ಬೆಂಗಳೂರು | ಶಿವರಾಮ ಕಾರಂತ ಬಡಾವಣೆ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

  • ಪ್ರಗತಿಯಲ್ಲಿರುವ ಕಾಮಗಾರಿ ಕಾರ್ಯ ವೀಕ್ಷಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ
  • ಬಡಾವಣೆಯ ಬಳಿ ಐ.ಟಿ. ಹಬ್ ಮಾಡಲು ಜಾಗ ಮೀಸಲಿಡುವಂತೆ ಆದೇಶ

ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಲಹಂಕದಲ್ಲಿರುವ ಡಾ. ಕೆ. ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪ್ರಗತಿಯಲ್ಲಿರುವ ಕಾಮಗಾರಿಯ ಕಾರ್ಯವನ್ನು ವೀಕ್ಷಿಸಿದ ಅವರು, ಕೆಲವೊಂದು ಮಾರ್ಪಾಡು ಮಾಡುವ ಬಗ್ಗೆ ಸಲಹೆಗಳನ್ನು ನೀಡಿದರು.

ಶಿವರಾಮ ಕಾರಂತ ಬಡಾವಣೆಯಲ್ಲಿ ಜಮೀನು ನೀಡಿರುವ ರೈತರು, ಭೂಮಾಲೀಕರುಗಳಿಗೆ ಆದ್ಯತೆಯ ಮೇರೆಗೆ ಪರಿಹಾರವನ್ನು ನೀಡುವ ಬಗ್ಗೆಯೂ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡಾವಣೆಯಲ್ಲಿ ವಸತಿ ಬೆಳವಣಿಗೆಯೊಂದಿಗೆ ವಾಣಿಜ್ಯ ಚಟುವಟಿಕೆಗಳಿಗೂ ಅವಕಾಶವನ್ನು ಕಲ್ಪಿಸಿಕೊಡುವಂತೆ ಸೂಚಿಸಿದ ಅವರು, ಉದ್ಯಾನವನ, ನಾಗರಿಕ ಸೌಲಭ್ಯ ನಿವೇಶನ ಹಾಗೂ ಕ್ರೀಡಾಂಗಣಕ್ಕೆ ಮೀಸಲಿಟ್ಟಿರುವ ಸುಮಾರು 45 ಎಕರೆ ಜಾಗವು ವಾಣಿಜ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಸ್ತೆ ಅಗಲೀಕರಣಗೊಳಿಸುವಂತೆ ಸೂಚಿಸಿದರು.

45 ಮೀಟರ್ ರಸ್ತೆ ಸಮೀಪ ಯಾರಿಗೂ ನಿವೇಶನವನ್ನು ಹಂಚಿಕೆ ಮಾಡದೇ, ವಾಣಿಜ್ಯ ಉದ್ದೇಶಕ್ಕೆ ಭೂಮಿ ಬಳಕೆ ಆಗಬೇಕು. ಅಲ್ಲದೇ, ಈ ಬಡಾವಣೆಯಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಹಾದುಹೋಗುವ ಮಾರ್ಗವನ್ನು ಕೂಡ ಪರಿಶೀಲಿಸಿದರು.

ಬಡಾವಣೆಯ ಬಳಿ ಐ.ಟಿ. ಹಬ್ ಮಾಡಲು ಜಾಗವನ್ನು ಮೀಸಲಿಡುವಂತೆ ಉಪಮುಖ್ಯಮಂತ್ರಿ ಆದೇಶಿಸಿದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಅಧ್ಯಕ್ಷ ರಾಕೇಶ್ ಸಿಂಗ್, ಆಯುಕ್ತ ಜಿ. ಕುಮಾರ ನಾಯಕ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಅಭಿಯಂತರ ಸದಸ್ಯರಾದ ಶಾಂತರಾಜಣ್ಣ, ವೈ.ಬಿ. ಶಾಂತರಾಜು, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಕವಿತಾ ಯೋಗಪ್ಪನವರ್, ನಿಖಿತಾ ಎಂ. ಚಿನ್ನಸ್ವಾಮಿ, ಡಾ. ಹರೀಶ್ ನಾಯ್ಕ, ಎಸ್.ಎಂ. ಸಹನಾ, ಕೆ.ಎನ್. ಪ್ರವೀಣ್, ಡಾ. ನಂದಿನಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...