ದಾವಣಗೆರೆ | ದಿಢೀರ್ ಕುಸಿದ ಶಾಲೆಯ ಮೇಲ್ಛಾವಣಿ; ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

Date:

ಶಾಲೆಯ ಮೇಲ್ಛಾವಣಿ ದಿಢೀರ್ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೇ ಮಕ್ಕಳು ಪಾರಾಗಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕರೂರಿನಲ್ಲಿ ನಡೆದಿದೆ.

ಈ ಶಾಲೆ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕೂಗಳತೆಯ ಹೊರವಲಯದ ಕರೂರು ಗ್ರಾಮದಲ್ಲಿದೆ. ಒಂದರಿಂದ ಐದನೇ ತರಗತಿವರೆಗೆ ಇರುವ ಕನ್ನಡ -ಉರ್ದು ಕಿರಿಯ ಪ್ರಾಥಮಿಕ ಶಾಲೆಯಾಗಿದ್ದು, ದಾವಣಗೆರೆಯ ಅತ್ಯಂತ ಹಳೆಯ ಶಾಲೆ ಎಂಬ ಹೆಗ್ಗಳಿಕೆಯೂ ಇದಕ್ಕಿದೆ.

ಇತ್ತೀಚಿಗೆ ನಿರಂತರವಾಗಿ ಸುರಿದ ಭಾರೀ ಮಳೆಗೆ ಸೋರುತ್ತಿರುವ ಹೆಂಚುಗಳ ಮಧ್ಯೆ ಇರುವ ಮರದ ತುಂಡುಗಳು ಬಹುತೇಕವಾಗಿ ಶಿಥಿಲಗೊಂಡಿದ್ದು, ಮಧ್ಯಾಹ್ನ 1.30ರ ಸಮಯಕ್ಕೆ ಏಕಾಏಕಿ ಛಾವಣಿ ಕುಸಿದು ಬಿದ್ದಿದ್ದು ಮಕ್ಕಳು ಮಧ್ಯಾಹ್ನದ ಸಮಯದಲ್ಲಿ ಹೊರಗಿದ್ದ ಕಾರಣ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 07 26 at 1.41.38 PM

ಈ ಕೊಠಡಿಯನ್ನು ಕೆಲ ವರ್ಷಗಳಿಂದ ಮಕ್ಕಳ ಬೋಧನೆಗೆ ಬಳಸುತ್ತಿರಲಿಲ್ಲ ಎಂದು ಮಾಹಿತಿ ತಿಳಿದು ಬಂದಿದ್ದು, ಆದರೆ ಬೇರೆ ಕೊಠಡಿಗಳಿಗೆ ಹೊಂದಿಕೊಂಡಿದೆ. ಜೊತೆಗೆ ಅನ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದರು, ಹಾಗೂ ಅಲ್ಲಿಗೆ ಮಕ್ಕಳು ಕೂಡ ಓಡಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಸರ್ಕಾರಿ ಶಾಲೆಗಳ ದುರವಸ್ಥೆಗೆ ಇದೊಂದು ಕನ್ನಡಿ ಆಗಿದ್ದು. ಸರ್ಕಾರ ಶಾಲೆಗಳು ದುರಸ್ತಿ ಕಾಣದೆ ಅಭಿವೃದ್ಧಿ ಮರೀಚಿಕೆಯಾಗಿದೆ. ಶಾಲೆಯ ಜಾಗದ ವಿವಾದವು ಶಾಲೆಯಲ್ಲಿ ಮೂಲ ಸೌಕರ್ಯ ನಿರ್ಮಾಣಕ್ಕೆ ಅಡ್ಡಿಯಾಗಿದೆ ಎನ್ನಲಾಗಿದೆ. ಈ ಶಾಲೆಯ ಜಾಗವನ್ನು ಯಶೋಧಮ್ಮ ಎಂಬುವವರು ಬೇರೊಬ್ಬರಿಂದ ಖರೀದಿಸಿದ್ದೇವೆ ಎಂದು ಶಾಲೆಯ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಜಾಗದ ವಿವಾದವನ್ನು ಬಗೆಹರಿಸಲು ಇದುವರೆಗೂ ಯಾರೊಬ್ಬರೂ ಆಸಕ್ತಿ ವಹಿಸಿಲ್ಲ ಎಂದು ಸ್ಥಳೀಯ ಪೋಷಕರು ಮಾಹಿತಿ ನೀಡಿದ್ದಾರೆ.

ಜಾಗ ಮಾರಾಟ ಮಾಡಿರುವವರು ಹೇಳುವಂತೆ ಅವರು ಶಾಲೆಯ ಜಾಗ ಬಿಟ್ಟು ಮಾರಾಟ ಮಾಡಿದ್ದು ಶಾಲೆಯ ಜಾಗಕ್ಕೂ ಅವರಿಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.‌ ಆದರೆ ಖರೀದಿಸಿದವರು ಇವರು ಸ್ಥಳೀಯ ರಾಜಕಾರಣಿಗಳ ಪ್ರಭಾವ ನನಗೆ ಇದೆ. ಶಾಲೆಯ ಜಾಗ ನಮ್ಮದು ಎಂದು ಶಾಲೆಯ ಜಾಗವನ್ನು ಅಭಿವೃದ್ದಿ ಪಡಿಸಲು ಬಿಡುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಯ ಈ ಪರಿಸ್ಥಿತಿಯ ಮಧ್ಯೆ ಮಕ್ಕಳು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದು, ಮಕ್ಕಳು ಆಗಬಹುದಾಗಿದ್ದ ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮುಂದಾದರೂ ತಕ್ಷಣ ಜಿಲ್ಲಾಡಳಿತ ಸ್ಥಳೀಯ ರಾಜಕಾರಣಿಗಳು ಮತ್ತು ಸಚಿವರು ಶಾಸಕರು ಈ ಬಗ್ಗೆ ಗಮನಹರಿಸಿ ಶಾಲೆಯ ಅಭಿವೃದ್ಧಿಯನ್ನು ಕೈಗೊಂಡು ಮಕ್ಕಳನ್ನು ಅನಾಹುತದಿಂದ ಪಾರು ಮಾಡಬೇಕು ಎಂದು ಪ್ರಜಾಪರಿವರ್ತನಾ ವೇದಿಕೆ ಮುಖಂಡ ಲಿಂಗರಾಜ್ ಮತ್ತು ಸ್ಥಳೀಯರು, ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.

ವರದಿ: ವಿನಾಯಕ್ ದಾವಣಗೆರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...