ದಾವಣಗೆರೆ | ಸಾಲ ಮರುಪಾವತಿಗೆ ನೋಟಿಸ್‌, ರೈತರ ಪ್ರತಿಭಟನೆ

Date:

ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು ಪಟ್ಟಣದಲ್ಲಿ ಪ್ರತಿಭಟಿಸಿದೆ.

ಜಗಳೂರು ಪಟ್ಟಣದ ತಾಲೂಕು ಕಛೇರಿ ಮುಂಬಾಗ ಜಮಾಯಿಸಿದ್ದ ಪ್ರತಿಭಟನಾಕಾರರು ಬ್ಯಾಂಕ್ ಹಾಗೂ ಫೈನಾನ್ಸ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿದರು. ನಂತರ ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಅವರಿಗೆ ಲಿಖಿತ ಮನವಿ ಸಲ್ಲಿಸಿದರು.

ಸಂಘಟನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿ ಬರ ಆವರಿಸಿ ಬೆಳೆದ ಬೆಳೆಗಳು ಕೈಗೆಟಕುದೆ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಲಮರುಪಾವತಿಗೆ ಕಾಲಾವಕಾಶ ನೀಡದೆ ಟ್ರ್ಯಾಕ್ಟರ್ ಹಾಗೂ ಜಮೀನುಗಳಲ್ಲಿ ಬೆಳೆ ಬೆಳೆಯಲು ಸಾಲಮಾಡಿರುವುದು. ಆದರೆ, ಸಾಲ ನೀಡಿದ ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಫೈನಾನ್ಸ್ ಕಂಪನಿಗಳು ನೋಟಿಸ್ ಜಾರಿಗೊಳಿಸಿ, ಬಲವಂತದಿಂದ ವಸೂಲು ಮಾಡಲು ಕಿರುಕುಳ ನೀಡುತ್ತಿದ್ದಾರೆ. ರೈತರು ಎದೆಗುಂದದೆ ಸಾಲವನ್ನು ಸವಾಲಾಗಿ ಸ್ವೀಕರಿಸಬೇಕು. ರೈತ ಸಂಘಟನೆಗಳ ಬಳಿ ಬರಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತಕಾರ್ಮಿಕರ ಖಾತೆಗೆ ವೃದ್ಧಾಪ್ಯ ವೇತನ, ಗೃಹಲಕ್ಷ್ಮೀ ಯೋಜನೆ, ಬೆಳೆಪರಿಹಾರ ಸೇರಿದಂತೆ ವಿವಿಧ ಸಾಮಾಜಿಕ ಭದ್ರತೆಯಡಿ ಸರ್ಕಾರ ಜಮಾ ಮಾಡುವ ಹಣವನ್ನು ಕೂಡಲೇ ಸಾಲ ಮರುಪಾವತಿಗೆ ಜಮಾ ಮಾಡಬಾರದು ಎಂದು ಆಗ್ರಹಿಸಿದರು.

ತಹಸೀಲ್ದಾರ್ ಸಯ್ಯದ್ ಕಲೀಂ ಉಲ್ಲಾ ಮನವಿ ಸ್ವೀಕರಿಸಿ ಮಾತನಾಡಿ, ಮುಂದಿನ ಸೋಮವಾರದಂದು ತಾಲೂಕಿನ ಎಲ್ಲಾ ಮೈಕ್ರೋ ಫೈನಾನ್ಸ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ  ವ್ಯವಸ್ಥಾಪಕರನ್ನು ರೈತ ಸಂಘಟನೆ ಸಮ್ಮುಖದಲ್ಲಿ ಸಭೆ ಕರೆದು ಚರ್ಚೆ ನಡೆಸಿ ರೈತರ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲು ತೀರ್ಮಾನಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ ಪ್ರತಿಭಟನಾಕಾರರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದರು. ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಪ್ರಧಾನಕಾರ್ಯದರ್ಶಿ ಚಿಕ್ಕಮಲ್ಲನಹೊಳೆ ಚಿರಂಜೀವಿ, ಪದಾಧಿಕಾರಿಗಳಾದ ಸತೀಶ್ ಗೌಡಗೊಂಡನಹಳ್ಳಿ, ದಕಾನನಕಟ್ಟೆ ತಿಪ್ಪೇಸ್ವಾಮಿ, ರಾಜನಹಟ್ಟಿರಾಜು, ಸಹದೇವರೆಡ್ಡಿ, ಅಂಜಿನಪ್ಪ, ತಿಪ್ಪಣ್ಣ, ಸಣ್ಣಪಾಲಯ್ಯ, ತಿಪ್ಪೇಶ್‌, ಲೋಕಣ್ಣ, ಮಂಜುನಾಥ್ ರೆಡ್ಡಿ, ಅಶೋಕ, ಚಿದಾನಂದ ಸೇರಿದಂತೆ ಇತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...