ದಾವಣಗೆರೆ | ನಾಲೆಯ ಕೊನೆ ಭಾಗಕ್ಕೆ ನೀರು ಹರಿದಿಲ್ಲ; ಸಚಿವರು ರೈತರ ಹಿತ ಕಾಯುತ್ತಿಲ್ಲ: ಶಾಸಕ ಹರೀಶ್

Date:

ದಾವಣಗೆರೆ ಜಿಲ್ಲೆಯ ರೈತರಿಗೆ ಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಹರಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸಿದ್ದಾರೆ. ಕೊನೆ ಭಾಗದ ರೈತರಿಗೆ ನೀರುಸಿಗದೆ ಅನ್ಯಾಯವಾಗಿದೆ ಆದರೆ ಸಚಿವರು ರೈತರ ಬಗ್ಗೆ ಯಾವುದೇ ಜವಾಬ್ದಾರಿ ವಹಿಸಿಲ್ಲ ಎಂದು ಶಾಸಕ ಬಿ.ಪಿ.ಹರೀಶ್ ಆಕ್ರೋಶ ವ್ಯಕ್ತಪಡಿಸಿದರು.

ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾಜಲಾಶಯದ ನಾಲೆ ಹೊಂದಿರುವ ದಾವಣಗೆರೆ ಜಿಲ್ಲೆಗೆ ಸಚಿವರು ಭದ್ರ ಜಲಾಶಯದ ನೀರನ್ನು ಕೊನೆ ಭಾಗದ ಗ್ರಾಮಗಳಿಗೆ ನೀರು ಹರಿಸುವಲ್ಲಿ ಸಂಪೂರ್ಣವಾಗಿ ಎಡವಿದ್ದಾರೆ. ಭದ್ರಾ ಕಾಡಾ ಜವಾಬ್ದಾರಿಯನ್ನು ನೀರಾವರಿ ಸಚಿವರು ಶಿವಮೊಗ್ಗ ಜಿಲ್ಲೆಯ ಸಚಿವರಾದ ಮಧುಬಂಗಾರಪ್ಪ ಅವರಿಗೆ ನೀಡಿದ್ದಾರೆ. ಆದರೆ, ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಮಾತ್ರ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ದಾವಣಗೆರೆ ಜಿಲ್ಲೆಯ ರೈತ ಬಗ್ಗೆ ಕಾಳಜಿ ವಹಿಸಬೇಕಾಗಿದ್ದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜವಾಬ್ದಾರಿ ವಹಿಸಲಿಲ್ಲ ಹಾಗೂ ಯಾವುದೇ ಹೋರಾಟ ಮಾಡಲಿಲ್ಲ ಅವರಿಗೆ ಜಿಲ್ಲೆಯ ರೈತರ ಹಿತ ಬೇಕಾಗಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಡಿಕೆ ತೋಟಕ್ಕೆ ಹತ್ತು ದಿನ ನೀರು ಬಿಟ್ಟು ನಿಲ್ಲಿಸಿದರೆ ಜಲಾಶಯದಲ್ಲಿ ನೀರು ಉಳಿಯುತ್ತದೆ ಎಂಬುದು ಮೇಲ್ಬಾಗದ ರೈತರದ್ದಾಗಿದೆ. ಕೇವಲ 12 ದಿನನೀರು ಬಿಟ್ಟರೆ ಕೊನೆ ಭಾಗಕ್ಕೆ ತಲುಪುವುದಿಲ್ಲ. ಮುಂದಿನ ದಿನದಲ್ಲಿ ಇನ್ನೊಂದು ವೇಳೆ ನೀರು ಹರಿಸಲಾಗುತ್ತದೆ. ಈ ವೇಳೆಯಾದರೂ ಎಸ್. ಎಸ್. ಮಲ್ಲಿಕಾರ್ಜುನ್ ಅವರು, ಭದ್ರಾ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಲಿ ಎಂದು ಒತ್ತಡ ಹಾಕಲಿ ಎಂದರು

ಸಚಿವರಿಗೆ ಬಡ ರೈತನಿಗಿಂತ ಕಾರ್ಖಾನೆ ಮುಖ್ಯವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮಧು ಬಂಗಾರಪ್ಪಗೆ ಒತ್ತಡ ಹಾಕಲಿಲ್ಲ.ಸರ್ಕಾರ ಬಜೆಟ್ ಅಧಿವೇಶನ ನಡೆಸಿದ ವೇಳೆ ಬರಗಾಲದ ಬಗ್ಗೆ ಕುಡಿಯುವ ನೀರಿನ ವಿಚಾರವಾಗಿ ಮಾತನಾಡಲಿಲ್ಲ. ಈ ಬಾರಿಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಯಾವ ಕೊಡುಗೆ ನೀಡಿಲ್ಲ. ಈ ಭಾಗದ ಸಚಿವರು ಶಾಸಕರು ಸರ್ಕಾರಕ್ಕೆ ಒತ್ತಡ ಹಾಕಿಲ್ಲ ಎಂದರು.   ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಬಿ. ಎಂ. ಸತೀಶ್‌, ಹೆಚ್. ಪಿ. ವಿಶ್ವಾಸ್, ಕ್ರೋಟೇಶ್ ಗೌಡ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...