ದಾವಣಗೆರೆ | ಸಿದ್ಧರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ: ಸಚಿವ ಜಮೀರ್ ಅಹಮದ್

Date:

ಸಿಎಂ ಸಿದ್ದರಾಮಯ್ಯ ಐದು ವರ್ಷ ಸಂಪೂರ್ಣವಾಗಿ ಅಧಿಕಾರ ನಡೆಸಲಿದ್ದಾರೆ, ಈ ಬಗ್ಗೆ ಅನುಮಾನವೇ ಇಲ್ಲ. ಏಕೆಂದರೆ ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ನಗರದ ವಿವಿಧ ಕಾರ್ಯಕ್ರಮಗಳ ಭೇಟಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಆಗಲು ಮುಸ್ಲಿಂ, ದಲಿತ, ಒಕ್ಕಲಿಗರಿಗೆ ಸೇರಿದಂತೆ ಎಲ್ಲರಿಗೂ ಆಸೆ ಇದೆ. ಆದರೆ, ಕುರ್ಚಿ ಖಾಲಿ ಇಲ್ಲ. ಸದ್ಯ ಸಿದ್ದರಾಮಯ್ಯನವರು ಕುರ್ಚಿ ಮೇಲೆ ಕೂತಿದ್ದಾರೆ. ಐದು ವರ್ಷ ಅವರೇ ಸಿಎಂ ಆಗಿರಲಿದ್ದಾರೆ. ಸಿಎಂ ಸ್ಥಾನ ಉಳಿಸಲು ಎ,ಬಿ,ಸಿ ಎನ್ನುವ ಯಾವುದೇ ಪ್ಲಾನ್ ಗಳು ಇಲ್ಲ ಎಂದರು.

ಮೂಡಾ ಹಗರಣ ಮುಚ್ಚಲು ಜಾತಿ ಗಣತಿ ಪ್ರಸ್ತಾಪ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದು ವರ್ಷದ ಕೆಳಗೆ ನಮ್ಮ ನಾಯಕ ರಾಹುಲ್ ಗಾಂಧಿಯವರು ತೆಗೆದುಕೊಂಡ ನಿರ್ಧಾರ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಜಿ.ಟಿ.ದೇವೇಗೌಡ ಕೂಡ ನಮ್ಮ ಪಕ್ಷದವರೇನಲ್ಲ. ಆದರೆ ಅವರಿಗೆ ಮೂಡಾ ಪ್ರಕರಣದ ಸತ್ಯಾಂಶ ಗೊತ್ತಿದೆ. ಈ ಹಿನ್ನಲೆಯಲ್ಲಿ ದಸರಾ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಮಾತನಾಡಿದ್ದಾರೆ. ಕೇಂದ್ರ ಮಂತ್ರಿ ಕುಮಾರಸ್ವಾಮಿ ಕೂಡ ಬೇಲ್ ಮೇಲೆ ಇದ್ದಾರೆ. ಎಫ್ಐಆರ್ ಆದ ತಕ್ಷಣ ರಾಜೀನಾಮೆ ನೀಡಬೇಕು ಎಂದು ಯಾವ ಕಾನೂನಿನಲ್ಲೂ ಇಲ್ಲ, ದೇವರಾಜ್ ಅರಸ್ ಅವರ ನಂತರ ಎರಡನೇ ಬಾರಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.
ರಾಜ್ಯದಲ್ಲಿ ಮೋದಿ ಅವರಿಗಿಂತ ಸಿದ್ದರಾಮಯ್ಯ ಜನಪ್ರಿಯರಾಗಿದ್ದು, ದಾವಣಗೆರೆಯಲ್ಲಿ ಜನುಮದಿನ ಆಚರಿಸಿಕೊಂಡಾಗ ಸಾಬೀತಾಗಿದೆ. ಅದ್ದರಿಂದ ಬಿಜೆಪಿಗೆ ಹೊಟ್ಟೆ ಹುರಿ ಎಂದರು.

ಇದನ್ನು ಓದಿದ್ದೀರಾ? ಗದಗ | ಕಪ್ಪತಗುಡ್ಡದ ಜೀವ ವೈವಿಧ್ಯತೆ ಕಾಪಾಡಬೇಕಿದೆ: ಸಂಸದ ಬೊಮ್ಮಾಯಿ

ಬಿಜೆಪಿ ಅಡಳಿತಾವಧಿಯಲ್ಲಿ ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ನಿವೇಶನ ಕೊಟ್ಟಿದ್ದು, ಸಿದ್ದರಾಮಯ್ಯನವರ ಒಂದು ಕೇಸ್ ಕೂಡ ಇಲ್ಲ. ಆದ್ದರಿಂದ ಈ ನಿವೇಶನ ಪ್ರಕರಣ ಹಿಡಿದಿದ್ದಾರೆ. ಇಡಿ, ಐಟಿ ಬರಲಿ, ಯಾವುದೇ ತನಿಖೆ ಬರಲಿ ಸಿದ್ದರಾಮಯ್ಯ ಹೆದರುವುದಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...