ದಾವಣಗೆರೆ | ಸಮ ಸಮಾಜ ಬಯಸಿದ್ದ ಸಾಕ್ಷಿಪ್ರಜ್ಞೆ ತ್ರಿಪದಿ ಬ್ರಹ್ಮ ಸರ್ವಜ್ಞ; ಪ್ರೊ. ಚಿತ್ತಯ್ಯ ಪೂಜಾರ

Date:

ಮಹಾತ್ಮರ ವಿಚಾರಧಾರೆಗಳು ಸಮಾಜದ ಕನ್ನಡಿ ಇದ್ದಂತೆ. ಅವರ ತತ್ವ, ಆದರ್ಶ, ಸಂದೇಶಗಳ ವಿಚಾರಗಳು ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ. ಇದಕ್ಕೆ ಸರ್ವಜ್ಞ ನಮ್ಮೆಲ್ಲರ ನಡುವಿನ ಸಮಸಮಾಜದ ಸಾಕ್ಷಿಪ್ರಜ್ಞೆಯಾಗಿದ್ದಾರೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಚಿತ್ತಯ್ಯ ಪೂಜಾರ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯ ಸರ್ವಜ್ಞ ಅಧ್ಯಯನ ಕೇಂದ್ರದ ವತಿಯಿಂದ ಸರ್ವಜ್ಞ ಜಯಂತಿ ಪ್ರಯುಕ್ತ ಪುಸ್ತಕ ಬಿಡುಗಡೆ ಸಮಾರಂಭ ಮತ್ತು ಸರ್ವಜ್ಞ ತ್ರಿಪದಿಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಸರ್ವಜ್ಞ ಬಿಡಾಡಿಯಾಗಿರಲಿಲ್ಲ, ನಾಡಾಡಿಯಾಗಿದ್ದರು. ಆಡುಮಾತಿನ ಪದ ಬಳಕೆಯ ಮೂಲಕ ಜನರ ವಿಚಾರಗಳನ್ನು ಜನರಿಗೇ ತಿಳಿಸಿ ಸಮಾಜ ತಿದ್ದುವ ಕೆಲಸ ಮಾಡಿದ ಮಹಾನ್ ವ್ಯಕ್ತಿ ಎಂದರು.

ಸರ್ವಜ್ಞನ ತ್ರಿಪದಿಗಳಲ್ಲಿರುವ ವಿಚಾರಗಳನ್ನು, ಸೂಕ್ಷ್ಮ ಸಂದೇಶಗಳನ್ನು, ಮುಕ್ತ ಅನಿಸಿಕೆಗಳನ್ನು ಅವಲೋಕಿಸಿದಾಗ ಸಮಾಜದ ವಾಸ್ತವದ ಚಿತ್ರಣ ತೆರೆದುಕೊಳ್ಳುತ್ತದೆ. ನೇರವಾಗಿ ದಿಟ್ಟತನದಿಂದ ಯಾರ ಭೀತಿಗೂ ಮಣೆ ಹಾಕದೆ ತನ್ನ ವಿಚಾರವನ್ನು ವ್ಯಕ್ತಪಡಿಸಿದ್ದಾರೆ. ದೇಸಿ ಸಾಹಿತ್ಯದಲ್ಲಿ ಇಂತಹ ಪ್ರಭಾವಿ ವ್ಯಕ್ತಿಗಳ ಬಗ್ಗೆ, ಅವರ ವಿಚಾರಗಳ ಬಗ್ಗೆ ಅಧ್ಯಯನಗಳ ಅಗತ್ಯವಿದೆ. ನಮ್ಮ ಸುತ್ತ ಮುತ್ತಲಿರುವ ಸರ್ವಜ್ಞನಂತಹ ವ್ಯಕ್ತಿಗಳ ಕುರಿತು ಅಧ್ಯಯನ, ಸಂಶೋಧನೆಗಳನ್ನು ನಡೆಸಿ ಪ್ರಚಲಿತಗೊಳಿಸುವ ಕೆಲಸ ಆಗಬೇಕಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಯನಗಳು ಸುಳ್ಳು ಇತಿಹಾಸವನ್ನು ನಂಬಬಾರದು, ಸಂಶೋಧನೆ, ಅಧ್ಯಯನದ ಮೂಲಕ ವಾಸ್ತವವನ್ನು ತಿಳಿಸುವ ಕೆಲಸವಾಗಬೇಕು. ವಿಶ್ವವಿದ್ಯಾಲಯಗಳು ಜ್ಞಾನಿಗಳನ್ನು ಬಿತ್ತಿ ಜ್ಞಾನವನ್ನು ಬೆಳೆಯುವ ಭೂಮಿಕೆಯಾಗಬೇಕು. ಉಪನ್ಯಾಸದ ಜೊತೆಗೆ ಸಂಶೋಧನಾ ಪ್ರಬಂಧಗಳ ಪ್ರಕಟಣೆಯ ಮೂಲಕ ಮುಂದಿನ ಪೀಳಿಗೆಗೆ ಅಧ್ಯಯನಕ್ಕೆ ಆಕರಗಳನ್ನು ಒದಗಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ.ಡಿ.ಕುಂಬಾರ ಮಾತನಾಡಿ, ಸಮಾಜದ ಅಂಕುಕೊಂಡು ತಿದ್ದುತ್ತ, ಬಡವರು-ದುರ್ಬಲರ ನೋವಿಗೆ ಸ್ಪಂದಿಸುವ ಧ್ವನಿಯಾಗಿದ್ದ ಸರ್ವಜ್ಞ ದಿಟ್ಟ ನಿಲುವಿನ ಪ್ರಬುದ್ಧ ವ್ಯಕ್ತಿಯಾಗಿದ್ದರು. ಕಬೀರ, ನಾರಾಯಣಗುರು, ತಿರುವಳ್ವಾ‌ರ್ ಮಾದರಿಯಲ್ಲಿ ತ್ರಿಪದಿಗಳ ಮೂಲಕ ತಮ್ಮ ತತ್ವ ವಿಚಾರಗಳನ್ನು ಬೋಧಿಸಿದ ಸರ್ವಜ್ಞನಿಗೂ ಬುದ್ಧ, ಬಸವ, ಅಂಬೇಡ್ಕರ್‌ಗೆ ಸಿಕ್ಕಂತಹ ಮನ್ನಣೆಗಳು ದೊರೆಯಬೇಕಾಗಿದೆ ಎಂದರು.

ಶಾಲಾ ಹಂತದಲ್ಲಿ ಸಂಕ್ಷಿಪ್ತವಾಗಿ ವ್ಯಕ್ತಿ ಪರಿಚಯ ಮಾಡಿಕೊಂಡರೂ, ಪದವಿ ಮತ್ತು ಸ್ನಾತಕ ಪದವಿಯಲ್ಲಿ ಸಮಗ್ರ ಅಧ್ಯಯನಕ್ಕೆ ಪೂರಕವಾದ ಪಠ್ಯಕ್ರಮ ಅಳವಡಿಸಿಕೊಳ್ಳಬೇಕಾಗಿದೆ. ಆ ಮೂಲಕ ವಿದ್ಯಾರ್ಥಿಗಳು ಹೆಚ್ಚು ಸಂಶೋಧನಾತ್ಮಕವಾಗಿ ಅಧ್ಯಯನ ಶೀಲರಾಗಲು, ವಿಚಾರ ಚಿಂತನಶೀಲರಾಗಿ ಮಂಡಿಸಲು ಸಾಧ್ಯವಾಗುತ್ತದೆ ಎಂದು ನುಡಿದರು.

ಇದೇ ಸಂದರ್ಭದಲ್ಲಿ ಸರ್ವಜ್ಞನ ತ್ರಿಪದಿಗಳನ್ನು ಕುರಿತ ಸಂಶೋಧನಾ ಲೇಖನಗಳ ಪುಸ್ತಕಗಳನ್ನು ಕುಲಪತಿ ಪ್ರೊ. ಕುಂಬಾರ ಅವರು ಬಿಡುಗಡೆ ಮಾಡಿದರು. ಸರ್ವಜ್ಞನ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಆಶುಭಾಷಣಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕನ್ನಡ ಅಧ್ಯಯನ ವಿಭಾಗದ ಸಹಪ್ರಾಧ್ಯಾಪಕ ಡಾ.ಎಚ್.ವಿಶ್ವನಾಥ ಪುಸ್ತಕ ಪರಿಚಯ ಮಾಡಿದರು. ಸರ್ವಜ್ಞ ಅಧ್ಯಯನ ಪೀಠದ ಸಂಯೋಜನಾಧಿಕಾರಿ ಮತ್ತು ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಜಯರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಪ್ರೊ. ವೆಂಕಟರಾವ್ ಪಲಾಟೆ, ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ ಡಾ.ಮಂಜುನಾಥ ಜೋಗಿನಕಟ್ಟೆ ಮಂಜುಳಾ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...