ದಾವಣಗೆರೆ | ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Date:

ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಹಾನಗರ ಪಾಲಿಕೆಯ ಹೊರಗುತ್ತಿಗೆ ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಸಂಘದ ಸದಸ್ಯರು ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಭಟಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಎಂ.ಆರ್. ದುಗ್ಗೇಶ್ ಮಾತನಾಡಿ, ಮಹಾನಗರ ಪಾಲಿಕೆಯ ಕಸ ಸಾಗಾಣಿಕೆ, ಒಳಚರಂಡಿ ಹಾಗೂ ಇತರ ವಿಭಾಗದಲ್ಲಿ ಸುಮಾರು ವರ್ಷಗಳಿಂದ ಹೊರಗುತ್ತಿಗೆ ಏಜೆನ್ಸಿಗಳ ಮೂಲಕ ಚಾಲಕರಾಗಿ ನಾವುಗಳು ಸೇವೆ ಸಲ್ಲಿಸುತ್ತಿದ್ದು, ಇದುವರೆಗೂ ಏಜೆನ್ಸಿಗಳ ಮೂಲಕ ಪ್ರತೀ ತಿಂಗಳು ವೇತನವನ್ನು ಪಡೆಯುತ್ತಿದ್ದೇವು. ಆದರೆ, ಕಳೆದ 2023ರ ಅಕ್ಟೋಬರ್ ತಿಂಗಳಿಂದ ಟೆಂಡ‌ರ್ ಮೂಲಕ ಏಜೆನ್ಸಿ ಬದಲಾವಣೆಯಾಗಿದ್ದು, ಆದರ್ಶ ಎಂಟರ್ ಪ್ರೈಸಸ್ ಹುಬ್ಬಳ್ಳಿ ಇವರಿಗೆ ಟೆಂಡ‌ರ್ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇವರು ಈ ಹಿಂದೆ ಹುಬ್ಬಳ್ಳಿ ಪಾಲಿಕೆಯಲ್ಲಿಯೂ ಚಾಲಕರುಗಳಿಗೆ ವೇತನ ನೀಡುವುದರಲ್ಲಿ ಸತಾಯಿಸುತ್ತಿರುವುದಾಗಿ ತಿಳಿದುಬಂದಿದ್ದು, ಟೆಂಡರ್ ನೀಡದಂತೆ ನಾವು ಈ ಹಿಂದೆ ಟೆಂಡ‌ರ್ ಸಮಯದಲ್ಲಿಯೇ ಮನವಿ ನೀಡಿದ್ದೆವು, ಆದರ್ಶ ಎಂಟರ್‌ಪ್ರೈಸಸ್ ಹುಬ್ಬಳ್ಳಿ ಏಜೆನ್ಸಿಯವರು ಆರಂಭದಲ್ಲಿಯೇ ಅಕ್ಟೋಬರ್ 2023ರ ವೇತನವನ್ನು ಕೊಡುವಲ್ಲಿ ಸತಾಯಿಸಿ, ಪಾಲಿಕೆಯಿಂದ ನೀಡಿದ ಮೇಲೆ ಪಾವತಿಸುತ್ತೇನೆ ಎಂದಿದ್ದಾರೆ. ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದರು.

ಏಜೆನ್ಸಿಯವರು ನಮ್ಮ ದೂರವಾಣಿ ಕರೆಯನ್ನು ಸಹ ಸ್ವೀಕರಿಸುತ್ತಿಲ್ಲ. ಇದರಿಂದ ನಮ್ಮ ಸ್ಥಿತಿ ಅತಂತ್ರವಾಗಿದ್ದು, ಕುಟುಂಬ ನಿಭಾಯಿಸುವುದು ಕಷ್ಟವಾಗಿದೆ. ಮೂರು ತಿಂಗಳ ವೇತನ ನೀಡದೇ ಸತಾಯಿಸುತ್ತಿರುವ ಆದರ್ಶ ಎಂಟರ್‌ಪ್ರೈಸಸ್, ಹುಬ್ಬಳ್ಳಿ ಏಜೆನ್ಸಿಯವರ ಟೆಂಡ‌ರ್ ರದ್ದುಪಡಿಸಿ ಪಾಲಿಕೆಯಿಂದಲೇ ವೇತನ ನೀಡಿ. ಇಲ್ಲವೇ ಸ್ಥಳೀಯ ಏಜೆನ್ಸಿಗಳಿಗೆ ಟೆಂಡ‌ರ್ ನೀಡುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಂ.ವೀರೇಶ್, ಕಿರಣ್ ಕುಮಾರ್, ಎಚ್.ಎಂ. ಪ್ರಭಾಕರ್, ಸಂತೋಷ್, ಪ್ರಕಾಶ್, ಕೊಟ್ರೇಶ್, ಸಿದ್ದಲಿಂಗೇಶ್ವರ್, ಚಿದಾನಂದ, ಮೈಲಾರಿ, ನವೀನ್ ಮತ್ತಿತರರ ಕಾರ್ಮಿಕರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...