ದಾವಣಗೆರೆ | ವಾರೆಂಟ್ ಇಲ್ಲದೇ ಶೋಧ; ನಾಲ್ವರು ಪೇದೆಗಳು ಅಮಾನತು

Date:

ವಂಚನೆ ಪ್ರಕರಣದಲ್ಲಿ ‘ಸರ್ಚ್ ವಾರೆಂಟ್’ ಇಲ್ಲದೇ ಶೋಧ ನಡೆಸಿದ್ದ ನಾಲ್ಕು ಪೇದೆಗಳನ್ನು ಅಮಾನತು ಮಾಡಿ ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಆದೇಶಿಸಿದ್ದಾರೆ. ಲಂಚ ಅಥವಾ ಹಣಕ್ಕೆ ಬೇಡಿಕೆ ಇಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಪೊಲೀಸ್ ಠಾಣೆಯ ಪೇದೆ ಧರ್ಮಪ್ಪ ಹಾಗೂ  ಕೊಟ್ರೇಶ್, ಹೊನ್ನಾಳಿ ಪೊಲೀಸ್ ಠಾಣೆ ಜಿ.ಕೆ.ರಾಮಚಂದ್ರಪ್ಪ‌ ಹಾಗೂ ದೊಡ್ಡಬಸಪ್ಪ ಅಮಾನತುಗೊಂಡವರು.

ನ್ಯಾಮತಿ ತಾಲೂಕಿನ ದಾನಿಹಳ್ಳಿ ಗ್ರಾಮದಲ್ಲಿನ ಕೊರಚರ ಕಾಲೋನಿಯ ರೂಪ ಎಂಬುವರ ಮನೆಗೆ ಈ ನಾಲ್ವರು ಪೇದೆಗಳು ‘ಸರ್ಚ್ ವಾರೆಂಟ್’ ಇಲ್ಲದೇ ಮನೆಗೆ ನುಗ್ಗಿ, ಶೋಧ ನಡೆಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ರೂಪ ಅವರು ಎಸ್‌ಪಿಗೆ ದೂರು ನೀಡಿದ್ದರು. ದೂರಿನಲ್ಲಿ, “ನಮ್ಮ ಮನೆಗೆ ಮಧ್ಯರಾತ್ರಿಯಲ್ಲಿ ಅಕ್ರಮವಾಗಿ ನುಗ್ಗಿ, ಅವಾಚ್ಯಶಬ್ದಗಳಿಂದ ನಿಂಧಿಸಿ, ಜಾತಿನಿಂದನೆ ಮಾಡಿ, ನನ್ನ ಹಾಗೂ ನನ್ನ ಕುಟುಂಬದವರ ಮೇಲೆ ದೌರ್ಜನ್ಯವೆಸಗಿ, ಅಕ್ರಮ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ನನಗೆ ಹಾಗೂ ನನ್ನ ಕುಟುಂಬದವರಿಗೆ ಪೇದೆಗಳು ಜೀವ ಬೆದರಿಕೆ ಹಾಕಿದ್ದಾರೆ” ಎಂದು ವಿವರಿಸಿದ್ದರು.

“ಹಣ ನೀಡಿದರೆ ಮಾತ್ರ ನಿನ್ನ ಮೇಲೆ ಕೇಸು ಮಾಡುವುದಿಲ್ಲ ಎಂದು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ತದನಂತರ ದಿನಾಂಕ 13/01/2024ರಂದು ಬೆಳ್ಳಂಬೆಳಗ್ಗೆ 7 ಗಂಟೆ ಸುಮಾರಿಗೆ ನಾಲ್ವರು ಕಾರಿನಲ್ಲಿ ನಮ್ಮ ಮನೆಗೆ ಬಂದು ನಿನ್ನ ಮಗ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಅದರ ಕುರಿತು 30 ಲಕ್ಷ ಸೆಟಲ್ಮೆಂಟ್ ಮಾಡಬೇಕು ಕೂಡಲೇ ಮಗನನ್ನು ಸ್ಟೇಷನ್‌ಗೆ ಕರೆದುಕೊಂಡು ಹೋಗುತ್ತೇವೆ. ನಿಮ್ಮ ಮಗ ಎಲ್ಲಿದ್ದಾನೆಂದು ಹುಡುಕಾಡಿದರು” ಎಂದು ತಿಳಿಸಿದ್ದಾರೆ.

“ಆ ಸಮಯದಲ್ಲಿ ನನ್ನ ಮಗ ಮನೆಯಲ್ಲಿರಲಿಲ್ಲ. ನಾವು ಯಾವ ಕೇಸು, ಯಾರಿಗೆ ಮೋಸ ಆಗಿದೆ, ಸಂಪೂರ್ಣ ವಿಚಾರವನ್ನು ತಿಳಿಸಿ. ಏಕಾಏಕಿ ನೀವು ಕರೆದರೆ, ನನ್ನ ಮಗನನ್ನು ಕಳುಹಿಸಲು ಆಗುವುದಿಲ್ಲ ಎಂದು ತಿಳಿಸಿದೆ. ಆಗ ಪೊಲೀಸರು ಅಪ್ಪನನ್ನು ಕರೆದುಕೊಂಡು ಹೋದರೆ ಮಗ ಜಯಂತ್ ಎಲ್ಲಿದ್ದರು ಸ್ಟೇಷನ್‌ಗೆ ಹುಡುಕಿಕೊಂಡು ಬರುತ್ತಾನೆ ಎಂದ ನನ್ನ ಪತಿ ನಾಗರಾಜಪ್ಪನ್ನು ಕಾರಿನಲ್ಲಿ ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿದ್ದರು. ಸುಮಾರು 8:30 ರಿಂದ 9:00 ಗಂಟೆಯವರೆಗೆ ಪೊಲೀಸರು ಹೊನ್ನಾಳಿಯ ಲಾಡ್ಜ್‌ನಲ್ಲಿ ನನ್ನ ಗಂಡನನ್ನು ಕೂಡಿಹಾಕಿ ಚಿತ್ರಹಿಂಸೆ ಮಾಡಿ, ಪ್ರಾಣ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ.

ಅವರ ದೂರಿನ ಆಧಾರ ಮೇಲೆ ತನಿಖೆ ನಡೆಸಿದ ಡಿವೈಎಸ್ಪಿ ಪ್ರಶಾಂತ್ ಮನೋಳಿ, ಎಸ್‌ಪಿಗೆ ವರದಿ ಸಲ್ಲಿಸಿದ್ದರು. ವರದಿ ಬಂದ ಬೆನ್ನಲ್ಲೇ, ನಾಲ್ವರು ಪೇದೆಗಳನ್ನೂ ಅಮಾನತು ಮಾಡಿ, ಅದೇಶ ಹೊರಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...