ದಾವಣಗೆರೆ | ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ; ತಾಲೂಕು ಕಸಾಪ ಅಧ್ಯಕ್ಷ್ಯೆ ಸುಮತಿ

Date:

ಸುಂದರ ಬದುಕಿಗೆ ಸಾಮಾಜಿಕ ಮೌಲ್ಯಗಳು ಭದ್ರಬುನಾದಿ ಇದ್ದ ಹಾಗೆ. ಮೌಲ್ಯಗಳಿಲ್ಲದ ಬದುಕು ದೇವರಿಲ್ಲದ ಗುಡಿಯಂತೆ ಎಂದು ದಾವಣಗೆರೆ ತಾಲೂಕು ಕಸಾಪ ಅಧ್ಯಕ್ಷರಾದ ಸುಮತಿ ಜಯಪ್ಪ ಅಭಿಪ್ರಾಯಪಟ್ಟರು.

ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸರ್ವಮಂಗಳಮ್ಮ ಮಾಗನೂರು ಬಸಪ್ಪ ಶಿಕ್ಷಣ ಮಹಾವಿದ್ಯಾಲಯ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ, ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಮ್.ಬಿ. ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ʼಬದುಕು ಮತ್ತು ಸಾಮಾಜಿಕ ಮೌಲ್ಯಗಳʼ ಕುರಿತು ಅವರು ಮಾತನಾಡಿದರು.

ನಮ್ಮ ಕನ್ನಡದ ಹಳೆಗನ್ನಡ ಸಾಹಿತ್ಯ ನಡುಗನ್ನಡ ಸಾಹಿತ್ಯ ಹೊಸಗನ್ನಡ ಸಾಹಿತ್ಯದಲ್ಲಿ ದಾಸ ಸಾಹಿತ್ಯ ವಚನ ಸಾಹಿತ್ಯ ಜನಪದ ಸಾಹಿತ್ಯದಲ್ಲಿ ಬೇಕಾದಷ್ಟು ಮೌಲ್ಯಗಳು ತುಂಬಿವೆ. ಅವುಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸುಂದರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಹಲವಾರು ನಿದರ್ಶನಗಳ ಮೂಲಕ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬಿತ್ತುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯವಾದದ್ದು ಎಂದು ಅಭಿಪ್ರಾಯಪಟ್ಟ ಅವರು, ಮೌಲ್ಯಗಳು ಕಣ್ಣಿಗೆ ಕಾಣುವಂಥವುಗಳಲ್ಲ ಆಚರಣೆಯಲ್ಲಿ, ನಡವಳಿಕೆಯಲ್ಲಿ ತೋರ್ಪಡಿಸುವಂಥವುಗಳು ಎಂದರು.

ಮೌಲ್ಯಗಳ ಬೋಧನೆಯ ವಸ್ತುಗಳನ್ನು ನಮ್ಮ ನಡೆನುಡಿಯಲ್ಲಿ ಅಳವಡಿಸಿಕೊಳ್ಳುವಂಥವಾಗಿವೆ. ನಾವೆಲ್ಲ ಸಾಮಾಜಿಕ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸ್ವಾಸ್ಥ ಸಮಾಜವನ್ನು ಕಟ್ಟುವಲ್ಲಿ ನಮ್ಮದೇ ಆದ ಪ್ರಮುಖ ಪಾತ್ರ ವಹಿಸಬೇಕೆಂದು ಸಲಹೆ ನೀಡಿದರು.

ತಾಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ. ಬೇತೂರು ಪ್ರಸ್ತಾವಿಕ ನುಡಿಗಳನ್ನಾಡಿ, ಕನ್ನಡ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯಗಳ ಪರಿಚಯ ಮಾಡುವಂತಹ ಕೆಲಸ ಸಾಹಿತ್ಯ ಪರಿಷತ್ ಮಾಡುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಎಸ್.ಎಸ್.ಎಮ್.ಬಿ. ಶಿಕ್ಷಣ ವಿದ್ಯಾಲಯ ಪ್ರಾಚಾರ್ಯರಾದ ಡಾ.ಪ್ರೇಮ ಪಿ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ನಿರ್ದೇಶಕಿ ರೇಖಾ ಓಂಕಾರಪ್ಪ, ಮಮತಾ ರುದ್ರಮನಿ ಹಾಗೂ ಎಂ.ಬಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಾದ ಚಂದ್ರಿಕಾ ಮತ್ತು ಅಕ್ಷತಾ ಪ್ರಾರ್ಥಿಸಿದರು. ಯಶಸ್ವಿನಿ ಸ್ವಾಗತಿಸಿದರು. ರಹೀಲಾ ವಂದಿಸಿದರು. ಮೋಕ್ಷ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...