ದಾವಣಗೆರೆ | ಸಣ್ಣಪುಟ್ಟ ಕಾರಣಕ್ಕೆ ಮರಗಳ ಮಾರಣಹೋಮ ಸಾರ್ವಜನಿಕರ ಆಕ್ರೋಶ

Date:

ದಾವಣಗೆರೆ ಜಿಲ್ಲೆಯ ಜಗಳೂರಿಲ್ಲಿ ರಸ್ತೆ ಬದಿಯಲ್ಲಿದ್ದ ಸಾಲು ಮರಗಳನ್ನು ಸೋಮವಾರ (ಫೆ.5) ಬೇಕಾಬಿಟ್ಟಿಯಾಗಿ ಕತ್ತರಿಸಲಾಗಿದ್ದು, ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಿಸಿಲಿನಿಂದ ಸಾರ್ವಜನಿಕರಿಗೆ, ನೂರಾರು ಪಕ್ಷಿಗಳಿಗೆ, ದಾರಿ ಹೋಕರಿಗೆ ತಂಪೆರೆಯುತ್ತಿದ್ದ ದಶಕಗಳಷ್ಟು ಹಳೆಯ ದೊಡ್ಡ ದೊಡ್ಡ ಮರಗಳನ್ನು ಕ್ಷುಲ್ಲಕ ಕಾರಣ ಹೇಳಿ ಧರೆಗುರುಳಿಸಲಾಗಿದೆ. ಇಲ್ಲಿನ ರಾಮಾಲಯ ರಸ್ತೆಯಲ್ಲಿ 40ರಿಂದ 50ವರ್ಷಗಳ ಹಳೆಯದಾದ ನಾಲ್ಕು ದೈತ್ಯ ಮರಗಳನ್ನು ಯಂತ್ರಗಳನ್ನು ಬಳಸಿ ಕತ್ತರಿಸಲಾಗಿದೆ.

ವಿದ್ಯುತ್ ಲೈನ್ ಮೇಲೆ ಮರದ ಕೊಂಬೆಗಳು ಚಾಚಿವೆ ಎಂಬ ಕಾರಣಕ್ಕೆ ಆಕಾಶದೆತ್ತರಕ್ಕೆ ಬೆಳೆದಿದ್ದ ಸುಬಾಬುಲ್ಲಾ, ರೇನ್ ಟ್ರೀ ಮರಗಳ ಬಹುತೇಕ ಕೊಂಬೆಗಳನ್ನು ಕತ್ತರಿಸಿದ್ದು ಅವುಗಳೀಗ, ಅಸ್ತಿಪಂಜರದಂತೆ ಕಾಣುತ್ತಿವೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನಲ್ಲಿ ತೀವ್ರ ಬರಗಾಲ ಇದೆ. ಪ್ರಸ್ತುತ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ವಿವಿಧ ಹಳ್ಳಿಗಳಿಂದ ನಿತ್ಯ ಆಗಮಿಸುವ ಜನರು ಅಲ್ಲಲ್ಲಿ ಮರಗಳ ತಂಪಿನಲ್ಲಿ ಕುಳಿತು ದಣಿವಾರಿಸಿಕೊಳ್ಳುತ್ತಿದ್ದರು. ದೈತ್ಯ ಮರಗಳನ್ನು ಕಡಿದು ಹಾಕಲು ಕೆಲವು ವರ್ತಕರು ಮತ್ತು ಕಟ್ಟಡಗಳ ಮಾಲೀಕರು ಅರಣ್ಯ ಇಲಾಖೆಗೆ ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ರಾಮಾಲಯ ರಸ್ತೆಯಲ್ಲಿ ನಾಲ್ಕೈದು ಮರಗಳ ಕೊಂಬೆಗಳು ವಿದ್ಯುತ್ ಮಾರ್ಗಕ್ಕೆ ಅಡ್ಡಿಯಾಗುತ್ತಿವೆ ಎಂಬ ಕಾರಣಕ್ಕೆ ಪಟ್ಟಣ ಪಂಚಾಯಿತಿ ಸದಸ್ಯರೊಬ್ಬರು ಅರ್ಜಿ ಸಲ್ಲಿಸಿದ್ದು, ಅನುಮತಿ ನೀಡಲಾಗಿದೆ. ಉಳಿದಂತೆ ಕೆಲವರು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಮಾದ್ಯಮದವರಿಗೆ ತಿಳಿಸಿದ್ದಾರೆ.

ಅರಣ್ಯಾಧಿಕಾರಿಗಳು ಮರ ಕಡಿಯಲು ಸೂಕ್ತ ಕಾರಣವಿಲ್ಲದೆ ಅನುಮತಿ ನೀಡಬಾರದು. ಅನುಮತಿಗೂ ಮೊದಲು ಸ್ಥಳ ಪರಿಶೀಲನೆ ನಡೆಸಬೇಕು. ಮರಗಳನ್ನು ಬೆಳೆಸುವುದಕ್ಕೆ ಒತ್ತು ನೀಡಬೇಕು. ಮರಗಳ ಮಾರಣಹೋಮ ನಡೆಸಲು ಅವಕಾಶ ನೀಡಬಾರದು ಈ ನಡೆ ಹೀಗೆ ಮುಂದುವರಿದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...