮಲ್ಲಾಯಕನಹಳ್ಳಿ ಸೇರಿದಂತೆ ಮಹಿಳಾ ಮುಖಂಡರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...