ದಾವಣಗೆರೆ | ಸ್ಲಂ ನಿವಾಸಿಗಳಿಗೆ ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ವಿವಿಧ ಸ್ಲಂಗಳಲ್ಲಿ ವಾಸವಾಗಿರುವ ನಿವೇಶನ ರಹಿತ ನಿವಾಸಿಗಳಿಗೆ ಸರ್ಕಾರಿ ಭೂಮಿ ಗುರುತಿಸಿ, ನಿವೇಶನ ಮಂಜೂರು ಮಾಡಬೇಕು. ದಾವಣಗೆರೆ ನಗರದಲ್ಲಿ ಜಾಗ ಗುರುತಿಸಿ, ಆ ಜಾಗವನ್ನು ಸ್ಲಂ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ, ಸಾವಿತ್ರಿ ಬಾಪುಲೆ ಮಹಿಳಾ ಸಂಘಟನೆ ಮುಖಂಡರು ದಾವಣಗೆರೆಯಲ್ಲಿ ಪತ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರತಿಭಟನಾನಿರತ ಜಿ.ಹೆಚ್. ರೇಣುಕಾ ಯಲ್ಲಮ್ಮ, “ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಸುಮಾರು 73 ವಿವಿಧ ಸ್ಲಂಗಳಲ್ಲಿ ಸುಮಾರು 3,000 ಬಡ ಕೂಲಿ ಕಾರ್ಮಿಕ ಕುಟುಂಬಗಳಿವೆ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಗಳಲ್ಲಿ ಜೀವಿಸುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋವಿಡ್-19 ಮಹಾಮಾರಿ ಆಕ್ರಮಿಸಿದ ನಂತರ ಸರಿಯಾಗಿ ದುಡಿಮೆಯೂ ಇಲ್ಲದಂತಾಗಿದೆ. ಬೆಲೆಗಳ ಏರಿಕೆಯಿಂದಾಗಿ ಮನೆ ಕಟ್ಟಿಕೊಂಡು ಜೀವಿಸಲು ತುಂಬಾ ತೊಂದರೆಯಾಗಿದೆ” ಎಂದರು.

“ಇಲ್ಲಿಯವರೆಗೆ ಒಬ್ಬ ಬಡ ಸ್ಲಂನಿವಾಸಿಗಳಿಗೂ ನಿವೇಶನ ಮಂಜೂರಾಗಿಲ್ಲ. ಈ ಹಿಂದಿನ ಜಿಲ್ಲಾಧಿಕಾರಿ ಗೌತಮ್ ಬಗಾದಿ ಅವರು ಭೂಮಿಯನ್ನು ಖರೀದಿಸಿ ಅದರಲ್ಲಿ ನಿವೇಶನ ರಹಿತ ಸ್ಲಂ ನಿವಾಸಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದರು. ಆದರೆ, ಆ ಭೂಮಿಯಲ್ಲಿ ಇದುವರೆಗೂ ಯಾರಿಗೂ ನಿವೇಶನ ಹಂಚಿಕೆ ಮಾಡಲಾಗಿಲ್ಲ” ಎಂದರು.

“ನಿಜವಾದ ನಿವೇಶನ ರಹಿತರಿಗೆ ಭೂಮಿ ಗುರುತಿಸಿ, ನಿಜವಾದ ಫಲಾನುಭವಿಗಳಿಗೆ ನೀಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಶಬ್ಬಿರ್ ಸಾಬ್, ಮಂಜುಳಾ, ಜಂಶಿದಾ ಬಾನು, ಬಾಲಪ್ಪ, ಆನಂದಪ್ಪ, ಸಾವಿತ್ರಮ್ಮ, ರೇಷ್ಮಾ ಬಾನು, ರೇಖಾ, ಅಸ್ಮಾಬಾನು, ರಾಜೇಶ್ವರಿ, ಸಲಾಬಾನ, ಸಿಕಂದರ್ ಮತ್ತಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...