ಕೋಲಾರ |ಡಿಸಿಸಿ ಬ್ಯಾಂಕ್‌ ಭ್ರಷ್ಟಾಚಾರ ಸಿಬಿಐಗೆ ಒಪ್ಪಿಸಿ ; ರೈತ ಸಂಘ ಒತ್ತಾಯ

Date:

10 ವರ್ಷಗಳ ಕಾಲ ಲಾಭದಲ್ಲಿದ್ದ ಡಿಸಿಸಿ ಬ್ಯಾಂಕ್‌ ಇದೀಗ 10 ಕೋಟಿ ಸಾಲದ ಸುಳಿಗೆ ಸಿಕ್ಕಿದ್ದಾದರೂ ಹೇಗೆ. ಇದರ ಹಿಂದಿನ ರಹಸ್ಯವೇನು?. ಕೂಡಲೇ ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ, ರೈತರು ಮತ್ತು ಮಹಿಳೆಯರಿಗೆ ಸಾಲ ನೀಡಲು ಅನುಕೂಲ ಕಲ್ಪಿಸಬೇಕು. ಶೀಘ್ರವೇ ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಡಿಸಿಸಿ ಬ್ಯಾಂಕ್‌ ಮುಂದೆ ತಲೆ ಮೇಲೆ ಕಲ್ಲು ಹೊತ್ತು ವಿನೂತನವಾಗಿ ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ, ಜಿಲ್ಲಾಧಿಕಾರಿಗಳು ಚುನಾವಣೆ ನಡೆಸದೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಿದ್ದಾರೆ. ಇದಕ್ಕೆ ಕಾರಣವೇನೂ? ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿ. ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದ ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ತಂದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದರು. ಆದರೀಗ ಬ್ಯಾಂಕನ್ನು ದಿವಾಳಿ ಮಾಡುವ ನಿಟ್ಟಿನಲ್ಲಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ 1.5ಕೋಟಿ ರೂಪಾಯಿಯನ್ನು ವ್ಯವಸ್ಥಾಪಕರು ದುರುಪಯೋಗಪಡಿಸಿಕೊಂಡಿರುವುದು ಸಾಭಿತಾಗಿದ್ದರೂ, ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಲೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಬ್ಯಾಂಕ್ ಅವ್ಯವಸ್ಥೆಯ ವಿರುದ್ಧ ಗುಡುಗಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸೀಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ. ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ. ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...