ದಾವಣಗೆರೆ | ಸಂವಿಧಾನ ರಕ್ಷಣೆಗಾಗಿ ರಾಜ್ಯಾದ್ಯಂತ ಸ್ಲಂ ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸರಿಯಾಗಿದೆ: ಶಾಮನೂರು ಶಿವಶಂಕರಪ್ಪ

Date:

ಸ್ಲಂ ಸಂಘಟನೆ ಸಂವಿಧಾನ ರಕ್ಷಣೆಗಾಗಿ ರಾಜ್ಯಾದ್ಯಂತ ಸ್ಲಂ ಜನರಲ್ಲಿ ಜಾಗೃತಿ ಮಾಡುತ್ತಿರುವುದು ಈ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸರಿಯಾಗಿದೆ. ಸ್ಲಂ ಜನರ ಪ್ರಮುಖ  ಜಲ್ವಂತ ಸಮಸ್ಯೆಗಳನ್ನು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ತಮ್ಮ ನ್ಯಾಯ ಪತ್ರದಲ್ಲಿ ಬಹುತೇಕ ಒಪ್ಪಿಕೊಂಡು ಸೇರಿಸಿರುತ್ತಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆಯ ಭಾಷನಗರ ರಿಂಗ್ ರಸ್ತೆಯಲ್ಲಿರುವ ಎಸ್.ಎಸ್. ಶಾದಿಮಹಲ್‌ನಲ್ಲಿ ಸ್ಲಂ ಜನರ ಮತ ಸಂವಿಧಾನ ರಕ್ಷಣೆಗಾಗಿ, ಮತ ಜಾಗೃತಿ ಸಮಾವೇಶವನ್ನು ಸ್ಲಂ ಜನಾಂದೋಲನ ಕರ್ನಾಟಕ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆ ಹಮ್ಮಿಕೊಕೊಂಡಿತ್ತು. ಈ ಸಮಾವೇಶದಲ್ಲಿ ಸ್ಲಂ ಜನರ 10 ಅಂಶಗಳ ಸಾರ್ವತ್ರಿಕ ಒತ್ತಾಯಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡ ಜನರ ಪರವಾಗಿ ಕಳೆದ 10 ವರ್ಷಗಳಿಂದ ಕೆಲಸ ಮಾಡಿಲ್ಲ. ಈ ಬಾರಿ ಮೋದಿ ಸೋಲಿಸಿ ದಾವಣಗೆರೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಗೆಲ್ಲಿಸಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಪರಿಹಾರ ಮಾಡಿಕೊಡುತ್ತಾರೆ. ಅರ್ಹ ಹಾಗೂ ನೈಜ ನಿವೇಶನ ರಹಿತರಿಗೆ ನಿವೇಶನ ನೀಡುವುದು ನನ್ನ ಕೆಲಸವಾಗಿದೆ ನಾನು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಘಟನೆಯ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಮಾತನಾಡಿ, ಸಂವಿಧಾನ ಉಳಿದರೆ ಮಾತ್ರ ಜನ ಸಾಮಾನ್ಯರ ಹಕ್ಕುಗಳು ರಕ್ಷಣೆಯಾಗುತ್ತವೆ. ಎಲ್ಲಾ ನಾಗರೀಕರಿಗೆ ಸಮಾನತೆಯ ಸ್ವಾತಂತ್ರ್ಯ ನೀಡಿರುವ ಸಂವಿಧಾನವನ್ನು ಬಿಜೆಪಿ ಪಕ್ಷ ಒಪ್ಪುತ್ತಿಲ್ಲ. ಈ ಬಾರಿ 400 ಸೀಟು ಗೆದ್ದರೆ ಸಂವಿಧಾನ ಬದಲಾಯಿಸುವುದಾಗಿ ಹೇಳುತ್ತಿದ್ದಾರೆ ಹಾಗಾಗಿ ನಾವೆಲ್ಲರೂ ಸಂವಿಧಾನ ರಕ್ಷಣೆ ಮಾಡಲು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ ಎಂದರು.

ಬೆಲೆ ಏರಿಕೆಯ ಕಾರಣ ಈ ದೇಶದ ಬಡವರ ಸ್ಥಿತಿ ದಿನೇದಿನೇ ದುಸ್ಥಿತಿಗೆ ತಲುಪುತ್ತಿದೆ. ನಮ್ಮ 10 ಪ್ರಮುಖ ಬೇಡಿಕೆಗಳ ಪೈಕಿ ಭಾರತ್ ಜೋಡೋ ಯಾತ್ರೆಯಲ್ಲಿ 5 ಅಂಶಗಳನ್ನು ಸ್ವೀಕರಿಸಿದೆ.ಹಾಗಾಗಿ ಕಾಂಗ್ರೇಸ್ ನ್ಯಾಯಪತ್ರ ಸಂವಿಧಾನ ಜನರಿಗೆ ನೀಡಿರುವ ಖಾತ್ರಿಯನ್ನು ಮತ್ತು ದೇಶದ ಸಂಪತ್ತನ್ನು ಜನರಿಗೆ ಹಂಚಿಕೆ ಮಾಡುವ ಗುರಿ ಹೊಂದಿದೆ ಎಂದರು.

ವೇದಿಕೆಯಲ್ಲಿ ಗೌರವಾಧ್ಯಕ್ಷ ಆನಂದಪ್ಪ, ಜಿಲ್ಲಾ ಸಂಚಾಲಕರಾದ ರೇಣಕಾಯಲ್ಲಮ್ಮ, ಅಧ್ಯಕ್ಷರಾದ ಎಂ.ಶಬ್ಬಿರ್ ಸಾಬ್, ಮಂಜುಳ, ಜಂಶಿದಾ ಬಾನುಬಾಲಪ್ಪ, ಬೀಬಿಜಾನ್, ಗೀತಮ್ಮ, ಚಮನ್ ಮುಂತಾದವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...