ದಾವಣಗೆರೆ | ನೀರು ಪೂರೈಕೆಯಲ್ಲಿ ವ್ಯತ್ಯಯ; ಕಾಂಗ್ರೆಸ್ ಆಡಳಿತ ವೈಫಲ್ಯ ಕಾರಣ: ಪ್ರಸನ್ನ ಕುಮಾರ್

Date:

ದಾವಣಗೆರೆ ನಗರದಲ್ಲಿ ಕಳೆದ ಎರಡು ದಿನದಿಂದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗಿದ್ದು, ಮಹಾನಗರ ಪಾಲಿಕೆಯ ಆಡಳಿತ ಪಕ್ಷದ ಬೇಜವಾಬ್ದಾರಿ ವರ್ತನೆಯಿಂದ ಕುಡಿಯುವ ನೀರಿನ ಕೊರತೆ ಉಂಟಾಗಿದೆ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಪ್ರಸನ್ನ ಕುಮಾರ್ ಆಪಾದಿಸಿದ್ದಾರೆ.

ಹರಿಹರದ ರಾಜನಹಳ್ಳಿ ಕುಡಿಯುವ ನೀರು ಸರಬರಾಜು ಘಟಕಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಬೇಸಿಗೆಯಲ್ಲಿ ನೀರು ಪೂರೈಸಲು 2 ತಿಂಗಳುಗಳ ಮುನ್ನವೇ ನಗರದಲ್ಲಿ ಕುಡಿಯುವ ನೀರಿನ ಅವಶ್ಯಕತೆ ಅನುಗುಣವಾಗಿ ನೀರನ್ನು ಸಂಗ್ರಹಿಸಬೇಕಾಗಿದ್ದ ಪಾಲಿಕೆ ಕಣ್ಣುಮುಚ್ಚಿ ಕುಳಿತ ತಪ್ಪಿನ ಪರಿಣಾಮವನ್ನು ನಗರದ ನಾಗರಿಕರು ಅನುಭವಿಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನೀರಿನ ಸಂಗ್ರಹಗಾರಗಳು ಬರಿದಾಗಿದ್ದು, ಪ್ರತೀ ದಿನ ಕನಿಷ್ಠ 60ಎಂಎಲ್‌ಡಿ ನೀರಿನ ಅವಶ್ಯಕತೆ ಇದೆ. ರಾಜನಹಳ್ಳಿ ಕೆರೆ ಬರಿದಾಗಿದೆ. ಕುಂಡವಾಡ ಕೆರೆಯಲ್ಲೂ ಮತ್ತು ಟಿವಿ ಸ್ಟೇಷನ್ ಕೆರೆಯೂ ಕನಿಷ್ಠ ನೀರಿನ ಮಟ್ಟ ತಲುಪಿ ಬರಿದಾಗಿದೆ ಎಂದು ಅವರು ಅಸಹನೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ ತಿಂಗಳಲ್ಲೇ ಜಿಲ್ಲಾಡಳಿತಕ್ಕೆ ಭದ್ರಾ ನೀರನ್ನು ಹರಿಸಿ ಬೇಸಿಗೆಗೆ ಅಗತ್ಯವಿರುವ ನೀರನ್ನು ಸಂಗ್ರಹಿಸಲು ಕ್ರಮ ಕೈಗೊಳ್ಳುವಂತೆ ಎರಡು ಬಾರಿ ಮನವಿ ಸಲ್ಲಿಸಲಾಯಿತು ಮತ್ತು ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ದುರ್ಗಾಂಬಿಕಾ ಜಾತ್ರೆ ಮತ್ತು ಬೇಸಿಗೆಗೆ ಕುಡಿಯುವ ನೀರಿನ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿದರು ಸಹ, ಜನರ ಮೂಲಭೂತ ಸಮಸ್ಯೆಗಳಿಗೆ ಕಿವಿ ಕೊಡಬೇಕಿದ್ದ ಕಾಂಗ್ರೆಸ್‌ನ ಆಡಳಿತ ಅಧಿಕಾರದ ಮಜವಾದಿತನವನ್ನು ಪ್ರದರ್ಶನ ಮಾಡುತ್ತಾ ನಗರದ ಜನರಿಗೆ ಬರದ ಗ್ಯಾರಂಟೀ ನೀಡಿದೆ. ಕನಿಷ್ಠ ಕುಡಿಯುವ ನೀರನ್ನು ಕೊಡದ ಕಾಂಗ್ರೆಸ್ ಜನರ ಮನೆಗಳಲ್ಲಿ ನೀರಿನ ಕೊಡಗಳು ಬರಿದಾಗಲಿವೆ ಎಂಬುದನ್ನು ಖಚಿತ ಪಡಿಸಿದೆ ಎಂದು ದೂರಿದರು.

ಈ ಕೂಡಲೇ ಜಿಲ್ಲಾಡಳಿತ ಮತ್ತು ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಿ ಮುಂದಿನ 45 ದಿನಗಳಿಗೆ ಅವಶ್ಯಕವಿರುವ ನೀರನ್ನು ಡ್ಯಾಮ್‌ನಿಂದ ನದಿಗೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಇನ್ನೆರಡು ದಿನಗಳಲ್ಲಿ ನೀರಿನ ವ್ಯತ್ಯಯ ಉಂಟಾದ ವಾರ್ಡ್‌ಗಳಿಗೆ ಕುಡಿಯುವ ನೀರನ್ನು ಪೂರೈಸಲು ಅನ್ಯ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಒಂದು ವೇಳೆ ಪಾಲಿಕೆ ಮತ್ತು ಜಿಲ್ಲಾಡಳಿತ ಕುಡಿಯುವ ನೀರು ಪೂರೈಸಲು ವಿಫಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಮಾಜಿ ಮೇಯರ್ ಎಸ್‌.ಪಿ ವೀರೇಶ್, ಉಪ ಮಹಾ ಪೌರರಾದ ಯಶೋಧ ಹೆಗ್ಗಪ್ಪ, ಪಾಲಿಕೆ ಸದಸ್ಯರಾದ ಆರ್.ಶಿವಾನಂದ್, ಎಲ್.ಡಿ. ಗೋಣ್ಯಪ್ಪ, ಕೆ.ಎಂ. ವೀರೇಶ್, ಶಾಂತ್ ಕುಮಾರ್ ಸೋಗಿ, ಶಿವಪ್ರಕಾಶ್, ತಂಡ ಮತ್ತು ಬಿಜೆಪಿ ಇತರೆ ಬಿಜೆಪಿ ಪಾಲಿಕೆ ಸದಸ್ಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...