ದಾವಣಗೆರೆ | ಹವಾಮಾನ ವೈಪರೀತ್ಯ; ಕಡಲೆ ಬೆಳೆ ಇಳುವರಿ ಕುಸಿತ

Date:

ಹವಾಮಾನ ವೈಪರೀತ್ಯದಿಂದ ಪ್ರಮುಖ ಹಿಂಗಾರು ಬೆಳೆ ಕಡಲೆ ಬೆಳೆಯ ಇಳುವರಿ ತೀವ್ರ ಕುಸಿತ ಕಂಡಿದೆ. ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವ್ಯಾಪ್ತಿಯಲ್ಲಿ ಕಡಲೆ ಕೊಯ್ಲು ನಡೆದಿದ್ದು, ಇಳುವರಿಯಲ್ಲಿ ಭಾರಿ ಕುಸಿತವಾಗಿದ್ದು ಬರದಿಂದ ಹೈರಾಣಾಗಿದ್ದ ರೈತರನ್ನು ಮತ್ತೇ ಸಂಕಷ್ಟಕ್ಕೆ ದೂಡಿದೆ.

ಅಕ್ಟೋಬರ್ ಅಂತ್ಯದಲ್ಲಿ ರೈತರು ಕಡಲೆ ಬೀಜ ಬಿತ್ತನೆ ಮಾಡಿದ್ದರು. ಡಿಸೆಂಬರ್‌ ನಲ್ಲಿ ಹೂವು ಬಿಡುವ ಕಾಲದಲ್ಲಿ ಮಂಜು ಬೀಳಲಿಲ್ಲ. ಚಳಿ ಪ್ರಮಾಣ ಕಡಿಮೆ ಇತ್ತು. ಕಾರಣ, ನಿರೀಕ್ಷಿಸಿತ ಪ್ರಮಾಣದಲ್ಲಿ ಕಾಯಿಕಟ್ಟಲಿಲ್ಲ. ಬಿತ್ತನೆ ಮೊದಲು ನೆಲ ಹಸಿಯಾಗುವಷ್ಟು ಒಂದು ಮಳೆಯಾಗಿತ್ತು. ಬಿತ್ತಿದ ನಂತರ ಒಂದು ಮಳೆಯಾಗಿ, ಇಬ್ಬನಿ ಬಿದ್ದಿದ್ದರೆ ಕಡಲೆ ಸಮೃದ್ಧವಾಗಿ ಬೆಳೆಯುತ್ತಿತ್ತು. ಆದರೆ, ಮಳೆಯೂ ಬರಲಿಲ್ಲ ಇಬ್ಬನಿಯೂ ಬೀಳದೆ ಗಿಡಗಳು ಚನ್ನಾಗಿ ಬೆಳೆಯಲಿಲ್ಲ ಎನ್ನುತ್ತಾರೆ ಈಭಾಗದ ರೈತರು.

ಬಿತ್ತನೆಗೆ ಪ್ರತಿ ಎಕರೆಗೆ 4,000 ರೂ.ದಿಂದ 5,000 ರೂ. ಖರ್ಚು ತಗುಲಿದೆ. ಕೊಯ್ಲು, ಯಾಂತ್ರಿಕ ಒಕ್ಕಣೆಗೆ ಪ್ರತಿ ಎಕರೆಗೆ 4,000 ರೂ. ಖರ್ಚಾಗುತ್ತದೆ. ಕಳೆ, ಔಷಧ ಸಿಂಪಡಣೆಗೆ 4,000ರೂ. ಖರ್ಚು ಆಗಿದೆ. ಪ್ರತಿ ಎಕರೆಗೆ ಕಡಲೆ ಬೆಳೆಯಲು 12, 000 ರೂ. ಖರ್ಚಾಗುತ್ತದೆ. ಬಹುತೇಕ ಹೊಲಗಳಲ್ಲಿ 2 ಕ್ವಿಂಟಲ್‌ಗಿಂತ ಹೆಚ್ಚು ಇಳುವರಿ ಬಂದಿಲ್ಲ ಎನ್ನುತ್ತಿದ್ದಾರೆ ರೈತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯಾಧಾರಿತ ಕೃಷಿ ಭೂಮಿಯಲ್ಲಿ ಈ ಬಾರಿ ಪ್ರತಿ ಎಕರೆಗೆ ಗರಿಷ್ಠ ಮೂರು ಕ್ವಿಂಟಲ್ ಕಡಲೆ ಇಳುವರಿ ಬಂದರೆ ಹೆಚ್ಚು. ಕಡಲೆ ಬೆಳೆಗೆ ನೀರು ಹಾಯಿಸಿರುವ ರೈತರ ಹೊಲಗಳಲ್ಲಿ 6ರಿಂದ 7 ಕ್ವಿಂಟಲ್ ಇಳುವರಿ ಬರಲಿದೆ ಎನ್ನುವುದು ರೈತರ ಅಭಿಪ್ರಾಯ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 5000ರೂ. ಇದೆ. ಇಳುವರಿ ಕುಸಿತದಿಂದ ರೈತರು ನಷ್ಟ ಅನುಭವಿಸುವಂತಾಗಿದೆ.

ಜಿಲ್ಲೆಯ ಈ ಭಾಗದಲ್ಲಿ ಕಡಲೆಯನ್ನು ವ್ಯಾಪಕವಾಗಿ ಬೆಳೆಯುತ್ತಾರೆ. ಈ ಬಾರಿ 650 ಹೆಕ್ಟೇರ್ ಪ್ರದೇಶದಲ್ಲಿ ಕಡಲೆ ಬೆಳೆಯಲಾಗಿದೆ. ಮಳೆ ಕೊರತೆ ಹವಾಮಾನ ವೈಪರೀತ್ಯದಿಂದ ಇಳುವರಿ ತೀವ್ರ ಕುಸಿದಿದೆ. ಕಳೆದ ಬಾರಿ ಪ್ರತಿ ಎಕರೆಗೆ 8 ಕ್ವಿಂಟಲ್‌ ವರೆಗೆ ಇಳುವರಿ ಬಂದಿತ್ತು ಎನ್ನುತ್ತಾರೆ ಕೃಷಿ ಇಲಾಖೆಯ ಅಧಿಕಾರಿಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...