ನಕಲಿ ದಾಖಲೆ ಸೃಷ್ಟಿಸಿ ಕುಲಪತಿಯಾಗಿರುವ ಪ್ರೊ. ತ್ಯಾಗರಾಜ ವಿರುದ್ಧ ಕಾನೂನು ಕ್ರಮಕ್ಕೆ ದವಿಪ ಆಗ್ರಹ

Date:

ನಕಲಿ ಪದವಿ ಹಾಗೂ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಾಡಿನ ಪ್ರತಿಷ್ಠಿತ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಅಲಂಕರಿಸಿರುವ ಆರೋಪ ಹೊತ್ತಿರುವ ಪ್ರೊ. ಸಿ ಎಂ ತ್ಯಾಗರಾಜ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್‌ ವಿಜಯನಗರದಲ್ಲಿ ಪ್ರತಿಭಟನೆ ನಡೆಸಿತು.

ನಗರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಡಾ. ಫ ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ವಿವಿಯ ಕುಲ ಸಚಿವ ಹಾಗೂ ಎಲ್ಲ ಸಿಂಡಿಕೇಟ್ ಸದಸ್ಯರಿಗೆ ಮನವಿ ನೀಡಿದರು. ಇಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳದಿದ್ದರೆ ಹೋರಾಟವನ್ನು ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.

ಈ ವೇಳೆ ಮಾತನಾಡಿದ ದವಿಪ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ, “ಪ್ರೊ. ಸಿ ಎಂ ತ್ಯಾಗರಾಜ ರವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಾಧ್ಯಾಪಕರಾಗಿ ನೇಮಕಗೊಳ್ಳವ ಮುನ್ನ 2007ರಲ್ಲಿ ತಮ್ಮ ಉಪನ್ಯಾಸಕ ಹುದ್ದೆಗೆ ಸ್ವಯಂ ನಿವೃತ್ತಿ ನೀಡಿರುತ್ತಾರೆ. ಸರ್ಕಾರ ಇದನ್ನು ಒಪ್ಪಿದೆ. ಇಷ್ಟಾದರೂ ಇವರಿಗೆ ಪುನಃ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಆಯ್ಕೆ ಮಾಡಿದ್ದು ತಪ್ಪು. ಈಗಾಗಲೇ ಕುಲಪತಿಗಳ ಮೇಲೆ ಹಲವು ಕ್ರಿಮಿನಲ್ ಮೊಕದ್ದಮೆಗಳಿವೆ. ವಿಶ್ವವಿದ್ಯಾಲಯಕ್ಕೆ ಪ್ರಾಧ್ಯಾಪಕರಾಗಲು ಪ್ರೊ. ತ್ಯಾಗರಾಜ ಅವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಸರ್ಕಾರದ ಕಣ್ಣಿಗೆ ಮಣ್ಣೆರಚಿ ಕುಲಪತಿ ಹುದ್ದೆಯನ್ನು ಪಡೆದಿದ್ದಾರೆ. ಇವರ ವಿರುದ್ಧ ಸಭೆಯಲ್ಲಿ ನಿರ್ಣಯ ಕೈಗೊಂಡು, ಕೊಡಲೇ ಅಮಾನತು ಮಾಡಲು ಸರ್ಕಾರಕ್ಕೆ ಮತ್ತು ರಾಜ್ಯ ಪಾಲರಿಗೆ ಆಗ್ರಹಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೊ ತ್ಯಾಗರಾಜ್‌ ಅವರು ಎಂಬಿಎ ಮೊದಲ ಮತ್ತು ಎರಡನೇ ಸೆಮಿಸ್ಟರುಗಳನ್ನು ರಾಯಪುರದ ಡಾ ಸಿ ವಿ ರಾಮನ್‌ ವಿಶ್ವವಿದ್ಯಾಲಯದಿಂದ ಪಡೆದಿದ್ದಾರೆ. ಆದರೆ, ಯುಜಿಸಿ ಪಟ್ಟಿಯಲ್ಲಿ ಈ ಹೆಸರಿನ ವಿವಿಯೇ ಇಲ್ಲ! ಮೂರನೇ ಮತ್ತು ನಾಲ್ಕನೇ ಸೆಮಿಸ್ಟರ್‌ ಅನ್ನು ಬಿಲಾಸ್‌ಪುರ್‌ ಗುರು ಘಾಸಿದಾಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌, ಕಾಮರ್ಸ್‌ ಅಂಡ್‌ ಮ್ಯಾನೇಜ್‌ಮೆಂಟ್‌ ನಿಂದ ದೂರ ಶಿಕ್ಷಣದ ಮೂಲಕ ಪಡೆದಿದ್ದಾರೆ. ಆದರೆ, ಯಾವುದೇ ಪದವಿಯನ್ನು ಭಾಗಶಃ ರೆಗ್ಯುಲರ್‌, ಭಾಗಶಃ ದೂರ ಶಿಕ್ಷಣದ ಮೂಲಕ ಪಡೆಯಲು ಅವಕಾಶ ಇಲ್ಲ. ಇದಲ್ಲದೆ ಇವರು ಜನವರಿ 2005 ರಲ್ಲಿ ಎಲ್ಲಾ ಪರೀಕ್ಷೆಗಳನ್ನು ಬರೆದಿದ್ದಾರೆ ಮತ್ತು 3 ಮತ್ತು 4 ನೇ ಸೆಮಿಸ್ಟರ್ 2005ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಪೂರ್ಣಗೊಂಡಿದೆ. ಆದರೆ ತರಗತಿಯ ದಿನಗಳಲ್ಲಿ ಮತ್ತು ಪರೀಕ್ಷಾ ದಿನಗಳಲ್ಲಿ ಅವರು ಆಚಾರ್ಯ ತುಳಸಿ ನ್ಯಾಷನಲ್ ಕಾಲೇಜ್ ನಲ್ಲಿ ಹಾಜರಿದ್ದರು.

ನಕಲಿ ದಾಖಲೆ ಸೃಷ್ಟಿಸಿ ಕುಲಪತಿಯಾದ ಆರೋಪ ಹೊತ್ತ ಪ್ರೊ. ಸಿ ಎಂ ತ್ಯಾಗರಾಜ ಹಾಗೂ ಪ್ರಕರಣದ ಕುರಿತು ಈದಿನ ಡಾಟ್‌ ಕಾಮ್‌ ವಿವರವಾಗಿ ವರದಿ ಮಾಡಿದೆ. ಲಿಂಕ್‌ ಇಲ್ಲಿದೆ ನಕಲಿ ಅಂಕಪಟ್ಟಿ, ನಕಲಿ ಪದವಿ, ನಕಲಿ ಸೇವಾ ದಾಖಲೆಯ ಆರೋಪಿ ರಾಣಿ ಚೆನ್ನಮ್ಮ ವಿವಿ ಕುಲಪತಿಯಾದದ್ದಾದರೂ ಹೇಗೆ?

ದಲಿತ ವಿದ್ಯಾರ್ಥಿ ಪರಿಷತ್ ಕಳೆದ ವರ್ಷ ವಿಜಯಪುರ ನಗರದಲ್ಲಿರುವ ಎಸ್‌ಎಂಆರ್‌ಕೆ ಬಿಎಡ್ ಕಾಲೇಜು ಮತ್ತು ಕುಮಾರಿ ಮೋನಿಕಾ ಬಸವರಾಜ ಕಣ್ಣಿ ಬಿಎಡ್ ಕಾಲೇಜು ವಿರುದ್ಧ, ʼಹೆಚ್ಚು ಡೊನೇಷನ್ ಪಡೆದು ಗುಣಮಟ್ಟ ಶಿಕ್ಷಣ ನೀಡುತ್ತಿಲ್ಲʼ ಎಂದು ದೂರ ನೀಡಿತ್ತು. ಈ ಬಗ್ಗೆ ವಿಶ್ವವಿದ್ಯಾಲಯ ತನಿಖೆ ಮಾಡಿ ಆರೋಪ ಸಾಬೀತಾದ ಹಿನ್ನೆಲೆ ಎರಡೂ ಕಾಲೇಜುಗಳಿಗೆ 3 ವರ್ಷ ನಿಷೇಧ ಹೇರಿ, 30 ಲಕ್ಷ ದಂಡ ವಿಧಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಣಿ ಚೆನ್ನಮ್ಮ ವಿವಿ ಕುಲಸಚಿವರು ಪ್ರಕಟಿಸಿದರು. ಪ್ರತಿಭಟನಾಕಾರರು ಬಳಿಕ ಪ್ರತಿಭಟನೆಯನ್ನು ಇಲ್ಲಿಗೆ ಮೊಟುಕುಗೊಳಿಸಿದರು.

ಈ ವೇಳೆ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯಕುಮಾರ, ಬೆಳಗಾವಿ ಜಿಲ್ಲಾ ಸಂಚಾಲಕ ಆದರ್ಶ ಗಸ್ತಿ, ಜಿಲ್ಲಾ ಸಹ ಸಂಚಾಲಕ ಮಹಾದೇವ ಚಲವಾದಿ, ವಿಜಯಲಕ್ಷ್ಮಿ ಮುರಗನೂರ, ಪ್ರತಾಪ್, ಪ್ರಜ್ವಲ್, ರಾಜು, ಮುತ್ತು ಪೂಜಾರಿ, ಶಂಕರ ಅಲ್ಲದೇ ಇನ್ನಿತರ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...