ದಾವಣಗೆರೆ | ಜ್ವರದಿಂದ ವಿದ್ಯಾರ್ಥಿನಿ ಸಾವು: ಡೆಂಘೀ ಶಂಕೆ; ಆರೋಗ್ಯಾಧಿಕಾರಿಗಳ ವಿರುದ್ಧ ಜನರ ಆಕ್ರೋಶ

Date:

ರಾಜ್ಯಾದ್ಯಂತ  ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ ಪದೇ ಪದೇ ಮರುಕಳಿಸುತ್ತಿರುವ ಡೆಂಘೀ ಪ್ರಕರಣಗಳು ಮತ್ತು ಶಂಕಿತ ಡೆಂಘೀ ಜ್ವರದ ಸಾವಿನ ಪ್ರಕರಣಗಳು ಜಿಲ್ಲಾ ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತು ನಿರ್ಲಕ್ಷ ವಹಿಸುತ್ತಿದೆಯೇ ಎನ್ನುವ ಅನುಮಾನವನ್ನು ಮೂಡಿಸುತ್ತಿದೆ.

ಕಳೆದ ತಿಂಗಳು ಹೊನ್ನಾಳಿಯ ಓರ್ವ ಮತ್ತು ದಾವಣಗೆರೆಯ ಓರ್ವ ಯುವಕ ಸೇರಿದಂತೆ ಡೆಂಘೀನಿಂದ ಮೃತಪಟ್ಟ ಪ್ರಕರಣಗಳು ವರದಿಯಾಗಿದ್ದವು. ಇದರ ಬೆನ್ನಲ್ಲೇ ಜಿಲ್ಲಾ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿತ್ತು. ಆದರೀಗ ಜಗಳೂರಿನಲ್ಲಿ ಶಂಕಿತ ಡೆಂಘೀ ಜ್ವರದಿಂದ ಓರ್ವ ಯುವತಿ ಸಾವನ್ನಪ್ಪಿರುವುದು ಆರೋಗ್ಯ ಇಲಾಖೆಯ ಕ್ರಮವನ್ನು ಪ್ರಶ್ನಿಸುವಂತೆ ಮಾಡಿದೆ.

ಇತ್ತೀಚೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಗಳೂರಿಗೆ ಭೇಟಿ ನೀಡಿ ಅಲ್ಲಿನ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆ ಮತ್ತು ಶಿಥಿಲ ಕಟ್ಟಡವನ್ನು ಪರಿಶೀಲಿಸಿ ಶೀಘ್ರ ನೂತನ ಕಟ್ಟಡವನ್ನು ಒದಗಿಸುವುದಾಗಿ ಭರವಸೆ ನೀಡಿ, ಡೆಂಘೀ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೆಂಘೀ ಪ್ರಕರಣಗಳ ಬಗ್ಗೆ ಮುಂಜಾಗ್ರತೆ ವಹಿಸಲು ಶಾಸಕ.ಬಿ.ದೇವೇಂದ್ರಪ್ಪ ಅವರು ಪ್ರತ್ಯೇಕ ಸಭೆ ನಡೆಸಿ ಎಚ್ಚರಿಕೆ ನೀಡಿದ್ದರೂ ಸಹ, ತಾಲೂಕು ಆರೋಗ್ಯಾಧಿಕಾರಿ ಮಾತ್ರ ಪಟ್ಟಣದಲ್ಲಿನ ಜ್ವರದ ಪ್ರಕರಣಗಳ ಬಗ್ಗೆ ಕಣ್ಮುಚ್ಚಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದರ ಬೆನ್ನಲ್ಲೇ ಮತ್ತೊಮ್ಮೆ ಡೆಂಘೀನಿಂದ ಜಗಳೂರು ನಗರದ ಭುವನೇಶ್ವರಿ ವೃತ್ತದ ಬಳಿಯಿರುವ ನಾಗರಾಜ್ ಎಂಬುವವರ ಪುತ್ರಿ ಕಾಲೇಜು ವಿದ್ಯಾರ್ಥಿನಿ ರೇಖಾ (19) ಮೃತಪಟ್ಟಿರುವುದು ತಾಲೂಕಿನ ಜನರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಡೆಂಘೀ ತಡೆಗಟ್ಟಲು ಸೂಕ್ತ ಕ್ರಮ ವಹಿಸದ ತಾಲೂಕು ಆರೋಗ್ಯ ಇಲಾಖೆಯ ಬಗ್ಗೆ ಕಿಡಿಕಾರುತ್ತಿರುವ ಸಾರ್ವಜನಿಕರು, ಪೋಷಕರು ಮತ್ತು ನಗರದ ಜನತೆ ಸೂಕ್ತ ಕ್ರಮ ಕೈಗೊಂಡಿದ್ದರೆ, ಈ ಸಾವನ್ನು ತಪ್ಪಿಸಬಹುದು ಮತ್ತು ಡೆಂಘೀ ಭೀತಿ ಪ್ರಕರಣಗಳು ವರದಿಯಾಗದಂತೆ ತಡೆಯಬಹುದಿತ್ತು ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಆರೋಗ್ಯ ಇಲಾಖೆಯ ನಿರ್ದೇಶನದಂತೆ ಮನೆ ಮನೆಗೆ ತೆರಳಿ ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆಮನೆಗೆ ತೆರಳಿ ಸಮೀಕ್ಷೆ, ಲಾರ್ವಾ ಸರ್ವೆ, ಮಾಹಿತಿ ಪಡೆದಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ನೆರೆಹೊರೆಯ ಕುಟುಂಬದವರು ಹಾಗೂ ಸಾರ್ವಜನಿಕರು ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ನಿರ್ಲಕ್ಷವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವಾರದಿಂದ ಜ್ವರದಿಂದ ಬಳಲುತ್ತಿದ್ದ ರೇಖಾ ವಿವಾಹ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದಾಗ ಇದ್ದಕ್ಕಿದ್ದಂತೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

ಆರೋಗ್ಯ ಇಲಾಖೆ ಮಾಡಿದ ನಿರ್ಲಕ್ಷ್ಯದ ತಪ್ಪಿಗೆ ಕಾಲೇಜು ವಿದ್ಯಾರ್ಥಿನಿ ಯುವತಿ ಡೆಂಘೀ ಶಂಕಿತ ಮಹಾಮಾರಿಗೆ ಬಲಿಯಾಗಿರುವುದು ನಿಜಕ್ಕೂ ಪಟ್ಟಣದಲ್ಲಿ ಆತಂಕ ಹೆಚ್ಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...