ದಾವಣಗೆರೆ | ಯುವ ಜನಾಂಗ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಬೇಕು: ಜಿಲ್ಲಾಧಿಕಾರಿ

Date:

ಗಾಂಧೀಜಿಯವರ ಜೀವನವೇ ಒಂದು ಸಂದೇಶವಾಗಿದೆ. ಅವರಿಗೆ ಸತ್ಯ ಹರಿಶ್ಚಂದ್ರನ ಕಥೆ ಸದಾ ಕಾಡುತ್ತಿತ್ತು. ಇಂದಿನ ಯುವ ಜನಾಂಗ ಸತ್ಯಾಸತ್ಯತೆಯನ್ನು ತಿಳಿಯುವ ಪ್ರಯತ್ನ ಮಾಡಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್‌ ಎಂ.ವಿ ಅಭಿಪ್ರಾಯಪಟ್ಟಿದ್ದಾರೆ.

ದಾವಣಗೆರೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ್ದ ‘ಕ್ವಿಟ್ ಇಂಡಿಯಾ ಚಳುವಳಿ ಒಂದು ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಾಂಧೀಜಿ ಅವರು ಸತ್ಯಹರಿಶ್ಚಂದ್ರರ ಕಥೆಯನ್ನು ಓದುತ್ತಿದ್ದರು. ಆದರೆ, ನಮ್ಮ ಯುವಜನಾಂಗ ಹೆಚ್ಚು ಸಾಮಾಜಿಕ ಜಾಲತಾಣಗಳ ಮೇಲೆ ಅವಲಂಭಿತವಾಗಿದ್ದಾರೆ. ಅವುಗಳಲ್ಲಿ ಸತ್ಯವನ್ನು ಮರೆ ಮಾಚುವ ಪ್ರಸಂಗ ಬರಬಾರದು ಮತ್ತು ಸತ್ಯತೆ ಬಗ್ಗೆ ಪರಿಶೀಲನೆಯನ್ನು ಮಾಡಬೇಕು” ಎಂದರು.

“ಸ್ವಾತಂತ್ರ್ಯ ಪೂರ್ವದಲ್ಲಿ 1942ರ ಆಗಸ್ಟ್ 8ರಂದು ಕ್ವಿಟ್ ಇಂಡಿಯಾ ಚಳುವಳಿ ಆರಂಭವಾಗಿತ್ತು. ಕ್ವಿಟ್ ಇಂಡಿಯಾ ಚಳುವಳಿ ಸ್ವಾತಂತ್ರ್ಯ ಗಳಿಸಲು ಸಾಮುದಾಯಿಕ ಚಳುವಳಿಯಾಗಿತ್ತು. ಆಗ ಎಲ್ಲರ ಉದ್ದೇಶ ಒಂದೇ ಆಗಿತ್ತು. ಅದು ಬ್ರಿಟಿಷರನ್ನು ಭಾರತದಿಂದ ತೊಲಗಿಸಿ ಸ್ವಾಂತ್ರಂತ್ರ್ಯ ಗಳಿಸುವುದಾಗಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತಿಹಾಸ ಅಧ್ಯಯನ ಮಾಡದವರು, ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ದೇಶ ಯಾವ ರೀತಿ ಸ್ವಾತಂತ್ರ್ಯವಾಯಿತು ಮತ್ತು ನಂತರದ ಅವಧಿಯಲ್ಲಿ ಜಾರಿಗೆ ಬಂದ ಬಡತನ ನಿರ್ಮೂಲನೆಯಂತಹ ಕಾರ್ಯಕ್ರಮಗಳೇನು? ಹಾಗೂ ಇಂದು ಯಾವ ಹಂತದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿದೆ. ಇದಕ್ಕಾಗಿ ನನ್ನ (ಪ್ರತಿಯೊಬ್ಬರು) ಪಾತ್ರವೇನು ಎನ್ನುವುದನ್ನು ವಿದ್ಯಾರ್ಥಿಗಳು ಅರಿಯಬೇಕಿದೆ” ಎಂದರು.

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮಂಜಣ್ಣ ಮಾತನಾಡಿ, “ನಮಗೆ ಸ್ವಾತಂತ್ರ್ಯ ಒದಗಿಸಿಕೊಡಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ವರ್ಷನುಗಟ್ಟಲೆ ಜೈಲಿನಲ್ಲಿ ತಮ್ಮ ಜೀವನದ ಅತ್ಯಮೂಲ್ಯ ಸಮಯವನ್ನು ಕಳೆಯಬೇಕಾಯಿತು. ಅಂತಹ ಮಹಾ ನಾಯಕರನ್ನು ಸ್ಮರಿಸುವ ದಿನ ಇದಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಜಿಪಂ ಸಿಇಒ ಸುರೇಶ್ ಇಟ್ನಾಳ್, ಪಾಲಿಕೆ ಆಯುಕ್ತ ರೇಣುಕಾ, ಡಿಡಿಪಿಐ ಕೊಟ್ರೇಶ್,ಹಿರಿಯ ಸ್ವಾತಂತ್ರ ಹೋರಾಟಗಾರ ಹೆಚ್‌.ಎಂ ಮರುಳಸಿದ್ದಪ್ಪ, ಎನ್‌.ಎಸ್‌.ಎಸ್‌. ವಿಭಾಗೀಯ ಅಧಿಕಾರಿ ಪ್ರದೀಪ್, ಎನ್.ಸಿ.ಸಿ.ಸುಬೇದಾರ್ ಮಾಲುಂಜಾಕ‌, ಹವಾಲ್ದಾರ್ ಧರ್ಮವೀರ್, ಗ್ರಾಮ ಸ್ವರಾಜ್‌ ಅಭಿಯಾನ್ ದ ಆವರಗೆರೆ ರುದ್ರಮುನಿ, ಸ್ವಾತಂತ್ರ್ಯಯೋಧರ ಉತ್ತರಾಧಿ ಕಾರಿಗಳ ಸಂಘದ ಯುವ ಕಾರ್ಯಕರ್ತೆ ಉಷಾರಾಣಿ, ಚಿತ್ರಿಕಿ ಶಿವಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ತೇಜಸ್ವಿ ಪಟೇಲ್ ಹಾಗೂ ವಿವಿಧ ಕಾಲೇಜಿನ ಉಪನ್ಯಾಸಕರು, ಎನ್.ಸಿ.ಸಿ. ಕೆಡೆಟ್, ಎನ್ ಎಸ್ ಎಸ್ ಸೇವಕರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...