ನೈಸ್‌ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟ ಡಿಸಿಎಂ ಡಿ ಕೆ ಶಿವಕುಮಾರ್:‌ ಎಚ್‌ ಡಿ ಕುಮಾರಸ್ವಾಮಿ ಆರೋಪ

Date:

  • ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಲಿ: ಆಗ್ರಹ
  • ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ: ಟೀಕೆ

ನೈಸ್ ಯೋಜನೆಗೆ ಎಚ್‌ ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಡಿ ಕೆ ಶಿವಕುಮಾರ್‌ ಅವರದ್ದು ಧ್ಯಾನಸ್ಥ ಮೌನ ಯಾಕೆ” ಎಂದು ಪ್ರಶ್ನಿಸಿದ್ದಾರೆ.

“ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಲು ದಿಟ್ಟ ಹೆಜ್ಜೆ ಇಡಿ. ‘ಸಿದ್ದ ನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ. ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು” ಎಂದು ಕಿಡಿ ಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯ ಅವರೇ ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ರಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

“ನಾನು ರೈತರ ಸಾಲ ಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ” ಎಂದು ಕುಟುಕಿದ್ದಾರೆ.

“ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ನುಡಿದಂತೆ ನಡೆಯಿರಿ: ಸವಾಲು

“ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರವಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸಿ” ಎಂದು ಸವಾಲು ಹಾಕಿದ್ದಾರೆ.

“ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ” ಎಂದು ಟೀಕಿಸಿದೆ.

“ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ” ಎಂದು ಕುಟುಕಿದ್ದಾರೆ.

ಬೆಲೆ ಏರಿಕೆ ಗ್ಯಾರಂಟಿ

“ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...