ದಾವಣಗೆರೆ | ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು: ಶಾಸಕ ಬಿ.ಪಿ ಹರೀಶ್

Date:

ದಾವಣಗೆರೆ ಜಿಲ್ಲೆಯ ಹರಿಹರ ನಗರದ ವಿವಿಧ ವಾರ್ಡುಗಳಿಗೆ ಭೇಟಿ ನೀಡಿರುವ ಶಾಸಕ ಬಿ.ಪಿ. ಹರೀಶ್, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದಾರೆ. ನೀರಿನ ಸಮಸ್ಯೆಯನ್ನು ನೀಗಿಸಲು ಭದ್ರಾ ಜಲಾಶಯದಿಂದ ನದಿಗೆ ಏಪ್ರಿಲ್‌ 3ರಿಂದ ನೀರು ಹರಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಾರ್ಡ್‌ಗಳಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “10 ದಿನಗಳ ಹಿಂದೆ ನದಿಯಲ್ಲಿ ನೀರಿನ ಹರಿವು ಸ್ಥಗಿತಗೊಂಡಿದೆ. ಅಂದಿನಿಂದಲೇ ನಗರಕ್ಕೆ ಕುಡಿಯುವ ನೀರಿನ ಸರಬರಾಜು ನಿಂತಿದೆ. ಏ.3ರ ಬದಲು ಮಾ.27ರಿಂದಲೇ ನದಿಗೆ ನೀರು ಹರಿಸಲು ಸಂಬಂಧಿತ ಅಧಿಕಾರಿಗಳಿಗೆ ಆಗ್ರಹಿಸಿದ್ದೇನೆ” ಎಂದರು.

ದೇವರಬೆಳೆಕೆರೆ ಪಿಕ್‌ಅಪ್‌ನಿಂದ ಹಳ್ಳಕ್ಕೆ ನೀರು ಹರಿಸಲು ಮನವಿ ಮಾಡಿದ್ದೇನೆ. ಹಿರಿಯ ಅಧಿಕಾರಿಗಳು ಮೌಖಿಕವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಅಧಿಕಾರಿಗಳು ಲಿಖಿತ ಆದೇಶ ಕೇಳುತ್ತಿದ್ದಾರೆ ಎಂದ ಅವರು, ದೇವರಬೆಳೆಕೆರೆ ಪಿಪ್‌ಅಪ್‌ನಿಂದ ಶೀಘ್ರ ನೀರು ಹರಿಸಬೇಕು ಎಂದು ಅಧಿಕಾರಿಗಳಿಗೆ ಕೇಳಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಎಲ್ಲಾ ವಾರ್ಡುಗಳಲ್ಲಿಯೂ ಕೊಳವೆಬಾವಿ, ಕಿರುನೀರು ಸರಬರಾಜು ಕೇಂದ್ರಗಳಿವೆ. ಆದರೆ, ಅವುಗಳಲ್ಲಿ ಗಣನೀಯ ಸಂಖ್ಯೆಯ ಕೊಳವೆಬಾವಿಗಳಿಗೆ ದುರಸ್ತಿಯ ಅಗತ್ಯವಿದೆ. ನಗರಸಭೆ ಹೆಚ್ಚುವರಿ ಸಿಬ್ಬಂದಿ ನೇಮಿಸಿ ಸಮರೋಪಾದಿಯಲ್ಲಿ ದುರಸ್ತಿ ಹಾಗೂ ಪೈಪ್‌ಲೈನ್ ಅಳವಡಿಕೆ ಕಾರ್ಯ ಕೈಗೊಂಡು ನೀರಿಗಾಗಿ ಜನರು ಪರದಾಡುತ್ತಿರುವುದನ್ನು ನಿವಾರಿಸಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

ಅವರು ಗುತ್ತೂರು, ಹಳೆ ಹರ್ಲಾಪುರ, ದೇವಸ್ಥಾನ ರಸ್ತೆ , ಗಂಗಾನಗರ, ಹಳ್ಳದಕೇರಿ, ವಿದ್ಯಾನಗರ, ಜೈ ಭೀಮನಗರ ಸೇರಿದಂತೆ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ಧೂಡಾ ಮಾಜಿ ಸದಸ್ಯ ರಾಜು ರೋಖಡೆ, ನಗರಸಭೆ ಪೌರಾಯುಕ್ತ ಬಸವರಾಜ್ ಐಗೂರು, ಎಇಇ ತಿಪ್ಪೇಶಪ್ಪ ಜಿ.ಟಿ., ಎಇಗಳಾದ ಮಂಜುನಾಥ್, ಮಂಜುಳಮ್ಮ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...