ದಾವಣಗೆರೆ | ವಿದ್ಯುತ್ ದರ ಏರಿಕೆ; ನಷ್ಟದಲ್ಲಿರುವ ಕೈಗಾರಿಕೆಗಳಿಗೆ ಹೊರೆ: ಉಮಾ ಪ್ರಕಾಶ್

Date:

ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸಿರುವುದು ನಷ್ಟದಲ್ಲಿ ನಡೆಯುತ್ತಿರುವ ಕೈಗಾರಿಕೆಗಳಿಗೆ ಮತ್ತಷ್ಟು ಹೊರೆ ಆಗಿದೆ ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್‌ ಮತ್ತು ಹಾಲಿ ಸದಸ್ಯೆ ಉಮಾ ಪ್ರಕಾಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸದ್ಯದ ಪರಿಸ್ಥಿತಿಯಲ್ಲಿ ಪರಸ್ಪರ ಕೈಗಾರಿಕೆಗಳು ಅನಾರೋಗ್ಯಕರ ವ್ಯವಹಾರಿಕ ಪೈಪೋಟಿಯಿಂದಾಗಿ ನಷ್ಟ ಅನುಭವಿಸುತ್ತಿವೆ. ಇದೀಗ ವಿದ್ಯುತ್ ದರ ಏರಿಕೆಯಿಂದಾಗಿ ಕೈಗಾರಿಕೆಗಳ ಉತ್ಪಾದನಾ ವೆಚ್ಚವು ಹೆಚ್ಚಾಗುತ್ತದೆ. ಕೆಲಸಗಾರರ ಕೊರತೆಯಿಂದ ಯಂತ್ರಗಳ ಸಹಾಯದಿಂದ ಹಲವು ಕೈಗಾರಿಕೆಗಳು ನಡೆಯುತ್ತಿವೆ. ಹಾಗಾಗಿ ಕೈಗಾರಿಕೆಗಳು ನಷ್ಟಕ್ಕೆ ಒಳಗಾಗುತ್ತವೆ ಎಂದಿದ್ದಾರೆ.

ಈ ಸಮಯದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಈ ಬಗ್ಗೆ ಮಾತನಾಡಿರುವುದು ಸ್ವಾಗತಾರ್ಹ. ಸರ್ಕಾರ ವಿದ್ಯುತ್‌ ದರ ಏರಿಕೆ ಕೈ ಬಿಟ್ಟು, ಸಣ್ಣ ಕೈಗಾರಿಕೆಗಳ ಸಹಾಯಕ್ಕೆ ಬರಲಿ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿರುವುದರಿಂದ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಕೊರತೆ ಉಂಟಾಗಿ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಖಾಸಗಿ ಬಸ್ ಗಳನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಸಾವಿರಾರು ಕುಟುಂಬಗಳು ರಾಜ್ಯಾದ್ಯಂತ ಇವೆ. ಅಲ್ಲದೆ ಆಟೋ ಚಾಲಕರಿಗೂ ಪ್ರಯಾಣಿಕರು ಸಿಗದೆ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಸರ್ಕಾರ ಈ ಬಗ್ಗೆಯೂ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಗೃಹಜ್ಯೋತಿ’ | ನೋಂದಣಿಗೆ ʼಆಧಾರ್‌ʼ ಸಾಕು ಎಂದು ಗೊಂದಲಗಳಿಗೆ ತೆರೆ ಎಳೆದ ಇಂಧನ ಇಲಾಖೆ

ಖಾಸಗಿ ಬಸ್‌ ಅವಲಬಿತರು ಮತ್ತು ಆಟೋ ಚಾಲಕರ ಮಕ್ಕಳಿಗೆ ಖಾಸಗಿ ಶಾಲೆ ಕಾಲೇಜುಗಳಲ್ಲಿ ಶುಲ್ಕವನ್ನು ಸರ್ಕಾರ ಬರಿಸಲು ಕ್ರಮ ಕೈಗೊಳ್ಳಬೇಕು. ಆಟೋ ಪರ್ಮಿಟ್ ಮತ್ತು ಎಫ್ ಸಿ ಶುಲ್ಕಗಳನ್ನು ಮನ್ನಾ ಮಾಡಬೇಕು. ಈ ಮೂಲಕ ಆಟೋ ಚಾಲಕರಿಗೆ ನೆರವು ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...